ತಾಯಿಗೆ ನ್ಯಾಯ ದೊರಕಿಸಿಕೊಟ್ಟ 14ರ ಹರೆಯದ ಬಾಲಕಿ
ಧಾರವಾಡ, ಡಿಸೆಂಬರ್ 30: ಶಿಕ್ಷಣವೇ ಶಕ್ತಿ ಎಂಬ ಮಾತಿಗೆ ಪುಷ್ಠಿ ನೀಡುವಂತಹಾ ಘಟನೆ ಧಾರವಾಡದಲ್ಲಿ ನಡೆದಿದೆ. ಎಂಟನೇ ತರಗತಿ ವಿದ್ಯಾರ್ಥಿಯೊಬ್ಬಾಕೆ ಅನ್ಯಾಯಕ್ಕೊಳಗಾಗಿದ್ದ ತನ್ನ ತಾಯಿಗೆ ನ್ಯಾಯಾಲಯದಿಂದ ತ್ವರಿತವಾಗಿ ನ್ಯಾಯ ದೊರಕುವಂತೆ ಮಾಡಿದ್ದಾಳೆ. ಇದು ಸಾಧ್ಯವಾಗಿದ್ದು ತರಗತಿಯಲ್ಲಿ ಆಕೆ ಕೇಳಿದ ಪಾಠದಿಂದ.
ನಗರದ ಪ್ರೆಸೆಂಟೇಶನ್ ಬಾಲಕಿಯರ ಪ್ರೌಢಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿರುವ ರೇಖಾ ಮೈಸೂರು ತನ್ನ ತಾಯಿಗೆ ಆಗಿರುವ ಅನ್ಯಾಯದ ಕುರಿತು ನ್ಯಾಯಾಧೀಶರಿಗೆ ಪತ್ರ ಬರೆದು ದುಷ್ಕರ್ಮಿಗಳು ಮಾಡಿರುವ ಅನ್ಯಾಯವನ್ನು ಸಾಕ್ಷಿ ಸಮೇತ ಅವರ ಗಮನಕ್ಕೆ ತಂದಿದ್ದಾಳೆ.

ತಮ್ಮ ತಾಯಿಯ ಹೆಸರಿನಲ್ಲಿರುವ ಜಮೀನನ್ನು ನಕಲಿ ದಾಖಲೆ ಸೃಷ್ಠಿಸಿ ಕೆಲವರು ತಮ್ಮ ಹೆಸರಿಗೆ ಮಾಡಿಸಿಕೊಳ್ಳುವ ಹುನ್ನಾರ ಮಾಡಿದ್ದರು. ಇದನ್ನು ಅರಿತ ಬಾಲಕಿ ರೇಖಾ ಜಿಲ್ಲಾ ನ್ಯಾಯಾಧೀಶರಿಗೆ ಪತ್ರ ಬರೆದು ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಳು.
'ನಾನು ಮತ್ತು ನನ್ನ ಅಕ್ಕ ಇನ್ನೂ ಅಪ್ರಾಪ್ತರಿದ್ದೇವೆ ಆದರೆ ನಾವು ಜಮೀನು ಮಾರುವುದಕ್ಕೆ ಒಪ್ಪಿರುವುದಾಗಿ ನಕಲಿ ಸಹಿ ಮಾಡಿ ನಕಲಿ ದಾಖಲೆ ಸೃಷ್ಠಿಸಲಾಗಿದೆ ಎಂದು ರೇಖಾ ತನ್ನ ಪತ್ರದಲ್ಲಿ ಹೇಳಿದ್ದಳು.
ರೇಖಾಳ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶ ರಾಮಚಂದ್ರ ಹುದ್ದಾರ ಅವರು ಸ್ಥಳೀಯ ಪೊಲೀಸರಿಗೆ ತನಿಖೆಗೆ ಆದೇಶಿಸಿ, ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಕಾರ್ಯ ನಿರ್ವಹಿಸಿದ ಪೊಲೀಸರು ಈಗ ನಕಲಿ ದಾಖಲೆ ಸೃಷ್ಠಿಸಿದ್ದ ಅಜೀಜ್ ಸಾಬ್ ನಿಂದ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡಿದ್ದಾರೆ.
ರೇಖಾ ಅವರ ಶಾಲೆಯಲ್ಲಿ ಇತ್ತೀಚೆಗೆ ಕಾನೂನು ಅರಿವು ಕುರಿತು ವಿಶೇಷ ತರಗತಿ ನಡೆದಿತ್ತು, ಅದನ್ನು ಗಂಭೀರವಾಗಿ ಕೇಳಿದ್ದ ರೇಖಾ ಪಾಠದಲ್ಲಿನ ಅಂಶಗಳನ್ನು ತನ್ನ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಬಳಸಿಕೊಂಡಿದ್ದಾಳೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications