Get Updates
Get notified of breaking news, exclusive insights, and must-see stories!

Pendrive Prajwal: ಇದು ಹೇಸಿಗೆಯ ಕೆಲಸ, ಪ್ರಜ್ವಲ್ ಕ್ಷಮೆಗೆ ಅರ್ಹನಲ್ಲ: ಪ್ರಹ್ಲಾದ್ ಜೋಶಿ ಹೇಳಿದ್ದೇನು?

ಧಾರವಾಡ, ಜೂನ್ 01: ಒಂದು ತಿಂಗಳ ಬಳಿಕ ವಿದೇಶದಿಂದ ವಾಪಾಸ್ ಆದ ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಎಸ್‌ಐಟಿ ವಶಕ್ಕೆ ನೀಡಲಾಗಿದೆ. ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು. ಪ್ರಜ್ವಲ್ ರೇವಣ್ಣ ಕ್ಷಮಿಸಲಾರದಂತಹ ಅಪರಾಧ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹಾಸನದ ಅಶ್ಲೀಲ ಪೆನ್‌ಡ್ರೈವ್ ಪ್ರಕರಣ ಕುರಿತು ಸುದ್ದಿಗಾರರ ಜತೆ ಶನಿವಾರ ಧಾರವಾಡದಲ್ಲಿ ಮಾತನಾಡಿದ ಅವರು, ಇದೊಂದು ಗಂಭೀರ ಪ್ರಕರಣವಾಗಿದ್ದು, ಪ್ರಜ್ವಲ್‌ರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಭಾರತದಲ್ಲಿ ನಾವು ಮಹಿಳೆಯರನ್ನು ಹೆಚ್ಚು ಗೌರವದಿಂದ ಕಾಣುತ್ತೇವೆ. ಇಂತಹ ಸಮಾಜದಲ್ಲಿ ಈ ರೀತಿಯ ಘಟನೆ ನಡೆದಿರುವುದು ಹೇಸಿಗೆ ಹುಟ್ಟಿಸುವಂತಾಗಿದೆ ಮನಸ್ಸಿಗೆ ಕಿರಿಕಿರಿ ಆಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

Hassan Pen Drive Case Prajwal Revanna Not Deserve for Apology Pralhad Joshi

ಪೆನ್‌ಡ್ರೈವ್ ಪ್ರಕರಣವನ್ನು ಅತ್ಯಂತ ಕಟ್ಟುನಿಟ್ಟಾಗಿ ತನಿಖೆಗೆ ಒಳಪಡಿಸಬೇಕು. ಈ ನಿಟ್ಟಿನಲ್ಲಿ ನ್ಯಾಯಾಂಗ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಲಿದೆ ಅನ್ನೋ ಭರವಸೆ ಇದೆ. ತ್ವರಿತ ಗತಿಯಲ್ಲಿ ತನಿಖೆ ಮುಗಿಸಿ ಗರಿಷ್ಠ ಶಿಕ್ಷೆ ಕೊಡುವಂತಾಗಬೇಕು ಎಂದು ಅವರು ಒತ್ತಾಯಿಸಿದರು.

ಪ್ರಜ್ವಲ್ ಕ್ಷಮೆ ಕೇಳಿದ ಕೂಡಲೇ ಬಿಟ್ಟು ಬಿಡಬೇಕೆ?

ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಜ್ಯದ ಜನರ ಕ್ಷಮೆ ಕೇಳಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆರೋಪಿ ಸ್ಥಾನದಲ್ಲಿದ್ದವರು ಕ್ಷಮೆ ಕೇಳಿದ ಕೂಡಲೇ ಬಿಟ್ಟು ಬಿಡಲು ಆಗುವುದಿಲ್ಲ. ಯಾಕೆ ಕ್ಷಮೆ ಕೇಳಿದರು ಎಂದು ಪ್ರಜ್ವಲ್ ಉತ್ತರ ಕೊಡಲಿ.

ಅವರು ಕ್ಷಮೆ ಕೇಳುವುದಿದ್ದರೆ ಸಂತ್ರಸ್ಥರನ್ನು ಕ್ಷಮೆ ಕೇಳಲಿ. ಪ್ರಜ್ವಲ್ ರೇವಣ್ಣಗೆ ಆಗುವ ಶಿಕ್ಷೆ ಆಗಲೇಬೇಕು. ಪೆನ್ ಡ್ರೈವ್ ಹಂಚಿಕೆ ಇತ್ಯಾದಿಗಳನ್ನು ನೋಡಿದಾಗ ಪ್ರಜ್ವಲ್ ಕ್ಷಮೆಗೆ ಅರ್ಹರಲ್ಲ ಎಂದು ಜೋಶಿಯವರು ಪುನರುಚ್ಚರಿಸಿದರು.

ಸಚಿವರನ್ನು ಬಂಧಿಸಲು ಒತ್ತಾಯ

ವಾಲ್ಮೀಕ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ, ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಪ್ರತಿಕ್ರಿಯಿಸಿರುವ ಪ್ರಹ್ಲಾದ್ ಜೋಶಿ, ಸಚಿವ ನಾಗೇಂದ್ರ ಅವರಿಂದ ರಾಜೀನಾಮೆ ಪಡೆದು ಬಂಧಿಸಬೇಕು. ನಿಗಮದಲ್ಲಿ ನಡೆದಿರುವುದು ಬಹುದೊಡ್ಡ ಹಗರಣ. ರಾಜ್ಯ ಸರ್ಕಾರದ ಹಗರಣದಲ್ಲಿ ಸಂಪೂರ್ಣವಾಗಿ ಭಾಗಿಯಾಗಿದೆ ಎಂದು ಅವರು ಆರೋಪಿಸಿದರು.

Hassan Pen Drive Case Prajwal Revanna Not Deserve for Apology Pralhad Joshi

ಯಾವ ಕಾರಣಕ್ಕೆ ನಿಗಮದ ಹಣ ಬೇರೆ ಖಾತೆಗೆ ವರ್ಗಾವಣೆ ಆಯಿತು ಅಂತ ಸರ್ಕಾರ ಹೇಳಿಲ್ಲ. ಆ ಹಣವನ್ನು ತೆಲಂಗಾಣ ಚುನಾವಣೆಗೆ ಬಳಸಿಕೊಳ್ಳಲಾಗಿದೆ. ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳದೆ ಇದ್ದಲ್ಲಿ ಈ ಹಗರಣ ಮುಚ್ಚಿ ಹೋಗುತ್ತಿತ್ತು ಎಂದರು.

ಇದು ದಪ್ಪ ಚರ್ಮದ ಸರ್ಕಾರ

ಹಗರಣದ ಹೊಣೆ ಹೊತ್ತು ಮಂತ್ರಿ ರಾಜೀನಾಮೆ ಕೊಟ್ಟಿಲ್ಲ. ಅಷ್ಟರಮಟ್ಟಿಗೆ ಇದು ದಪ್ಪ ಚರ್ಮದ ಸರ್ಕಾರ. ಸಚಿವ ನಾಗೇಂದ್ರ ಕೂಡಲೇ ರಾಜೀನಾಮೆ ಕೊಡಬೇಕು. ನಾಗೇಂದ್ರ ನನ್ನು ಬಂಧಿಸಿ ವಿಚಾರಣೆಗೆ ಗುರಿಪಡಿಸಬೇಕು. ಯೂನಿಯನ್ ಬ್ಯಾಂಕಿನ ಅಧಿಕಾರಿಗಳು ಆವರಣದಲ್ಲಿ ಭಾಗಿಯಾಗಿದ್ದಾರೆ. ಸರ್ಕಾರಿ ದುಡ್ಡನ್ನು ಹೊಡೆದು ಚುನಾವಣೆಗೆ ಬಳಸುವಂತಹ ವ್ಯವಸ್ಥಿತ ಷಡ್ಯಂತ್ರ ಇದಾಗಿದೆ ಎಂದು ಅವರು ವಿವರಿಸಿದರು.

ಈಶ್ವರಪ್ಪ ಕೇಸ್‌ಗೂ, ಈ ಕೇಸ್‌ಗೂ ವ್ಯತ್ಯಾಸವಿದೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಮತ್ತಿತರರನ್ನು ಪ್ರಕರಣದ ಸಂಬಂಧ ವಿಚಾರಣೆಗೆ ಗುರಿಪಡಿಸಬೇಕು. ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಬ್ಯಾಂಕ್ ನ ಹಗರಣ ಸಾಮಾನ್ಯವಾಗಿ ಸಿಬಿಐಗೆ ಹೋಗುತ್ತದೆ. ಇಷ್ಟು ದೊಡ್ಡ ಹಗರಣ ಆಗಿರುವುದರಿಂದ ರಾಜ್ಯ ಸರ್ಕಾರವೇ ಸಿಬಿಐಗೆ ರೆಫರ್ ಮಾಡಬೇಕು.

ಈಶ್ವರಪ್ಪ ಪ್ರಕರಣಕ್ಕೂ ಈ ಹಗರಣಕ್ಕೂ ಬಹಳ ವ್ಯತ್ಯಾಸವಿದೆ. ಈಶ್ವರಪ್ಪ ಪ್ರಕರಣದಲ್ಲಿ ಯಾವುದೇ ದಾಖಲೆಗಳಿರಲಿಲ್ಲ. ಈ ಪ್ರಕರಣದಲ್ಲಿ ಹಣಕಾಸು ವರ್ಗಾವಣೆಯ ದಾಖಲೆಗಳಿವೆ ಎಂದು ಅವರು ತಿರುಗೇಟು ನೀಡಿದರು.

ಕೂಡಲೇ ಸಚಿವ ನಾಗೇಂದ್ರನನ್ನು ಬಂಧಿಸಬೇಕು, ರಾಜೀನಾಮೆ ಪಡೆಯಬೇಕು. ಕಾಂಗ್ರೆಸ್ ಪಕ್ಷದಲ್ಲಿ 100 ಪರ್ಸೆಂಟ್ ಬ್ರಷ್ಟಾಚಾರದಲ್ಲಿದೆ. ಗುತ್ತಿಗೆದಾರನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂತೋಷ್ ಪಾಟೀಲ್ ಮಾದರಿಯಲ್ಲಿ ಆತ್ಮಹತ್ಯೆ ಆಗಿದೆ ಎಂದು ಹೇಳಿದರು.

ಸದ್ಯ ಮೇ 30ರಂದು ತಡರಾತ್ರಿ ವಿದೇಶದಿಂದ ಬೆಂಗಳೂರಿಗೆ ತಡರಾತ್ರಿ ಬಂದ ಪ್ರಜ್ವಲ್ ರೇವಣ್ಣ, ಮರುದಿನ ಶುಕ್ರವಾರ ವಿಶೇಷ ನ್ಯಾಯಾಲಯದ ಮುಂದೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಹಾಜರುಪಡಿಸಿ, ಆರು ದಿನ ಎಸ್‌ಐಟಿ ವಶಕ್ಕೆ ನೀಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+