ಡಾ. ಗುರುರಾಜ್ ದೇಶಪಾಂಡೆ ವಿರಚಿತ 'ದೇಶಾವಲೋಕನ' ಲೋಕಾರ್ಪಣೆ
ಹುಬ್ಬಳ್ಳಿ, ಜುಲೈ, 08: ಸಮಸ್ಯೆಯನ್ನು ಗುರುತಿಸಿ ಪರಿಹರಿಸಬೇಕು ಬೇಕಾದರೆ ಅದನ್ನು ಪ್ರೀತಿಸಬೇಕು ಎಂದು ದೇಶಪಾಂಡೆ ಫೌಂಡೇಶನ್ ಸಂಸ್ಥಾಪಕ ಗುರುರಾಜ ದೇಶಪಾಂಡೆ ಹೇಳಿದರು.
ಅವರು ಗುರುವಾರ ಸ್ಥಳೀಯ ಬಿವಿಬಿ ಕಾಲೇಜ್ ಕ್ಯಾಂಪಸ್ ನಲ್ಲಿರುವ ದೇಶಪಾಂಡೆ ಫೌಂಡೇಶನ್ ಸಭಾಂಗಣದಲ್ಲಿ "ದೇಶಾವಲೋಕನ" ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡುತ್ತಿದ್ದರು.[ದೇಶಾವಲೋಕನ ಸಮಾನ ಸಮಾಜದ ಕನಸಿಗೊಂದು ಮುನ್ನುಡಿ]

ಸಮಸ್ಯೆಯನ್ನು ಗುರುತಿಸಬೇಕಾದರೆ ಅದನ್ನು ಪ್ರೀತಿಸಬೇಕು. ಆಗ ಮಾತ್ರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಈ ರೀತಿಯ ಹಲವಾರು ವಿಷಯಗಳನ್ನು ದೇಶಾವಲೋಕನ ಪುಸ್ತಕದಲ್ಲಿ ನಾನು ಬರೆದಿದ್ದೇನೆ ಎಂದರು.

ಉದ್ಯಮಿಗಳಾಗಬೇಕಾದರೆ ಮೊದಲು ಸಮಸ್ಯೆಗಳನ್ನು ಸರಿಯಾಗಿ ಅರ್ಥೈಸಿಕೊಳ್ಳಬೇಕು. ಏಕೆಂದರೆ ನಮ್ಮ ನಡುವೆ ಮೂರು ತರಹದ ವ್ಯಕ್ತಿತ್ವ ಹೊಂದಿರುವ ಜನರಿದ್ದಾರೆ. ಆರಾಮಾಗಿ ಇದ್ದರಾಯಿತು ಎನ್ನುವವರು, ಸಮಸ್ಯೆ ಬಂದರೆ ಏಕೆ ಬಂತು ಎಂದು ಚಿಂತಿಸುತ್ತ ಕುಳಿತುಕೊಳ್ಳುವವರು ಮತ್ತು ಮೂರನೇಯವರು ಸಮಸ್ಯೆ ಬಂದರೆ ಧೈರ್ಯವಾಗಿ ಎದುರಿಸಬೇಕೆನ್ನುವವರು. ಹೀಗಾಗಿ ನಾವು ಮೂರನೇ ತರಹದ ವ್ಯಕ್ತಿತ್ವವನ್ನು ಹೊಂದಿದ್ದರೆ ಮಾತ್ರ ಯಶಸ್ಸು ಪಡೆಯಬಹುದು ಎಂದರು.[ದೇಶಾವಲೋಕನ ಕುರಿತು ಗುರುರಾಜ್ ದೇಶಪಾಂಡೆ ನುಡಿ]
ಲೇಖಕರೊಂದಿಗೆ ಸಂವಾದ:
ಪುಸ್ತಕವನ್ನು ಶ್ರೀನಿವಾಸ ದೇಶಪಾಂಡೆ ಮತ್ತು ಜಯಶ್ರೀ ದೇಶಪಾಂಡೆ ಬಿಡುಗಡೆ ಮಾಡಿದ ನಂತರ ಲೇಖಕರೊಂದಿಗೆ ಸಂವಾದ ನಡೆಯಿತು.
ಸತೀಶ ಚಪ್ಪರಿಕೆಯವರು ಲೇಖಕರಾದ ಗುರುರಾಜ ದೇಶಪಾಂಡೆ ಮತ್ತು ಕನ್ನಡ ಅನುವಾದಕಿ ಬೆಂಗಳೂರು ನ್ಯಾಶನಲ್ ಕಾಲೇಜಿನ ಭೌತಶಾಸ್ತ್ರ ಪ್ರಾಧ್ಯಾಪಕಿ ವೈ.ಸಿ. ಕಮಲಾ ಅವರನ್ನು ಸಂವಾದದಲ್ಲಿ ಪುಸ್ತಕ ಬರೆಯುವಾಗಿನ ಅನುಭವಗಳನ್ನು ಹಂಚಿಕೊಂಡರು. [ಹುಬ್ಬಳ್ಳಿಯಲ್ಲಿ ದೇಶಪಾಂಡೆ ಫೌಂಡೇಶನ್ನಿಂದ ಅಭಿವೃದ್ಧಿ ಮಂತ್ರ]
ಖ್ಯಾತ ಕವಿ ಚನ್ನವೀರ ಕಣವಿ ಅವರ ಪುತ್ರ ಪತ್ರಕರ್ತ ಬಿಸಿನೆಸ್ ಇಂಡಿಯಾ ಪತ್ರಿಕೆಯ ಸಂಪಾದಕ ಶಿವಾನಂದ ಕಣವಿ ಮತ್ತಿತರರು ಉಪಸ್ಥಿತರಿದ್ದರು. ಸಂವಾದದ ನಂತರ ಗುರುರಾಜ ದೇಶಪಾಂಡೆ ಅವರನ್ನು ಪುಸ್ತಕ ಪಡೆದುಕೊಂಡವರಿಗೆ ಆಟೋಗ್ರಾಫ್ ನೀಡಿ ಶುಭ ಹಾರೈಸಿದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications