ಕುಂದಗೋಳದಲ್ಲಿ ಭಾರೀ ಮಳೆ: ಮತದಾನಕ್ಕೂ ಮೊದಲೇ ಸೋರುತಿದೆ ಮತಗಟ್ಟೆ
ಧಾರವಾಡ, ಮೇ 09: ಪ್ರಜಾಪ್ರಭುತ್ವದ ಹಬ್ಬ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನಕ್ಕೂ ಮುನ್ನವೇ ಮತಗಟ್ಟೆಯ ಸೂರೊಂದು ಸೊರುತ್ತಲಿದೆ. ನಾಳೆ ಮೇ.10 ರಂದು ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕಿನ ಕಡಪಟ್ಟಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ಮತಗಟ್ಟೆ ಎರಡು ಬೂತ್ ನಿರ್ಮಾಣ ಮಾಡಲಾಗಿದೆ.
ಅದರಲ್ಲಿ ಬೂತ್ ಒಂದರ ಶಾಲೆಯ ಮಾಳಿಗೆ ಸೋಮವಾರ ಮಧ್ಯಾಹ್ನ ಸುರಿದ ಮಳೆಗೆ ಮತಗಟ್ಟೆ ಸೋರುತ್ತಿದೆ. ಕೊಠಡಿಯೊಳಗೆ ಸಂಪೂರ್ಣ ನೀರು ಮಯವಾಗಿದ್ದು, ಮೇಲ್ಛಾವಣಿಯಿಂದ ಹನಿ ಹನಿ ನೀರು ತೊಟ್ಟಿಕ್ಕುತ್ತಿದೆ. ಇನ್ನು ಕೊಠಡಿಯ ಗೋಡೆಗಳು ಕಿಟಕಿಗಳು ಹಸಿ ಹಸಿಯಾಗಿವೆ.

ಇತ್ತ ಒಂದೇಡೆ ಮೂಲೆಯಲ್ಲಿ ಮತಗಟ್ಟೆಗೆ ಆಗಮಿಸಿದ ಅಧಿಕಾರಿಗಳು ಮತಯಂತ್ರ ಜೋಡಿಸುವ ಹಾಗೂ ಸಾಮಗ್ರಿ ಹೊಂದಿಸಿಕೊಳ್ಳುವಲ್ಲಿ ನಿರತರಾಗಿದ್ದು, ನಾಳೆ ಜೋರಾದ ಮಳೆಯಾದಲ್ಲಿ ಮತದಾನದ ಬೂತ್ ಒಳಗೆ ನೀರು ಸೇರಲಿದೆ. ಸದ್ಯ ಮತದಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಅಧಿಕಾರಿಗಳು ಸೊರುವ ಶಾಲೆ, ಗೋಡೆ ಮೇಲೆ ಸಿಮೇಂಟ್ ತೆಪೆ ಕಂಡು ಬಂದರೂ ಯಾಕೆ ? ನಿಷ್ಕಾಳಜಿ ತೋರಿದ್ದಾರೆ ಎಂಬುದರ ಬಗ್ಗೆ ಚುನಾವಣೆ ಅಧಿಕಾರಿ ತಹಶೀಲ್ದಾರ ಗಮನ ಹರಿಸಬೇಕಿದೆ ಎನ್ನುವುದು ಸ್ಥಳೀಯರ ಅಭಿಪ್ರಾಯವಾಗಿದೆ.
ವರುಣನ ಅಬ್ಬರಕ್ಕೆ ಧರೆಗುರುಳಿದ ಮರ: ಸಂಚಾರ ವ್ಯತ್ಯಯ...!
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗೆ ಉರುಳಿದ್ದು, ಸಂಚಾರ ವ್ಯತ್ಯಯವಾಗಿದೆ. ಹುಬ್ಬಳ್ಳಿಯ ಕೇಶ್ವಾಪೂರದಲ್ಲಿ ವರುಣನ ಅಬ್ಬರಕ್ಕೆ ಮರವೊಂದು ಧರೆಗೆ ಉರುಳಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಏಕಾಏಕಿ ಸುರಿದ ಭಾರೀ ಮಳೆಗೆ ರಸ್ತೆಗಳು ಜವಾವೃತವಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ಅಕಾಲಿಕವಾಗಿ ಸುರಿದ ವರುಣನ ಅಬ್ಬರಕ್ಕೆ ಹುಬ್ಬಳ್ಳಿಯ ಜನರು ನಲುಗಿ ಹೋಗಿದ್ದಾರೆ. ಸತತವಾಗಿ ಎರಡು ಗಂಟೆಗೂ ಅಧಿಕ ಕಾಲ ಸುರಿದ ಮಳೆಯಿಂದ ಕೆಲವೊಂದು ಭಾಗಗಳಲ್ಲಿ ಹಾನಿವುಂಟಾಗಿದೆ. ಅದೇ ರೀತಿ ಗಾಳಿ, ಗುಡುಗು ಮಳೆಯಿಂದ ನಗರದ ಸುಳ್ಳ ರಸ್ತೆ ಕೇಶ್ವಾಪೂರದಲ್ಲಿ ಬೃಹತ್ ಬೇವಿನ ಮರವೊಂದ ಧರೆಗುರುಳಿದೆ. ಇದರಿಂದಾಗಿ ಕೆಲ ಸಮಯ ಸಂಚಾರ ವ್ಯತ್ಯಯವಾಗಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಹುಬ್ಬಳ್ಳಿಗೂ ತಟ್ಟಿದ ಯುದ್ಧದ ಬಿಸಿ; ಗ್ಯಾಸ್ ಇಲ್ಲದೆ ಮಂಗಳವಾರ ರಾತ್ರಿಯಿಂದಲೇ ಹೋಟೆಲ್ಗಳು ಬಂದ್ ಸಾಧ್ಯತೆ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
NWKRTC ನೇಮಕಾತಿ: ಏಪ್ರಿಲ್ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್










Click it and Unblock the Notifications