ಡಾ. ಗುರುರಾಜ್ ದೇಶಪಾಂಡೆ ವಿರಚಿತ 'ದೇಶಾವಲೋಕನ' ಲೋಕಾರ್ಪಣೆ
ಹುಬ್ಬಳ್ಳಿ, ಜುಲೈ, 08: ಸಮಸ್ಯೆಯನ್ನು ಗುರುತಿಸಿ ಪರಿಹರಿಸಬೇಕು ಬೇಕಾದರೆ ಅದನ್ನು ಪ್ರೀತಿಸಬೇಕು ಎಂದು ದೇಶಪಾಂಡೆ ಫೌಂಡೇಶನ್ ಸಂಸ್ಥಾಪಕ ಗುರುರಾಜ ದೇಶಪಾಂಡೆ ಹೇಳಿದರು.
ಅವರು ಗುರುವಾರ ಸ್ಥಳೀಯ ಬಿವಿಬಿ ಕಾಲೇಜ್ ಕ್ಯಾಂಪಸ್ ನಲ್ಲಿರುವ ದೇಶಪಾಂಡೆ ಫೌಂಡೇಶನ್ ಸಭಾಂಗಣದಲ್ಲಿ "ದೇಶಾವಲೋಕನ" ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡುತ್ತಿದ್ದರು.[ದೇಶಾವಲೋಕನ ಸಮಾನ ಸಮಾಜದ ಕನಸಿಗೊಂದು ಮುನ್ನುಡಿ]

ಸಮಸ್ಯೆಯನ್ನು ಗುರುತಿಸಬೇಕಾದರೆ ಅದನ್ನು ಪ್ರೀತಿಸಬೇಕು. ಆಗ ಮಾತ್ರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಈ ರೀತಿಯ ಹಲವಾರು ವಿಷಯಗಳನ್ನು ದೇಶಾವಲೋಕನ ಪುಸ್ತಕದಲ್ಲಿ ನಾನು ಬರೆದಿದ್ದೇನೆ ಎಂದರು.

ಉದ್ಯಮಿಗಳಾಗಬೇಕಾದರೆ ಮೊದಲು ಸಮಸ್ಯೆಗಳನ್ನು ಸರಿಯಾಗಿ ಅರ್ಥೈಸಿಕೊಳ್ಳಬೇಕು. ಏಕೆಂದರೆ ನಮ್ಮ ನಡುವೆ ಮೂರು ತರಹದ ವ್ಯಕ್ತಿತ್ವ ಹೊಂದಿರುವ ಜನರಿದ್ದಾರೆ. ಆರಾಮಾಗಿ ಇದ್ದರಾಯಿತು ಎನ್ನುವವರು, ಸಮಸ್ಯೆ ಬಂದರೆ ಏಕೆ ಬಂತು ಎಂದು ಚಿಂತಿಸುತ್ತ ಕುಳಿತುಕೊಳ್ಳುವವರು ಮತ್ತು ಮೂರನೇಯವರು ಸಮಸ್ಯೆ ಬಂದರೆ ಧೈರ್ಯವಾಗಿ ಎದುರಿಸಬೇಕೆನ್ನುವವರು. ಹೀಗಾಗಿ ನಾವು ಮೂರನೇ ತರಹದ ವ್ಯಕ್ತಿತ್ವವನ್ನು ಹೊಂದಿದ್ದರೆ ಮಾತ್ರ ಯಶಸ್ಸು ಪಡೆಯಬಹುದು ಎಂದರು.[ದೇಶಾವಲೋಕನ ಕುರಿತು ಗುರುರಾಜ್ ದೇಶಪಾಂಡೆ ನುಡಿ]
ಲೇಖಕರೊಂದಿಗೆ ಸಂವಾದ:
ಪುಸ್ತಕವನ್ನು ಶ್ರೀನಿವಾಸ ದೇಶಪಾಂಡೆ ಮತ್ತು ಜಯಶ್ರೀ ದೇಶಪಾಂಡೆ ಬಿಡುಗಡೆ ಮಾಡಿದ ನಂತರ ಲೇಖಕರೊಂದಿಗೆ ಸಂವಾದ ನಡೆಯಿತು.
ಸತೀಶ ಚಪ್ಪರಿಕೆಯವರು ಲೇಖಕರಾದ ಗುರುರಾಜ ದೇಶಪಾಂಡೆ ಮತ್ತು ಕನ್ನಡ ಅನುವಾದಕಿ ಬೆಂಗಳೂರು ನ್ಯಾಶನಲ್ ಕಾಲೇಜಿನ ಭೌತಶಾಸ್ತ್ರ ಪ್ರಾಧ್ಯಾಪಕಿ ವೈ.ಸಿ. ಕಮಲಾ ಅವರನ್ನು ಸಂವಾದದಲ್ಲಿ ಪುಸ್ತಕ ಬರೆಯುವಾಗಿನ ಅನುಭವಗಳನ್ನು ಹಂಚಿಕೊಂಡರು. [ಹುಬ್ಬಳ್ಳಿಯಲ್ಲಿ ದೇಶಪಾಂಡೆ ಫೌಂಡೇಶನ್ನಿಂದ ಅಭಿವೃದ್ಧಿ ಮಂತ್ರ]
ಖ್ಯಾತ ಕವಿ ಚನ್ನವೀರ ಕಣವಿ ಅವರ ಪುತ್ರ ಪತ್ರಕರ್ತ ಬಿಸಿನೆಸ್ ಇಂಡಿಯಾ ಪತ್ರಿಕೆಯ ಸಂಪಾದಕ ಶಿವಾನಂದ ಕಣವಿ ಮತ್ತಿತರರು ಉಪಸ್ಥಿತರಿದ್ದರು. ಸಂವಾದದ ನಂತರ ಗುರುರಾಜ ದೇಶಪಾಂಡೆ ಅವರನ್ನು ಪುಸ್ತಕ ಪಡೆದುಕೊಂಡವರಿಗೆ ಆಟೋಗ್ರಾಫ್ ನೀಡಿ ಶುಭ ಹಾರೈಸಿದರು.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications