ಧಾರವಾಡ; ಒಡೆದ ಹೊಲ್ತಿಕೋಟಿ ಕೆರೆ ಶಾಶ್ವತ ದುರಸ್ತಿ
ಧಾರವಾಡ, ನವೆಂಬರ್ 19; ಧಾರವಾಡದ ಹೊಲ್ತಿಕೋಟಿ ಗ್ರಾಮದ ಕೆರೆ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿದೆ. ಕೆರೆಯ ನೀರು ನುಗ್ಗಿದ ಪರಿಣಾಮ ರೈತರ ಬೆಳೆಗಳಿಗೆ ಹಾನಿಯಾಗಿದೆ. ಕೆರೆಯ ಶಾಶ್ವತ ದುರಸ್ತಿಗೆ ಆದ್ಯತೆ ನೀಡಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದರು.
ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕೆರೆ ಒಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸದ್ಯ ಸೂಕ್ತ ತಾಂತ್ರಿಕತೆಯೊಂದಿಗೆ ಪೋಲಾಗುತ್ತಿರುವ ನೀರನ್ನು ತಡೆಯಲು ಪ್ರಯತ್ನಿಸಲಾಗುವುದು ಎಂದರು.
ಈಗಾಗಲೇ ಕೆರೆ ಒಡೆದು ನೀರು ಪೋಲಾಗುತ್ತಿದೆ. ಮುಂಬರುವ ಎರಡು, ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ರೈತರು ಅಗತ್ಯ ಎಚ್ಚರಿಕೆಗಳನ್ನು ವಹಿಸಬೇಕು ಎಂದು ಸಚಿವರು ಹೇಳಿದರು.

ಸುಮಾರು 110 ಮಿ. ಮೀ. ಪ್ರಮಾಣದ ಮಳೆಯಾದ ಪರಿಣಾಮವಾಗಿ ಹೊಲ್ತಿಕೋಟಿ ಕೆರೆಗೆ ಒಳಹರಿವು ಹೆಚ್ಚಾಗಿದೆ. ಪರಿಣಾಮ ಕೆರೆಯ ತಡೆಗೋಡೆ ಒಡೆದು ಸುಮಾರು 27 ಎಕರೆ ವಿಸ್ತಾರದ ಕೆರೆಯಲ್ಲಿ ಸಂಗ್ರಹವಾಗಿದ್ದ ದೊಡ್ಡ ಪ್ರಮಾಣದ ನೀರು ಪೋಲಾಗಿದೆ.
ಕೆರೆ ನೀರು ನುಗ್ಗಿದ ಪರಿಣಾಮ ಸುಮಾರು 300 ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು, ಭತ್ತದ ಬೆಳೆಗೆ ಹಾನಿಯಾಗಿದೆ. ಜಿಲ್ಲೆಯ ಕುಂದಗೋಳ, ನವಲಗುಂದ, ಹುಬ್ಬಳ್ಳಿ, ಕಲಘಟಗಿ ತಾಲೂಕುಗಳಲ್ಲಿಯೂ ಕೂಡ ಮಳೆಯಿಂದ ಹತ್ತಿ ಬೆಳೆಗೆ ಹಾನಿಯಾಗಿದೆ ಎಂದು ಸಚಿವರು ತಿಳಿಸಿದರು.
ಪ್ರಸ್ತುತ ರಾಜ್ಯದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸಮೀಕ್ಷೆ ಮಾಡಲು ಸೂಚಿಸಲಾಗಿದೆ. ಬೆಳೆ ಹಾಗೂ ಮನೆಗಳ ಹಾನಿಗೊಳಗಾದವರಿಗೆ ಸಮೀಕ್ಷೆ ವರದಿ ಆಧರಿಸಿ ಪರಿಹಾರ ಒದಗಿಸಲಾಗುವುದು ಎಂದರು.

30 ವರ್ಷಗಳ ಹಿಂದೆ ಒಡೆದಿತ್ತು; ಹೊಲ್ತಿಕೋಟಿ ಕೆರೆಯು 30 ವರ್ಷಗಳ ಹಿಂದೆ ಒಂದು ಬಾರಿ ಒಡೆದಿತ್ತು ಎಂಬುದನ್ನು ಸ್ಥಳೀಯ ರೈತರು ಹೇಳಿದ್ದಾರೆ. ಕೆರೆಯ ಶಾಶ್ವತ ದುರಸ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ.
ಹೊಲ್ತಿಕೋಟಿ ಟೆನೆಂಟ್ ಫಾರ್ಮಿಂಗ್ ಸೊಸೈಟಿಯ ಹೆಸರಿನ ಮಾಲೀಕತ್ವದಲ್ಲಿರುವ ಸುಮಾರು 220 ಎಕರೆ ಭೂಮಿಯನ್ನು ರೈತರಿಗೆ ಹೆಸರಿಗೆ ವರ್ಗಾಯಿಸಲು ಸ್ಥಳೀಯರ ಬೇಡಿಕೆ ಇದೆ. ಅಗತ್ಯ ದಾಖಲೆಗಳನ್ನು ಪಡೆದು ವರ್ಗಾಯಿಸಲು ಕಂದಾಯ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನೂ 2-3 ದಿನಗಳ ಕಾಲ ಮುಂದುವರೆಯುವ ಸಾಧ್ಯತೆಗಳಿರುವುದರಿಂದ ರೈತರು ಹೊಲ-ಗದ್ದೆಗಳಿಗೆ ತೆರಳುವಾಗ, ಹಳ್ಳ-ಕೊಳ್ಳಗಳನ್ನು ದಾಟುವ ಮುನ್ನ ತೀವ್ರ ಎಚ್ಚರಿಕೆ ವಹಿಸಬೇಕು. ಮಳೆ ಬೀಳುವಾಗ ಸುರಕ್ಷಿತ ಸ್ಥಳಗಳಲ್ಲಿ ಇರಬೇಕು ಎಂದು ಸಚಿವರು ಮನವಿ ಮಾಡಿದರು.
ಮುಂದುವರೆದ ಮಳೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭತ್ತ ಸೇರಿದಂತೆ ಕಟಾವಿಗೆ ಬಂದಿರುವ ಬೆಳೆಗಳಿಗೆ ಹಾನಿಯಾಗಿದೆ. ಶುಕ್ರವಾರ ಸಹ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹುಬ್ಬಳ್ಳಿಯಲ್ಲಿ ಗುರುವಾರ ಬೆಳಗ್ಗೆಯಿಂದ ಜಿಟಿ-ಜಿಟಿ ಮಳೆ ಸುರಿಯಿತು. ತಾಲೂಕಿನ ಬೆಳಗಲಿ ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆಯ ಆವರಣಕ್ಕೆ ನೀರು ನುಗ್ಗಿತ್ತು. ತರಗತಿಗಳಿಗೆ ಹೋಗುವ ಮೆಟ್ಟಿಲಿನ ತನಕ ನೀರು ನಿಂತಿತ್ತು.
ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೋವಿಡ್ ಪರಿಸ್ಥಿತಿ ಬಳಿಕ ಶಾಲೆಗಳು ಆರಂಭವಾಗಿವೆ. ಮಕ್ಕಳು ಮಳೆಯಲ್ಲಿಯೇ ಶಾಲೆಗೆ ಆಗಮಿಸುತ್ತಿದ್ದಾರೆ. ಆದರೆ ಮಳೆಯಿಂದಾಗಿ ಶಾಲೆಗಳಿಗೆ ಆಗಮಿಸುವುದಕ್ಕೆ ತೊಂದರೆ ಉಂಟಾಗಿದೆ.
ವಿವಿಧ ಜಿಲ್ಲೆಗಳಲ್ಲಿ ಮಳೆ ಹಿನ್ನಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲೆಗಳಿಗೆ ರಜೆ ಘೋಷಣೆ ಮಾಡುವ ಕುರಿತು ಗುರುವಾರ ಆದೇಶ ಹೊರಡಿಸಿದೆ. ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿ ರಜೆ ಘೋಷಿಸುವ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.
-
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ












Click it and Unblock the Notifications