ಧಾರವಾಡ: 30 ವರ್ಷ ಸೇವೆ ಪೂರೈಸಿ ಸ್ವಾಗ್ರಾಮಕ್ಕೆ ಆಗಮನಿಸಿದ ವೀರ ಯೋಧನಿಗೆ ಅದ್ಧೂರಿ ಸ್ವಾಗತ
ಧಾರವಾಡ, ಆಗಸ್ಟ್, 01: ದೇಶದ ಗಡಿಭಾಗದಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸಿದ ಸೈನಿಕನನ್ನು ಅದ್ಧೂರಿಯಾಗಿ ಸ್ವಾಗತಿಸಿದ ಘಟನೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ.
ನರೇಂದ್ರ ಗ್ರಾಮದ ಮಲ್ಲಿಕಾರ್ಜುನಗೌಡ ಪಾಟೀಲ್ ಸತತ 30 ವರ್ಷಗಳಿಂದ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದಾರೆ. ಭಾರತೀಯ ಸೇನೆಯ ಮೇಜರ್ ಸುಬೇದಾರ್ ಹುದ್ದೆಯಿಂದ ನಿವೃತ್ತಿ ಹೊಂದಿದ ನಂತರ ಗ್ರಾಮಕ್ಕೆ ಆಗಮಿಸಿದ ಹೆಮ್ಮೆಯ ಯೋಧನನ್ನು ನರೇಂದ್ರ ಗ್ರಾಮಸ್ಥರು ಮೆರವಣಿಗೆ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

ಧಾರವಾಡ ರೈಲು ನಿಲ್ದಾಣದ ಮೂಲಕ ತಾಯ್ನಾಡಿಗೆ ಬಂದ ನಿವೃತ್ತ ಸೈನಿಕ ಮಲ್ಲಿಕಾರ್ಜುನಗೌಡ ಅವರನ್ನು ಜೈ ಜವಾನ್ ಜೈ ಕಿಸಾನ್ ಎಂದು ಘೋಷಣೆ ಕೂಗುತ್ತಾ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ. ಈ ವೇಳೆ ನರೇಂದ್ರ ಗ್ರಾಮದ ಮಾಜಿ ಸೈನಿಕರು ಕೂಡ ಅವರನ್ನು ಬರಮಾಡಿಕೊಂಡರು.
ಇದೇ ವೇಳೆ ಮಾತನಾಡಿದ ನಿವೃತ್ತ ಯೋಧ ಮಲ್ಲಿಕಾರ್ಜುನಗೌಡ ಪಾಟೀಲ, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಯಕ್ಕೆ ಸೇರಬೇಕು, ಭಾರತ ಮಾತೆಗೆ ಸೇವೆ ಸಲ್ಲಿಸಿ ದೇಶ ಭಕ್ತಿ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಭಾರತ ಮಾತೆಗೆ ಸೇವೆ ಸಲ್ಲಿಸಿ ಧಾರವಾಡಕ್ಕೆ ಮರಳಿದ ಸೈನಿಕ ಮಲ್ಲಿಕಾರ್ಜುನಗೌಡ ಪಾಟೀಲ ಅವರಿಗೆ ಅದ್ಧೂರಿಯಾಗಿ ಸ್ವಾಗತಿಸಿ ಅವರನ್ನು ಗೌರವಿಸುವ ಕೆಲಸ ಮಾಡಲು ಹೆಮ್ಮೆ ಎನಿಸುತ್ತದೆ. ಯುವ ಜನರಿಗೆ ಅವರ ಸ್ಪೂರ್ತಿ ತುಂಬುವ ಚಿಲುಮೆಯಾಗಿದ್ದಾರೆ. ಅಲ್ಲದೆ ಯುವಕರಲ್ಲಿ ದೇಶಾಭಿಮಾನ ಮೂಡಿಸುವ ಕೆಲಸ ಇನ್ನಷ್ಟು ಆಗಲಿದೆ ಎಂದು ಮಾಜಿ ಸೈನಿಕರು ಹಾಗೂ ಗ್ರಾಮಸ್ಥರು ತಿಳಿಸಿದರು.
ಇನ್ನು ಗ್ರಾಮಕ್ಕೆ ಬಂದ ಯೋಧ ಮಲ್ಲಿಕಾರ್ಜುನಗೌಡ ಅವರನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದ ಮೇಲೆ ಸಂಭ್ರಮದಿಂದ ಮೆರವಣಿಗೆ ಮಾಡಲಾಯಿತು. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಊರಿನ ಹೆಮ್ಮೆಯ ಪುತ್ರನನ್ನು ಸನ್ಮಾನಿಸಿ ಗೌರವಿಸಲಾಯಿತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications