ಧಾರವಾಡ: ನಾಮಿನಿಗೆ ವಿಮಾ ಹಣಕೊಡದ ಕಂಪನಿಗೆ ₹10 ಲಕ್ಷ ದಂಡ
ಧಾರವಾಡ, ಅಕ್ಟೋಬರ್ 06: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಆನಂದ ನಗರ ನಿವಾಸಿ ಅಲ್ಲಾಭಕ್ಷ ಮುಲ್ಲಾರವರ ಪುತ್ರ ಆಶೀಫ್ ಮುಲ್ಲಾರವರು ತನ್ನ ಮೇಲೆ ಸರ್ವ ಸುರಕ್ಷಾ ಲಾಭದ ವಿಮಾ ಪಾಲಸಿಯನ್ನು ಎಚ್ಡಿಎಫ್ಸಿ ಎರಗೋ ವಿಮಾ ಕಂಪನಿಯಿಂದ 2017ರಲ್ಲಿ ಪಡೆದಿದ್ದರು.
ಅದು 10 ಲಕ್ಷ ರೂಪಾಯಿ ಮೌಲ್ಯದ ಪಾಲಸಿಯಾಗಿತ್ತು. ಅದಕ್ಕೆ ವಿಮಾದಾರ 7,646 ರೂಪಾಯಿ ಹಣ ಪ್ರಿಮಿಯಮ್ ಕಟ್ಟಿದ್ದರು. ಆ ಪಾಲಸಿಗೆ ತನ್ನ ತಂದೆ ಅಲ್ಲಾಭಕ್ಷರವರನ್ನು ನಾಮಿನಿಯಾಗಿ ಮಾಡಿದ್ದರು. ಡಿಸೆಂಬರ್ 19, 2019ರಂದು ಗದಗ ಹುಲಕೋಟಿ ಹತ್ತಿರ ಹೋಗುವಾಗ ಲಾರಿ ಮತ್ತು ಬೈಕಿಗೆ ಡಿಕ್ಕಿಯಾದ ಅಪಘಾತದಲ್ಲಿ ವಿಮಾದಾರ ಆಶೀಪ್ ಮೃತರಾಗಿದ್ದರು.

ಈ ಬಗ್ಗೆ ಗದಗ ಪೋಲಿಸ್ ಠಾಣೆಯಲ್ಲಿ ಲಾರಿ ಚಾಲಕನ ಮೇಲೆ ಪ್ರಕರಣ ದಾಖಲಾಗಿತ್ತು. ಆ ಎಲ್ಲಾ ದಾಖಲೆಗಳನ್ನು ದೂರುದಾರ ಪಡೆದುಕೊಂಡು ನಾಮಿನಿಯಾದ ತನಗೆ ಮೃತನ ವಿಮಾ ಕ್ಷೇಮ ಕೊಡುವಂತೆ ಅರ್ಜಿ ಸಲ್ಲಿಸಿದ್ದರು.
ದೂರುದಾರರ ಕ್ಷೇಮ ಅರ್ಜಿಯನ್ನು ಪರಿಗಣಿಸದೇ ವಿಮಾ ಕಂಪನಿಯವರು ಮೃತನ ಹೆಂಡತಿ ನೂರಜಹಾನಬಿಯವರಿಗೆ ₹10 ಲಕ್ಷ ವಿಮಾ ಹಣ ಸಂದಾಯ ಮಾಡಿದ್ದರು. ತಾನು ಮೃತನ ವಿಮಾ ಪಾಲಸಿಗೆ ನಾಮಿನಿಯಿರುವುದರಿಂದ ವಿಮಾ ಹಣವನ್ನು ತನಗೆ ಕೊಡಬೇಕಾಗಿತ್ತು. ಆದರೆ ವಿಮಾಕಂಪನಿಯವರು ತನ್ನ ಕ್ಲೇಮನ್ನು ದಿಕ್ಕರಿಸಿ ಮೃತನ ಹೆಂಡತಿಗೆ ವಿಮಾ ಹಣ ₹10 ಲಕ್ಷ ಕೊಟ್ಟಿರುವುದು ತಪ್ಪು ಮತ್ತು ಅಂತಹ ವಿಮಾ ಕಂಪನಿಯವರ ನಡಾವಳಿಕೆ ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ವಿಮಾ ಕಂಪನಿಯವರ ಮೇಲೆ ಕ್ರಮ ಕೈಗೊಂಡು ತನಗೆ ಪರಿಹಾರ ಕೊಡಿಸಬೇಕೆಂದು ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.
