ಕುಂದಗೋಳದಲ್ಲಿ ಭಾರೀ ಮಳೆ: ಮತದಾನಕ್ಕೂ ಮೊದಲೇ ಸೋರುತಿದೆ ಮತಗಟ್ಟೆ
ಧಾರವಾಡ, ಮೇ 09: ಪ್ರಜಾಪ್ರಭುತ್ವದ ಹಬ್ಬ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನಕ್ಕೂ ಮುನ್ನವೇ ಮತಗಟ್ಟೆಯ ಸೂರೊಂದು ಸೊರುತ್ತಲಿದೆ. ನಾಳೆ ಮೇ.10 ರಂದು ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕಿನ ಕಡಪಟ್ಟಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ಮತಗಟ್ಟೆ ಎರಡು ಬೂತ್ ನಿರ್ಮಾಣ ಮಾಡಲಾಗಿದೆ.
ಅದರಲ್ಲಿ ಬೂತ್ ಒಂದರ ಶಾಲೆಯ ಮಾಳಿಗೆ ಸೋಮವಾರ ಮಧ್ಯಾಹ್ನ ಸುರಿದ ಮಳೆಗೆ ಮತಗಟ್ಟೆ ಸೋರುತ್ತಿದೆ. ಕೊಠಡಿಯೊಳಗೆ ಸಂಪೂರ್ಣ ನೀರು ಮಯವಾಗಿದ್ದು, ಮೇಲ್ಛಾವಣಿಯಿಂದ ಹನಿ ಹನಿ ನೀರು ತೊಟ್ಟಿಕ್ಕುತ್ತಿದೆ. ಇನ್ನು ಕೊಠಡಿಯ ಗೋಡೆಗಳು ಕಿಟಕಿಗಳು ಹಸಿ ಹಸಿಯಾಗಿವೆ.

ಇತ್ತ ಒಂದೇಡೆ ಮೂಲೆಯಲ್ಲಿ ಮತಗಟ್ಟೆಗೆ ಆಗಮಿಸಿದ ಅಧಿಕಾರಿಗಳು ಮತಯಂತ್ರ ಜೋಡಿಸುವ ಹಾಗೂ ಸಾಮಗ್ರಿ ಹೊಂದಿಸಿಕೊಳ್ಳುವಲ್ಲಿ ನಿರತರಾಗಿದ್ದು, ನಾಳೆ ಜೋರಾದ ಮಳೆಯಾದಲ್ಲಿ ಮತದಾನದ ಬೂತ್ ಒಳಗೆ ನೀರು ಸೇರಲಿದೆ. ಸದ್ಯ ಮತದಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಅಧಿಕಾರಿಗಳು ಸೊರುವ ಶಾಲೆ, ಗೋಡೆ ಮೇಲೆ ಸಿಮೇಂಟ್ ತೆಪೆ ಕಂಡು ಬಂದರೂ ಯಾಕೆ ? ನಿಷ್ಕಾಳಜಿ ತೋರಿದ್ದಾರೆ ಎಂಬುದರ ಬಗ್ಗೆ ಚುನಾವಣೆ ಅಧಿಕಾರಿ ತಹಶೀಲ್ದಾರ ಗಮನ ಹರಿಸಬೇಕಿದೆ ಎನ್ನುವುದು ಸ್ಥಳೀಯರ ಅಭಿಪ್ರಾಯವಾಗಿದೆ.
ವರುಣನ ಅಬ್ಬರಕ್ಕೆ ಧರೆಗುರುಳಿದ ಮರ: ಸಂಚಾರ ವ್ಯತ್ಯಯ...!
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗೆ ಉರುಳಿದ್ದು, ಸಂಚಾರ ವ್ಯತ್ಯಯವಾಗಿದೆ. ಹುಬ್ಬಳ್ಳಿಯ ಕೇಶ್ವಾಪೂರದಲ್ಲಿ ವರುಣನ ಅಬ್ಬರಕ್ಕೆ ಮರವೊಂದು ಧರೆಗೆ ಉರುಳಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಏಕಾಏಕಿ ಸುರಿದ ಭಾರೀ ಮಳೆಗೆ ರಸ್ತೆಗಳು ಜವಾವೃತವಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ಅಕಾಲಿಕವಾಗಿ ಸುರಿದ ವರುಣನ ಅಬ್ಬರಕ್ಕೆ ಹುಬ್ಬಳ್ಳಿಯ ಜನರು ನಲುಗಿ ಹೋಗಿದ್ದಾರೆ. ಸತತವಾಗಿ ಎರಡು ಗಂಟೆಗೂ ಅಧಿಕ ಕಾಲ ಸುರಿದ ಮಳೆಯಿಂದ ಕೆಲವೊಂದು ಭಾಗಗಳಲ್ಲಿ ಹಾನಿವುಂಟಾಗಿದೆ. ಅದೇ ರೀತಿ ಗಾಳಿ, ಗುಡುಗು ಮಳೆಯಿಂದ ನಗರದ ಸುಳ್ಳ ರಸ್ತೆ ಕೇಶ್ವಾಪೂರದಲ್ಲಿ ಬೃಹತ್ ಬೇವಿನ ಮರವೊಂದ ಧರೆಗುರುಳಿದೆ. ಇದರಿಂದಾಗಿ ಕೆಲ ಸಮಯ ಸಂಚಾರ ವ್ಯತ್ಯಯವಾಗಿದೆ.
-
Bengaluru Rain: ಸುಡುವ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿನ ಹಲವೆಡೆ ತುಂತುರು ಮಳೆ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ












Click it and Unblock the Notifications