JDS ಅಧಿಕಾರಕ್ಕೆ ಬಂದ್ರೆ ನೀರಿನ ಸಮಸ್ಯೆಗೆ ಇತಿಶ್ರೀ: HDK

ಧಾರವಾಡ, ಜುಲೈ 24 : ಮಹದಾಯಿ ಸಮಸ್ಯೆಗೆ ಪರ್ಯಾಯ ಆಲೋಚನೆ ಮಾಡುವಲ್ಲಿ ಸರ್ಕಾರ ಎಡವಿದ್ದು, ಈ ಸಮಸ್ಯೆ ನಿವಾರಣೆಗೆ ಕೃಷ್ಣ ನದಿಯಲ್ಲಿ ರಾಜ್ಯಕ್ಕೆ ಲಭ್ಯವಿರುವ ನೀರನ್ನು ಬಳಕೆ ಮಾಡಿಕೊಳ್ಳಲು ಅವಕಾಶವಿದ್ದರೂ ರಾಜ್ಯ ಸರ್ಕಾರ ಆ ಬಗ್ಗೆ ಚಿಂತನೆ ನಡೆಸಿಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡದ ಜೆಎಸ್ ಎಸ್ ಕಾಲೇಜಿನ ಸನ್ನಿಧಿ ಕಲಾಕ್ಷೇತ್ರದಲ್ಲಿ ಜುಲೈ 23ರಂದು ಆಯೋಜಿಸಲಾಗಿದ್ದ 'ಕುಮಾರಪಥ-2018'ರ ಅಂಗವಾಗಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಸಾರ್ವಜನಿಕರೊಂದಿಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿ,

Government has failed to utilize water from Krishna river allocated by the tribunal-HDK

ಕೃಷ್ಣ ನದಿಯ ಆಲಮಟ್ಟಿ ಜಲಾಶಯದಿಂದ ರಾಜ್ಯಕ್ಕೆ ಲಭ್ಯವಿರುವ 1000 ಟಿಎಂಸಿ ಅಡಿ ನೀರಿನಲ್ಲಿ ಕೇವಲ 600 ಟಿಎಂಸಿ ಅಡಿ ನೀರನ್ನು ಮಾತ್ರ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಉಳಿದ 400 ಟಿಎಂಸಿ ನೀರು ವ್ಯರ್ಥವಾಗಿ ಹರಿಯುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷ್ಣ ನದಿಯ ಎ, ಬಿ ಸ್ಕೀಂ ಜಾರಿಗೊಳಿಸಿ ನೀರಿನ ಸಮಸ್ಯೆಗೆ ಇತಿಶ್ರೀ ಹಾಡಲಾಗುವುದು ಎಂದೂ ಅವರು ಭರವಸೆ ನೀಡಿದರು.

ಜೆಡಿಎಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಆಡಳಿತವನ್ನು ತಿಂಗಳಲ್ಲಿ ಒಂದು ವಾರ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಶಿಫ್ಟ್ ಮಾಡಲಾಗುವುದು ಎಂದರು.

ಅಲ್ಲದೆ ಕೆಲವೊಂದು ಇಲಾಖೆಗಳನ್ನು ಬೆಳಗಾವಿಗೆ ಶಾಶ್ವತವಾಗಿ ಸ್ಥಳಾಂತರ ಮಾಡಲಾಗುವುದು. ಸರ್ಕಾರವನ್ನು ಜನ ಸಾಮಾನ್ಯರ ಬಳಿಗೆ ತೆಗೆದುಕೊಂಡು ಹೋಗಲು ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಾಣ ಮಾಡಲಾಯಿತು. ಆದರೆ, ಅದು ಸದುಪಯೋಗ ಆಗುತ್ತಿಲ್ಲ ಎಂದು ಅಸಮದಾನ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+