ಈ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರುಗಳಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು.ಸಿ ಹಿರೇಮಠ ಅವರು ದೂರುದಾರ ಮೃತ ಆಸೀಪ್ ಮುಲ್ಲಾರವರ ತಂದೆ ಇದ್ದು ಅವರು ಮೃತ ಮಾಡಿದ ವಿಮಾ ಪಾಲಸಿಗೆ ನಾಮಿನಿ ಆಗಿದ್ದಾರೆ.
2015ರಲ್ಲಿ ಆಗಿರುವ ವಿಮಾ ಕಾಯ್ದೆಯ ತಿದ್ದುಪಡಿಯಂತೆ ವಿಮಾದಾರ ಮೃತನಾದ್ದಲ್ಲಿ ವಿಮಾ ಪಾಲಸಿಯ ಹಣ ಪಡೆಯಲು ನಾಮಿನಿ ಮಾತ್ರ ಅರ್ಹರಿದ್ದಾರೆ. ಆದರೆ ಈ ಪ್ರಕರಣದಲ್ಲಿ ನಾಮಿನಿಯನ್ನು ಬದಿಗಿಟ್ಟು ಮೃತನ ಹೆಂಡತಿ ನೂರಜಹಾನಬಿಗೆ ವಿಮಾ ಕಂಪನಿಯವರು ಹಣ ಸಂದಾಯ ಮಾಡಿರುವುದು ವಿಮಾ ನಿಯಮಕ್ಕೆ ವಿರುದ್ಧವಾಗಿದೆ ಕಾರಣ ವಿಮಾ ಕಂಪನಿಯವರ ಅಂತಹ ನಡಾವಳಿಕೆ ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟು ಆಯೋಗ ತೀರ್ಪು ನೀಡಿದೆ.
ತಮ್ಮದೇ ವಿಮಾ ನಿಯಮಕ್ಕೆ ವ್ಯತಿರೀಕ್ತವಾಗಿ ಮೃತನ ಹೆಂಡತಿಗೆ ವಿಮಾ ಹಣ ನೀಡಿರುವುದನ್ನು ಆಯೋಗ ಒಪ್ಪಿಕೊಂಡಿಲ್ಲ. ವಿಮಾ ನಿಯಮದಂತೆ ನಾಮಿನಿಯಾದ ದೂರುದಾರ ವಿಮಾ ಪಾಲಸಿ ಮೊತ್ತ 10 ಲಕ್ಷ ರೂಪಾಯಿ ಪಡೆಯಲು ಅರ್ಹರಿದ್ದಾರೆಂದು ಆಯೋಗ ತೀರ್ಪಿನಲ್ಲಿ ತಿಳಿಸಿದೆ.
ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ನಾಮಿನಿಯಾದ ದೂರುದಾರನಿಗೆ ವಿಮಾ ಮೊತ್ತ 10 ಲಕ್ಷ ರೂಪಾಯಿ ಕೊಡುವಂತೆ ವಿಮ ಕಂಪನಿಗೆ ಆಯೋಗ ಆದೇಶಿಸಿದೆ. ದೂರುದಾರರಿಗೆ ಆಗಿರುವ ಅನಾನುಕೂಲ ಮತ್ತು ಮಾನಸಿಕ ತೊಂದರೆಗಾಗಿ 50 ಸಾವಿರ ರೂಪಾಯಿ ಪರಿಹಾರ ಮತ್ತು 5 ಸಾವಿರ ರೂಪಾಯಿ ಪ್ರಕರಣದ ಖರ್ಚು ವೆಚ್ಚ ನೀಡುವಂತೆ ಆಯೋಗ ತಿಳಿಸಿದೆ.
ಒಂದು ತಿಂಗಳ ಒಳಗಾಗಿ ಮೇಲೆ ಹೇಳಿದ ವಿಮಾ ಮೊತ್ತ ಕೊಡಲು ಎದುರುದಾರರು ವಿಫಲರಾದಲ್ಲಿ ತೀರ್ಪು ನೀಡಿದ ದಿನಾಂಕದಿಂದ 10 ಲಕ್ಷ ರೂಪಾಯಿ ಮೇಲೆ ಶೇ.8ರಂತೆ ಬಡ್ಡಿ ಲೆಕ್ಕ ಹಾಕಿ ಕೊಡುವಂತೆ ಆಯೋಗ ಎದುರುದಾರರಿಗೆ ಆದೇಶಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications