ಮಹದಾಯಿ ಹೋರಾಟಗಾರರ ಮೇಲೆ ಕೇಸು, ಮಾತು ತಪ್ಪಿದ ಸರ್ಕಾರ
ಧಾರವಾಡ, ಫೆಬ್ರವರಿ 15: ಮಹದಾಯಿ ಹೋರಾಟಗಾರರ ಮೇಲೆ ಹಾಕಿರುವ ಕೇಸುಗಳನ್ನು ವಾಪಾಸ್ ಪಡೆಯುವುದಾಗಿ ಭರವಸೆ ನೀಡಿದ್ದ ರಾಜ್ಯ ಸರ್ಕಾರ ಈಗ ಮಾತು ತಪ್ಪಿ ಹೊಸ ಕೇಸೊಂದನ್ನು ದಾಖಲಿಸಿದೆ.
ಸರ್ಕಾರಿ ಆಸ್ತಿ ಪಾಸ್ತಿ ಹಾನಿ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟಗಾರರ ಮೇಲೆ ನವಲುಗುಂದ ನ್ಯಾಯಾಲಯದಲ್ಲಿ ಸ್ಥಳೀಯ ಆಡಳಿತದಿಂದ ಕೇಸು ದಾಖಲಾಗಿದೆ.
ಪ್ರಕರಣ ಸಂಬಂಧ ನವಲಗುಂದ ಜೆಎಂಎಫ್ಸಿ ನ್ಯಾಯಾಲಯದಿಂದ ಮಹದಾಯಿ ಹೋರಾಟದ ಮುಂಚೂಣಿಯಲ್ಲಿರುವ ಲೋಕನಾಥ್ ಹೆಬಸೂರ ಸೇರಿದಂತೆ 13 ಮಂದಿಗೆ ಸಮನ್ಸ್ ಜಾರಿಯಾಗಿದೆ.
ಫೆ.17 ರಂದು 13 ಜನರೂ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ.
Comments
English summary
Government registers another case against Mahadayi activists for damaging the public property. Navalagunda JMFC court has issued summons to 13 mahadayi activists and ordered to attend court on February 17 without fail.
Story first published: Thursday, February 15, 2018, 15:43 [IST]