ಹುಬ್ಬಳ್ಳಿಗರೇ ಗ್ಯಾಲರಿಯಲ್ಲೇ ಕುಳಿತು ಕೆಪಿಎಲ್ ನೋಡಿ
ಹುಬ್ಬಳ್ಳಿ, ಜೂನ್, 23: ನಗರದಲ್ಲಿ ಇನ್ನು ಒಂದೂವರೆ ವರ್ಷದಲ್ಲಿ ಸುಸಜ್ಜಿತ ಪ್ರೇಕ್ಷಕರ ಗ್ಯಾಲರಿ ನಿರ್ಮಾಣಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಧಾರವಾಡ ವಲಯ ನಿಯಂತ್ರಕ ಬಾಬಾ ಬೂಸದ ಹೇಳಿದ್ದಾರೆ.
ಅವರು ಇಲ್ಲಿನ ರಾಜನಗರ ಕೆಎಸ್ ಸಿಎ ಕ್ರೀಡಾಂಗಣದಲ್ಲಿ ಒಂದನೇ ಹಂತದ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.[ಕಳಸಾ ಬಂಡೂರಿ: ಜುಲೈ 14ಕ್ಕೆ ಉತ್ತರ ಕರ್ನಾಟಕ ಬಂದ್]

ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಮ್ಯಾಚ್ ಗಳು ಬೆಂಗಳೂರಿನ ಬದಲು ಈ ಬಾರಿ ಹುಬ್ಬಳ್ಳಿಯಲ್ಲಿ ನಡೆಯುವುದು ನಿರ್ಧಾರವಾಗಿದೆ. ಹೀಗಾಗಿ ಆದಷ್ಟು ಬೇಗ ಕಾಮಗಾರಿಗಳನ್ನು ಮುಗಿಸಿ ಕೆಪಿಎಲ್ ಮ್ಯಾಚ್ ಗೆ ಮೈದಾನವನ್ನು ಸಜ್ಜು ಮಾಡಲಾಗುತ್ತದೆ ಎಂದರು.
ಸುಮಾರು 22.7 ಕೋಟಿ ರೂ.ಗಳ ವೆಚ್ಚದಲ್ಲಿ ಮೊದಲನೇ ಹಂತದ ಕಾಮಗಾರಿ ಆರಂಭವಾಗುತ್ತಿದ್ದು, ಚೆನ್ನೈನ ಆರ್.ಕೃಷ್ಣಮೂರ್ತಿ ಎಂಬ ಕಂಪನಿಯು ಕಾಮಗಾರಿಯ ಗುತ್ತಿಗೆ ಪಡೆದಿದೆ ಎಂದರು.[ಬೌಲಿಂಗ್ ಪ್ರತಿಭೆಗಳನ್ನು ಗುರುತಿಸಲು ಹೊಸ ಕ್ರಿಕೆಟ್ ಫೌಂಡೇಶನ್]

ಕ್ರೀಡಾಂಗಣದ ಪ್ರೇಕ್ಷಕರ ಗ್ಯಾಲರಿಯ ಮೂರು ಅಂತಸ್ತಗಳಾಗಲಿದ್ದು, ಕೆಳಗಡೆ 600 ವಾಹನಗಳಿಗೆ ಪಾರ್ಕಿಂಗ್, ಮಧ್ಯದಲ್ಲಿ ಮತ್ತು ಮೇಲಂತಸ್ತಿನಲ್ಲಿ ಪ್ರೇಕ್ಷಕರ ಗ್ಯಾಲರಿಗಳಿರಲಿವೆ ಎಂದರು.
ಒಟ್ಟು 18 ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು ಕ್ರೀಡಾಂಗಣದಲ್ಲಿ ಕ್ರಿಕೆಟ್ ನೋಡಬಹುದಾಗಿದೆ. ಪತ್ರಕರ್ತರಿಗೆ ವಿಶೇಷ ಮಿಡೀಯಾ ಮತ್ತು ಬ್ರಾಡಕಾಸ್ಟಿಂಗ್ ಬಾಕ್ಸ್, 18 ಐಷಾರಾಮಿ ವಿಐಪಿ ದರ್ಜೆಯ ರೂಮುಗಳಿರಲಿವೆ. ಜೊತೆಗೆ ಸ್ವಿಮ್ಮಿಂಗ್ ಫೂಲ್, ಜಿಮ್, ಬ್ಯಾಡ್ಮಿಂಟನ್ ಗ್ರೌಂಡ್, ಎರಡು ರೆಸ್ಟೋರೆಂಟ್ ಗಳು, ಟೇಬಲ್ ಟೆನ್ನಿಸ್ ಗ್ರೌಂಡ್ ಮುಂತಾದ ಸೌಲಭ್ಯಗಳಿರಲಿವೆ ಎಂದರು.

16.95 ಎಕರೆ ಪ್ರದೇಶಗಳಲ್ಲಿ ನಿರ್ಮಾಣವಾಗುತ್ತಿರುವ ಈ ಕಾಮಗಾರಿಯು ಜನಾರ್ದನ ರೆಡ್ಡಿ ಎಂಬ ಎಂಜಿನಿಯರ್ ಅವರ ನೇತೃತ್ವದಲ್ಲಿ ನೆರವೇರಲಿದೆ. ಮೊದಲ ಹಂತದಲ್ಲಿ 8750 ಚದುರಡಿ ಕಾಮಗಾರಿ ನಡೆಯಲಿದೆ ಎಂದರು.
ಉತ್ತರ ಭಾಗದ ಪೆವಿಲಿಯನ್ ಕಾಮಗಾರಿಯೂ ಇದರಲ್ಲಿ ಸೇರಿರುವುದರಿಂದ ಅಂಪೈರ್ ರೂಮ್ ಮತ್ತು ಇತರೆ ಅವಶ್ಯಕತೆಗಳೆಲ್ಲವನ್ನೂ ಸುವ್ಯವಸ್ಥಿತವಾಗಿ ಕಲ್ಪಿಸಲಾಗುವುದು ಎಂದರು. ಶಿವಾನಂದ ಗುಂಜಾಳ ಮತ್ತಿತರರು ಉಪಸ್ಥಿತರಿದ್ದರು.
-
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
PBKS Vs GT: ಪಂಜಾಬ್ ಕಿಂಗ್ಸ್ ಪರ ಕೂಪರ್ ಕಾನೊಲಿ ಹರಿಸಿದ ರನ್ ಮಳೆಗೆ ಕೊಚ್ಚಿಹೋದ ಗುಜರಾತ್ ಟೈಟನ್ಸ್ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications