ಧಾರವಾಡ: ಮದುವೆ ಫೋಟೋ ಕೊಡದ ಫೋಟೋಗ್ರಾಫರ್ಗೆ 30 ಸಾವಿರ ರೂ ದಂಡ
ಧಾರವಾಡ, ಜುಲೈ 19: ಮದುವೆಯಾಗಿ ಬಹಳ ಸಮಯ ಕಳೆದರೂ ಫೋಟೋಗ್ರಾಫರ್ ವಿರುದ್ಧ ಗ್ರಾಹಕ ದೂರು ನೀಡಿ ದಂಡ ವಿಧಿಸುವಂತೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಆಕಾಶವಾಣಿ ಹತ್ತಿರದ ಶೇಖ್ ಕಂಪೌಂಡ್ ನಿವಾಸಿ ಶಹಬಾಜ್ ಹೆಬಸೂರ ಎಂಬುವವರು ತಮ್ಮ ಮದುವೆ ಫೋಟೋ ತೆಗೆಯಲು ಸತ್ತೂರ ಕೆ.ಎಚ್.ಬಿ. ಲೇಔಟ್ನಲ್ಲಿರುವ ರವಿ ದೊಡ್ಡಮನಿಯವರಿಗೆ 25 ಸಾವಿರಕ್ಕೆ ಗುತ್ತಿಗೆ ಕೊಟ್ಟಿದ್ದರು.

ಆ ಪೈಕಿ ದೂರುದಾರ ಎದುರುದಾರರಿಗೆ 15 ಸಾವಿರ ಅಡವಾನ್ಸ್ ಕೊಟ್ಟಿದ್ದರು. ಡಿಸೆಂಬರ್-2022 ರಲ್ಲಿ ನಡೆದ ಮದುವೆಯ ಫೋಟೋಗಳನ್ನು ಪೋಟೋಗ್ರಾಫರ್ ತಂಡ ತೆಗೆದಿದ್ದರು. ಆದರೆ ಅವುಗಳ ಫೋಟೋಗಳನ್ನು ದೂರುದಾರರಿಗೆ ಕೊಟ್ಟಿರಲಿಲ್ಲ.
ಈ ಬಗ್ಗೆ ಹಲವು ಬಾರಿ ವಿನಂತಿಸಿದರೂ ಫೋಟೋಗ್ರಾಫರ್ ಫೋಟೋ ಕೊಟ್ಟಿಲ್ಲವಾದ್ದರಿಂದ ಅವನು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಸಗಿದ್ದಾನೆ ಅಂತಾ ಹೇಳಿ ದೂರುದಾರ ಫೋಟೊಗ್ರಾಫರ್ ರವಿಯ ಮೇಲೆ ಧಾರವಾಡ ಜಿಲ್ಲಾಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಈ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರುಗಳಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ ಅವರು ಡಿಸೆಂಬರ್ 2022ರಲ್ಲಿ ದೂರುದಾರನಿಂದ 15 ಸಾವಿರ ಪಡೆದು, ಮದುವೆಯ ಸವಿನೆನಪಿಗಾಗಿ ಮದುವೆ ಸಮಾರಂಭದಲ್ಲಿ ತೆಗೆದ ಫೋಟೋಗಳನ್ನು ದೂರುದಾರರಿಗೆ ನೀಡದೇ ಇರುವುದು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟು ಆಯೋಗ ತೀರ್ಪು ನೀಡಿದೆ.
ದೂರುದಾರ ಸಂದಾಯ ಮಾಡಿದ ಅಡವಾನ್ಸ್ 15 ಸಾವಿರ ಜೊತೆಗೆ ದೂರುದಾರ ಅನುಭವಿಸಿದ ಅನಾನುಕೂಲತೆ ಮತ್ತು ಮಾನಸಿಕ ಹಿಂಸೆಗಾಗಿ 10,000 ಪರಿಹಾರ ಹಾಗೂ ಈ ಪ್ರಕರಣದ ಖರ್ಚು ವೆಚ್ಚ ಅಂತಾ 5,000 ಹಣವನ್ನು ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗ ಎದುರುದಾರ ಫೋಟೋಗ್ರಾಫರ್ಗೆ ಆದೇಶಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications