ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳಿಸಲು ಸೂಚನೆ
ಧಾರವಾಡ, ಆಗಸ್ಟ್ 06: ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ಕುರಿತು ನೈಸ್ ಕಂಪನಿಯ ಪ್ರತಿನಿಧಿಗಳ ಜೊತೆ ನಡೆಸಿರುವ ಸಭೆಯ ಅಂಶಗಳನ್ನು ಒಳಗೊಂಡ ಪರಿಷ್ಕೃತ ಪ್ರಸ್ತಾವನೆಯನ್ನು ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾದ ಕೇಂದ್ರ ಕಚೇರಿಗೆ ಶುಕ್ರವಾರದ ಒಳಗಾಗಿ ಕಳುಹಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
Recommended Video
ಬುಧವಾರ ವಿಡಿಯೋ ಸಂವಾದದ ಮೂಲಕ ಹುಬ್ಬಳ್ಳಿ-ಧಾರವಾಡ ಭಾಗದ ಕೆ.ಆರ್.ಡಿ.ಸಿ.ಎಲ್, ರಾಷ್ಟ್ರೀಯ ಹೆದ್ದಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಅಡಿ ಅನುಷ್ಠಾನಗೊಳಿಸುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು.
ವಿಡಿಯೋ ಸಂವಾದದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್ ಜೋಶಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ ಮತ್ತು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರುಗಳು ಭಾಗವಹಿಸಿದ್ದರು.

ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಜುಲೈ 24 ರಂದು ವಿಧಾನ ಸೌಧದಲ್ಲಿ ನಡೆದ ಸಭೆಯ ನಂತರ ನಡೆದ ಬೆಳವಣಿಗೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ನೈಸ್ ಕಂಪನಿಯ ಪ್ರತಿನಿಧಿಗಳ ಜೊತೆಯಲ್ಲಿ ನಡೆಸಿದ ಸಭೆಯ ಮಾಹಿತಿಗಳನ್ನು ಅಧಿಕಾರಿಗಳಿಂದ ಅವರು ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಅಧಿಕಾರಿಗಳು ಈ ಕಾಮಗಾರಿಯ ಸಂಬಂಧ ಬೆಂಗಳೂರಿನಲ್ಲಿ ಅಗತ್ಯವಿರುವ ಎಲ್ಲಾ ಕಾರ್ಯಗಳನ್ನು ಪೂರೈಸಲಾಗಿದೆ ಎಂದು ಮಾಹಿತಿ ನೀಡಿದರು.
ನಂತರ, ಕೇಂದ್ರ ಸಚಿವರು ಸಭೆಯ ಅಂಶಗಳನ್ನು ಒಳಗೊಂಡಿರುವ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ಪರಿಷ್ಕೃತ ಪ್ರಸ್ತಾವನೆಯನ್ನು ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾದ ಕೇಂದ್ರ ಕಚೇರಿಗೆ ಕಳುಹಿಸಿಕೊಡುವಂತೆ ಸೂಚನೆ ನೀಡಿದರು. ತಾವು ದೆಹಲಿಯಲ್ಲಿ ಕೇಂದ್ರ ಸಚಿವರಾದ ನಿತೀನ್ ಗಡ್ಕರಿ ಅವರೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮಾತನಾಡಿ, ಕಾಮಗಾರಿ ಪ್ರಾರಂಭದ ನಂತರ ಯಾವುದೇ ಅಡೆತಡೆಗಳು ಬಾರದ ರೀತಿಯಲ್ಲಿ ಸಂಬಂಧಪಟ್ಟ ಎಲ್ಲಾ ಕಡೆಗಳಿಂದ ಅಗತ್ಯ ಒಡಂಬಡಿಕೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು. ಈ ಪ್ರಸ್ತಾಪದ ಆರ್ಥಿಕ ಅನುಮೋದನೆಯ ನಂತರ ಯೋಜನೆಯಲ್ಲಿ ಅಳವಡಿಸಿಕೊಳ್ಳಬೇಕಾದ ಸರ್ವೀಸ್ ರೋಡ್, ಅಂಡರ್ ಪಾಸ್ ನಂತಹ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸುವಂತೆ ತಿಳಿಸಿದರು.
ಇದೇ ವೇಳೆ, ಹುಬ್ಬಳ್ಳಿ-ವಿಜಯಪುರ ರಸ್ತೆಯ ಕಾಮಾಗಾರಿಯ ಬಗ್ಗೆ ಪ್ರಸ್ತಾಪಿಸಿದ ಅವರು, 218 ನೇ ನ್ಯಾಷನಲ್ ಹೈವೇ ರಸ್ತೆಯ ಕಾಮಗಾರಿ ಸಮರ್ಪಕವಾಗಿ ಮುಗಿದಿಲ್ಲ. ಆದರೂ ಹೆಬಸೂರು ಬಳಿ ಟೋಲ್ ಸಂಗ್ರಹಕ್ಕೆ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ. ಕಾಮಗಾರಿ ಮುಗಿಯದೆ ಟೋಲ್ ಸಂಗ್ರಹ ಸರಿಯಲ್ಲ ಎಂದು ಹೇಳಿದರು. ಈ ಕಾಮಗಾರಿಯನ್ನು ಚುರುಕುಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಶಾಸಕರಾದ ಅರವಿಂದ್ ಬೆಲ್ಲದ್, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಧಾರವಾಡ ಜಿಲ್ಲಾಧಿಕಾರಿಗಳು, ಲೋಕೋಪಯೋಗಿ ಇಲಾಖೆ, ಕೆ.ಆರ್.ಡಿ.ಸಿ.ಎಲ್ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಪ್ರಮುಖ ಅಧಿಕಾರಿಗಳು ಪಾಲ್ಗೊಂಡಿದ್ದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications