ಸದಾನಂದ ಗೌಡರನ್ನು ಸಂಪುಟದಿಂದ ಕೈಬಿಡಿ : ಹಿರೇಮಠ್
ಧಾರವಾಡ, ಜೂ.11 : ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್.ಹಿರೇಮಠ ಒತ್ತಾಯಿಸಿದ್ದಾರೆ. ಯಡಿಯೂರಪ್ಪ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದಿರುವುದಕ್ಕೆ ಅವರು ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಧಾರವಾಡದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಎಸ್.ಆರ್.ಹಿರೇಮಠ, ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಆರೋಪ ಹೊತ್ತಿರುವ ಕೇಂದ್ರ ರೈಲ್ವೇ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.

ಎಚ್ಎಸ್ಆರ್ ಲೇಔಟ್ನಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದ ಪ್ರಕರಣ ಸದಾನಂದ ಗೌಡರ ವಿರುದ್ಧವಿದೆ. ಈ ಕುರಿತು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದ್ದು, ಈಗಾಗಲೇ ಕರ್ನಾಟಕ ಹೈಕೋರ್ಟ್ ಸದಾನಂದ ಗೌಡರು ದೋಷಿ ಎಂದು ತೀರ್ಪು ನೀಡಿದೆ ಎಂದರು.
ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಬಿ.ಎಸ್.ಯಡಿಯೂರಪ್ಪ ಅವರನ್ನು ನರೇಂದ್ರ ಮೋದಿ ಅವರು ಸಂಪುಟಕ್ಕೆ ಸೇರಿಸಿಕೊಂಡಿಲ್ಲ. ಇದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಾಗೆಯೇ ಅಧಿಕಾರ ದುರುಪಯೋಗ ಆರೋಪವಿರುವ ಸದಾನಂದ ಗೌಡರನ್ನು ಸಂಪುಟದಿಂದ ಕೈಬಿಡಲಿ ಎಂದು ಹಿರೇಮಠ್ ಒತ್ತಾಯಿಸಿದರು.
ಏನಿದು ಪ್ರಕರಣ : ಬೆಂಗಳೂರಿನ ಹೆಚ್ಎಸ್ಆರ್ ಲೇ ಔಟ್ನಲ್ಲಿ ಬಿಡಿಎ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಸದಾನಂದ ಗೌಡ, ಶಾಸಕ ಜೀವರಾಜ್ ರವರಿಗೆ ಸೇರಿದ ಜಂಟಿ ನಿವೇಶನಗಳನ್ನು ಸೇರಿಸಿಕೊಂಡು ಕಮರ್ಷಿಯಲ್ ಕಟ್ಟಡ ನಿರ್ಮಿಸುತ್ತಿದ್ದಾರೆಂದು ನಾಗಲಕ್ಷ್ಮೀ ಬಾಯಿ ಎಂಬವರು ಹೈಕೋರ್ಟ್ನಲ್ಲಿ ದೂರು ದಾಖಲಿಸಿದ್ದರು.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications