ಧಾರವಾಡದಲ್ಲೂ ಮಳೆ ಆರ್ಭಟ; ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ
ಧಾರವಾಡ, ಆಗಸ್ಟ್ 07: ಧಾರವಾಡ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಶೀತ ಗಾಳಿಯೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದೆ. ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ ಕೆರೆ ತುಂಬಿ ಹರಿದು ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
Recommended Video
ನಿರಂತರ ಮಳೆಯಿಂದಾಗಿ ಕಲಘಟಗಿಯ ಗಂಜಿಗಟ್ಟಿ ಕೆರೆ ಕೋಡಿ ಬಿದ್ದಿದ್ದು, ಬಾಲಕಿ ತನ್ನ ತಾಯಿಯ ಜೊತೆ ಹೊಲಕ್ಕೆ ತೆರಳುತ್ತಿದ್ದ ಸಂದರ್ಭ ಕಾಲು ಜಾರಿ ಬಿದ್ದಿದ್ದಾಳೆ. ರಸ್ತೆಯ ಮೇಲೆ ಹರಿಯುತ್ತಿದ್ದ ನೀರಿನ ರಭಸಕ್ಕೆ ಬಾಲಕಿ ನೀರಲ್ಲಿ ಕೊಚ್ಚಿ ಹೋಗಿದ್ದಾಳೆ. ಆಕೆಯನ್ನು ಮೇಲೆತ್ತಲು ಸ್ಥಳೀಯರು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ.
ಕಲಘಟಗಿ ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿಯ ಜೊತೆಗೆ ಎನ್ಡಿಆರ್ ಎಫ್ ತಂಡ ಮೃತದೇಹ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದೆ. ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮತ್ತು ತಹಶೀಲ್ದಾರ್ ಅಶೋಕ್ ಶಿಗ್ಗಾವಿ ಅವರು ಬಾಲಕಿ ಶ್ರೀದೇವಿ ಮನೆಗೆ ಭೇಟಿ ನೀಡಿ ತಂದೆ- ತಾಯಿಗೆ ಸಾಂತ್ವನ ಹೇಳಿದ್ದಾರೆ.

ಧಾರವಾಡದಲ್ಲಿ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಹುಬ್ಬಳ್ಳಿಯ ಉಣಕಲ್ಲ ಕೆರೆಯೂ ಕೋಡಿ ಬಿದ್ದಿದ್ದು, ಮಳೆಯಿಂದಾಗಿ ಪ್ರವಾಹದ ಭೀತಿ ಎದುರಾಗಿದೆ. ಹಳೇ ಹುಬ್ಬಳ್ಳಿ ಭಾಗದ ಮನೆಗಳು ಮುಳುಗಡೆ ಭೀತಿಯಲ್ಲಿವೆ. ಪ್ರವಾಹದ ರಭಸಕ್ಕೆ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಯೂ ನಾಶವಾಗಿವೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications