ಹುಬ್ಬಳ್ಳಿಗರೇ ಗ್ಯಾಲರಿಯಲ್ಲೇ ಕುಳಿತು ಕೆಪಿಎಲ್ ನೋಡಿ
ಹುಬ್ಬಳ್ಳಿ, ಜೂನ್, 23: ನಗರದಲ್ಲಿ ಇನ್ನು ಒಂದೂವರೆ ವರ್ಷದಲ್ಲಿ ಸುಸಜ್ಜಿತ ಪ್ರೇಕ್ಷಕರ ಗ್ಯಾಲರಿ ನಿರ್ಮಾಣಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಧಾರವಾಡ ವಲಯ ನಿಯಂತ್ರಕ ಬಾಬಾ ಬೂಸದ ಹೇಳಿದ್ದಾರೆ.
ಅವರು ಇಲ್ಲಿನ ರಾಜನಗರ ಕೆಎಸ್ ಸಿಎ ಕ್ರೀಡಾಂಗಣದಲ್ಲಿ ಒಂದನೇ ಹಂತದ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.[ಕಳಸಾ ಬಂಡೂರಿ: ಜುಲೈ 14ಕ್ಕೆ ಉತ್ತರ ಕರ್ನಾಟಕ ಬಂದ್]

ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಮ್ಯಾಚ್ ಗಳು ಬೆಂಗಳೂರಿನ ಬದಲು ಈ ಬಾರಿ ಹುಬ್ಬಳ್ಳಿಯಲ್ಲಿ ನಡೆಯುವುದು ನಿರ್ಧಾರವಾಗಿದೆ. ಹೀಗಾಗಿ ಆದಷ್ಟು ಬೇಗ ಕಾಮಗಾರಿಗಳನ್ನು ಮುಗಿಸಿ ಕೆಪಿಎಲ್ ಮ್ಯಾಚ್ ಗೆ ಮೈದಾನವನ್ನು ಸಜ್ಜು ಮಾಡಲಾಗುತ್ತದೆ ಎಂದರು.
ಸುಮಾರು 22.7 ಕೋಟಿ ರೂ.ಗಳ ವೆಚ್ಚದಲ್ಲಿ ಮೊದಲನೇ ಹಂತದ ಕಾಮಗಾರಿ ಆರಂಭವಾಗುತ್ತಿದ್ದು, ಚೆನ್ನೈನ ಆರ್.ಕೃಷ್ಣಮೂರ್ತಿ ಎಂಬ ಕಂಪನಿಯು ಕಾಮಗಾರಿಯ ಗುತ್ತಿಗೆ ಪಡೆದಿದೆ ಎಂದರು.[ಬೌಲಿಂಗ್ ಪ್ರತಿಭೆಗಳನ್ನು ಗುರುತಿಸಲು ಹೊಸ ಕ್ರಿಕೆಟ್ ಫೌಂಡೇಶನ್]

ಕ್ರೀಡಾಂಗಣದ ಪ್ರೇಕ್ಷಕರ ಗ್ಯಾಲರಿಯ ಮೂರು ಅಂತಸ್ತಗಳಾಗಲಿದ್ದು, ಕೆಳಗಡೆ 600 ವಾಹನಗಳಿಗೆ ಪಾರ್ಕಿಂಗ್, ಮಧ್ಯದಲ್ಲಿ ಮತ್ತು ಮೇಲಂತಸ್ತಿನಲ್ಲಿ ಪ್ರೇಕ್ಷಕರ ಗ್ಯಾಲರಿಗಳಿರಲಿವೆ ಎಂದರು.
ಒಟ್ಟು 18 ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು ಕ್ರೀಡಾಂಗಣದಲ್ಲಿ ಕ್ರಿಕೆಟ್ ನೋಡಬಹುದಾಗಿದೆ. ಪತ್ರಕರ್ತರಿಗೆ ವಿಶೇಷ ಮಿಡೀಯಾ ಮತ್ತು ಬ್ರಾಡಕಾಸ್ಟಿಂಗ್ ಬಾಕ್ಸ್, 18 ಐಷಾರಾಮಿ ವಿಐಪಿ ದರ್ಜೆಯ ರೂಮುಗಳಿರಲಿವೆ. ಜೊತೆಗೆ ಸ್ವಿಮ್ಮಿಂಗ್ ಫೂಲ್, ಜಿಮ್, ಬ್ಯಾಡ್ಮಿಂಟನ್ ಗ್ರೌಂಡ್, ಎರಡು ರೆಸ್ಟೋರೆಂಟ್ ಗಳು, ಟೇಬಲ್ ಟೆನ್ನಿಸ್ ಗ್ರೌಂಡ್ ಮುಂತಾದ ಸೌಲಭ್ಯಗಳಿರಲಿವೆ ಎಂದರು.

16.95 ಎಕರೆ ಪ್ರದೇಶಗಳಲ್ಲಿ ನಿರ್ಮಾಣವಾಗುತ್ತಿರುವ ಈ ಕಾಮಗಾರಿಯು ಜನಾರ್ದನ ರೆಡ್ಡಿ ಎಂಬ ಎಂಜಿನಿಯರ್ ಅವರ ನೇತೃತ್ವದಲ್ಲಿ ನೆರವೇರಲಿದೆ. ಮೊದಲ ಹಂತದಲ್ಲಿ 8750 ಚದುರಡಿ ಕಾಮಗಾರಿ ನಡೆಯಲಿದೆ ಎಂದರು.
ಉತ್ತರ ಭಾಗದ ಪೆವಿಲಿಯನ್ ಕಾಮಗಾರಿಯೂ ಇದರಲ್ಲಿ ಸೇರಿರುವುದರಿಂದ ಅಂಪೈರ್ ರೂಮ್ ಮತ್ತು ಇತರೆ ಅವಶ್ಯಕತೆಗಳೆಲ್ಲವನ್ನೂ ಸುವ್ಯವಸ್ಥಿತವಾಗಿ ಕಲ್ಪಿಸಲಾಗುವುದು ಎಂದರು. ಶಿವಾನಂದ ಗುಂಜಾಳ ಮತ್ತಿತರರು ಉಪಸ್ಥಿತರಿದ್ದರು.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications