ಧಾರವಾಡ ಜಿಲ್ಲೆಯ ಜನರಿಗೆ ಎಚ್1 ಎನ್1 ಭೀತಿ
ಧಾರವಾಡ, ಸೆಪ್ಟಂಬರ್, 15: ಕಳೆದ ಹಲವಾರು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರವಾಹದಿಂದ ಕಂಗೆಟ್ಟಿರುವ ಧಾರವಾಡ ಜಿಲ್ಲೆಯ ಜನರಿಗೆ ಇದೀಗ ಎಚ್1 ಎನ್1 ಭೀತಿ ಎದುರಾಗಿದೆ.
ಮೊದಲೇ ಕುಂಭದ್ರೋಣ ಮಳೆಗೆ ಧಾರವಾಡ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಮನೆ, ಜಮೀನುಗಳು ಜಲಾವೃತವಾಗಿದ್ದು, ಜನರು ಅಕ್ಷರಶಃ ನಲುಗಿ ಹೋಗಿದ್ದರು. ಬೆಳೆಗಳು ಸಂಪೂರ್ಣ ಜಲಾವೃತವಾಗಿದ್ದು, ರೈತರು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಮತ್ತೊದೆಡೆ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿ ಸಂಗ್ರಹವಾದ ಮಳೆ ನೀರನ್ನು ಹೊರಹಾಕಲು ಜನರು ಹರಸಾಹಸ ಪಡುತ್ತಿದ್ದಾರೆ. ಇದರ ಮಧ್ಯೆ ಭಯಾನಕ ಖಾಯಿಲೆಯೊಂದು ಒಕ್ಕರಿಸಿ ಜಿಲ್ಲೆಯ ಜನರು ಕಂಗಾಲಾಗಿ ಹೋಗಿದ್ದಾರೆ.
ಮೊದಲೇ ಮಳೆ ಹಾಗೂ ಜಲ ಪ್ರಳಯದಿಂದ ಮನೆಮಠಗಳನ್ನು ಕಳೆದುಕೊಂಡು ಬೀದಿಪಾಲಾಗಿರುವ ಜನರು ಒಪ್ಪತ್ತಿನ ಗಂಜಿಗಾಗಿ ಪರದಾಡುತ್ತಿದ್ದಾರೆ. ಈ ಸಮಯದಲ್ಲೇ ಜಿಲ್ಲೆಯ ಜನರಲ್ಲಿ ಎಚ್1ಎನ್1 ಭೀತಿ ಹುಟ್ಟಹಾಕಿದೆ. ಜಿಲ್ಲೆಯಾದ್ಯಂತ ಎಚ್1 ಎನ್1 ಭೀತಿ ಹೆಚ್ಚಾಗಿದ್ದು, ಜನರಿಗೆ ಮತ್ತೊಂದು ಶಾಕ್ ಎದುರಾದಂತಿದೆ. 2022ರ ಜನವರಿಯಿಂದ ಆಗಸ್ಟ್ 31ರವರೆಗೆ ಒಟ್ಟು 100 ಜನರ ರಕ್ತದ ಮಾದರಿಗಳನ್ನು ಸಂಗ್ರಹ ಮಾಡಲಾಗಿತ್ತು. ಇದರಲ್ಲಿ 7 ಪಾಸಿಟಿವ್ ಪ್ರಕರಣಗಳು ಪತ್ತೆ ಆಗಿದ್ದವು. ಆದರೆ ಈ ಸೋಂಕಿನಿಂದ ರೋಗಿಗಳು ಮೃತಪಟ್ಟಿರುವುದು ಇಲ್ಲಿಯವರೆಗೂ ಖಚಿತಪಟ್ಟಿಲ್ಲ.

ಎಚ್1 ಎನ್1 ರೋಗ ಲಕ್ಷಣಗಳು
ತೀವ್ರ ಜ್ವರ, ವಾಂತಿ-ಭೇದಿ, ಕೆಮ್ಮು, ಹಳದಿ ಕಫ, ನೆಗಡಿ ಮತ್ತು ಗಂಟಲು ಕೆರೆತ, ಉಸಿರಾಟದ ತೊಂದರೆ ಉಂಟಾಗುವುದು ಎಚ್1 ಎನ್1 ರೋಗದ ಸಾಮಾನ್ಯ ಲಕ್ಷಣಗಳಾಗಿವೆ. ರೋಗ ನಿರೋಧಕ ಶಕ್ತಿ ಕುಗ್ಗಿದವರಲ್ಲಿ ಈ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ಚಿಕಿತ್ಸೆ ಪಡೆದಿದ್ದಾರೆ. ಬಹಳಷ್ಟು ಜನರು ತೀವ್ರ ಜ್ವರ, ಕೆಮ್ಮು, ವಾಂತಿ-ಭೇದಿಯಿಂದ ನರಳಿದ್ದಾರೆ. ಈಗಲೂ ಕೂಡ ಈಗೂ ಹೆಚ್ಚಿನ ಜನರು ಚಿಕಿತ್ಸೆ ಪಡೆಯುತ್ತಲೇ ಇದ್ದಾರೆ.

ಧಾರವಾಡದಲ್ಲಿ ಎಚ್1 ಎನ್1 ಭೀತಿ
ಹಲವು ವೈದ್ಯರು ರೋಗಿಗಳ ರಕ್ತ ಪರೀಕ್ಷೆ ಮಾಡಿಸಲು ಸೂಚಿಸಿದಾಗ ಎಚ್1 ಎನ್1 ಪ್ರಕರಣಗಳು ಇರುವುದು ಗೊತ್ತಾಗಿದೆ. ರೋಗ ಲಕ್ಷಣ ಇರುವುದು ಗೊತ್ತಾದ ತಕ್ಷಣ ರೋಗಿಗಳಿಗೆ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ಗಳನ್ನು ರಚಿಸಲಾಗಿದೆ ಎನ್ನುವ ಮಾಹಿತಿಯೊಂದು ಹೊರಬಿದ್ದಿದೆ. ಆರೋಗ್ಯದ ಬಗ್ಗೆ ಸ್ವಲ್ಪ ನಿರ್ಲಕ್ಷ್ಯ ವಹಿಸಿದರೂ, ಸಾವು ಎದುರಾಗುವ ಸಾಧ್ಯತೆಗಳು ಹೆಚ್ಚಿದೆ ಎಂದು ವೈದ್ಯರ ಮೂಲಗಳು ತಿಳಿಸಿವೆ. ಮೊದಲೇ ಭಾರಿ ಮಳೆಯಿಂದ ಕಂಗೆಟ್ಟಿರುವ ಧಾರವಾಡ ಜಿಲ್ಲೆಯ ಜನರಿಗೆ ಈ ಮಹಾಮಾರಿ ಮತ್ತಷ್ಟು ಆತಂಕವನ್ನು ಸೃಷ್ಟಿ ಮಾಡಿದೆ. ಕೂಡಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ಇಲ್ಲಿನ ಜನರ ಆಗ್ರಹವಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications