ಗಿರಡ್ಡಿ ಗೋವಿಂದರಾಜು ಪಾಟೀಲ್ ಪುಟ್ಟಪ್ಪರ ಬಳಿ ಯಾಕೆ ಕ್ಷಮೆ ಕೇಳ್ಬೇಕು?
ಹುಬ್ಬಳ್ಳಿ, ಜನವರಿ,27: ಕನ್ನಡ ಸಾಹಿತಿ ಪಾಟೀಲ್ ಪುಟ್ಟಪ್ಪ ಅವರ ಬಳಿ ಖ್ಯಾತ ವಿಮರ್ಶಕ ಡಾ. ಗಿರಡ್ಡಿ ಗೋವಿಂದರಾಜು ಕ್ಷಮೆಯಾಚಿಸಬೇಕು ಎಂದು ಹುಬ್ಬಳ್ಳಿ ಧಾರವಾಡ ಕಾಂಗ್ರೆಸ್ ವಕ್ತಾರ ವೇದವ್ಯಾಸ ಕೌಲಗಿ ಪಟ್ಟು ಹಿಡಿದಿದ್ದಾರೆ.
ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವಾಗ ಧಾರವಾಡ ಸಾಹಿತ್ಯ ಸಮ್ಮೇಳನದ ಸಂಭ್ರಮ ಅವಶ್ಯವಿತ್ತೇ ಎಂದು ಹೇಳಿದ ಪಾಟೀಲ್ ಪುಟ್ಟಪ್ಪ ಅವರ ಹೇಳಿಕೆ ಖಂಡಿಸಿದ ಡಾ. ಗಿರಡ್ಡಿ ಗೋವಿಂದರಾಜು ಅವರ 'ಇತ್ತೀಚೆಗೆ ಪಾಪು ಅದ್ಧೂರಿಯಾಗಿ ಜನ್ಮದಿನ ಆಚರಿಸಿಕೊಳ್ಳುತ್ತಿರುವಾಗ ರೈತರ ನೆನಪಾಗಲಿಲ್ಲವೇ' ಎಂಬ ಪ್ರತ್ತ್ಯುತ್ತರ ವೇದವ್ಯಾಸ ಕೌಲಗಿ ಅವರ ಕೋಪಕ್ಕೆ ಕಾರಣವಾಗಿದೆ.[ಗಂಗೂಬಾಯಿ ಹಾನಗಲ್ ಗಾಯನಕ್ಕೆ ಮರುಳಾದ ಪಂ.ಜಸರಾಜ್]

ಪಾಟೀಲ್ ಪುಟ್ಟಪ್ಪ ಅವರ ಪರ ಮಾತನಾಡಿದ ಕಾಂಗ್ರೆಸ್ ವಕ್ತಾರ ವೇದವ್ಯಾಸ ಕೌಲಗಿ, ಕನ್ನಡದ ಕಟ್ಟಾಳು, ಏಕೀಕರನದ ಹೋರಾಟಗಾರ ಇವರ ಹುಟ್ಟುಹಬ್ಬ ಆಚರಿಸಲು ಉತ್ತರ ಕರ್ನಾಟಕ ಜನತೆಗೆ ದೊರೆತಿದ್ದು, ಸೌಭಾಗ್ಯವೆಂದು ತಿಳಿದಿರುವಾಗ ನಮ್ಮೆಲ್ಲರ ಅಭಿಮಾನಕ್ಕೆ ಗಿರಡ್ಡಿ ಅವರು ಧಕ್ಕೆ ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನವರಿ 14ರಂದು ಪಾಟೀಲ್ ಪುಟ್ಟಪ್ಪ ಅವರು 97 ವರ್ಷಕ್ಕೆ ಕಾಲಿಟ್ಟಿದ್ದು, ಇದನ್ನು ಅವರು ಆಚರಿಸಿಕೊಂಡಿದ್ದಲ್ಲ. ಕರ್ನಾಟಕ ವಿದ್ಯಾವರ್ಧಕ ಸಂಘದ ಏಳಿಗೆಗೆ ದುಡಿದಿದ್ದರು. ಪಾಪು ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದಾಗ ಅತ್ಯಂತ ಪ್ರಾಮಾಣಿಕವಾಗಿ ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಮಾಡಲು ಪ್ರಯತ್ನಿಸಿದ್ದರು. ಈ ಉದ್ದೇಶದಿಂದ ಅಭಿಮಾನಿಗಳು ಅವರ ಹುಟ್ಟುಹಬ್ಬ ಆಚರಿಸಿದ್ದಾರೆ ಎಂದು ಸಮಜಾಯಿಷಿ ನೀಡಿದ್ದಾರೆ.[ಸಾಹಿತ್ಯ ವಿಮರ್ಶೆ ಅಂದರೆ ಏನು? ಏಕೆ? ಹೇಗೆ ಹುಟ್ಟಿತು?]
ಡಾ. ಗಿರಡ್ಡಿ ಅವರ ಮೇಲೆ ಕಿಡಿಕಾರಿದ ಕೌಲಗಿ, 'ಧಾರವಾಡದಿಂದ ಬೆಂಗಳೂರನ್ನೇ ಕೇಂದ್ರಸ್ಥಾನ ಮಾಡಿಕೊಂಡು ವ್ಯಂಗ್ಯೋಕ್ತಿಗಳಿಂದ ತಮ್ಮ ಬೆನ್ನು ತಾವು ತಟ್ಟಿಕೊಳ್ಳುತ್ತ ಪಾಟೀಲ್ ಪುಟ್ಟಪ್ಪರವರನ್ನು ವಿದ್ಯಾವರ್ಧಕ ಸಂಘದಿಂದ ಸೋಲಿಸುವ ಪ್ರಯತ್ನ ಮಾಡಿದವರು ಡಾ.ಗಿರಡ್ಡಿಯವರು' ಎಂದು ದೂರಿದ್ದಾರೆ. ಜೊತೆಗೆ ಅವರ ಬಳಿ ತಕ್ಷಣವೇ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications