ಹುಬ್ಬಳ್ಳಿಯ ಕಿರಣ ಬಾಕಳೆಗೆ ರಾಜ್ಯ ಛಾಯಾಗ್ರಾಹಕ ಪ್ರಶಸ್ತಿ
ಹುಬ್ಬಳ್ಳಿ, ಡಿಸೆಂಬರ್, 08: ಛಾಯಾಚಿತ್ರ ಕ್ಷೇತ್ರದಲ್ಲಿ ಮೂರು ದಶಕಗಳ ಸಾಧನೆ ಮಾಡಿದ ಹುಬ್ಬಳ್ಳಿಯ ಮುಕ್ತ ಪತ್ರಿಕಾ ಛಾಯಾಗ್ರಾಹಕ ಕಿರಣ ಬಾಳೆ ಅವರು ರಾಜ್ಯ ಮಟ್ಟದ ಛಾಯಾಗ್ರಾಹಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅನು ಛಾಯಾಚಿತ್ರ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ತುಮಕೂರಿನಲ್ಲಿ ಕಾನೂನು ಸಚಿವ ಟಿ.ಬಿ. ಜಯಚಂದ್ರ ಹಾಗೂ ಶ್ರೀ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಸಾನಿಧ್ಯದಲ್ಲಿ ಡಿಸೆಂಬರ್ 6ರ ಭಾನುವಾರ ನಡೆದ ಅನು ರಾಷ್ಟ್ರೀಯ ಛಾಯಾಚಿತ್ರ ಸಮಾವೇಶದಲ್ಲಿ ಕಿರಣ ಬಾಳೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಮಾವೇಶದಲ್ಲಿ ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆ ನಿರ್ದೇಶಕ ವಿಶುಕುಮಾರ, ಅನು ಸಂಸ್ಥೆಯ ಅಧ್ಯಕ್ಷ ಹಾಗೂ ಪತ್ರಿಕಾ ಛಾಯಾಗ್ರಾಹಕ ಶಾಂತರಾಜು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.[ಕರ್ನಾಟಕ ರಣಜಿ ತಂಡಕ್ಕೆ ಕ್ರೀಡಾ ಪತ್ರಕರ್ತರ ಸಂಘದ ಪ್ರಶಸ್ತಿ]

ಮಂಗಳೂರಲ್ಲಿ ಡಿಸೆಂಬರ್ 19, 20 'ಜನನುಡಿ' ಸಮಾರಂಭ
ಮಂಗಳೂರು, ಡಿಸೆಂಬರ್, 08 : ಸಾಹಿತ್ಯ ಸಂಸ್ಕೃತಿಯನ್ನು ದೇಶ-ಕಾಲದೊಂದಿಗೆ ಮುಖಾಮುಖಿಯಾಗಿಸಿ ಎದುರಾಗುವ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶ ಹೊಂದಿರುವ 'ಜನನುಡಿ' ಕಾರ್ಯಕ್ರಮವು ಡಿಸೆಂಬರ್ 19 ಮತ್ತು 20 ಎರಡು ದಿನಗಳ ಕಾಲ ಮಂಗಳೂರಿನ ನಂತೂರಿನಲ್ಲಿರುವ ಶಾಂತಿ ಕಿರಣ ಸಭಾಂಗಣದಲ್ಲಿ ನಡೆಯಲಿದೆ.
ಜನನುಡಿ ಕಾರ್ಯಕ್ರಮವನ್ನು ಸಾಹಿತಿಗಳಾದ ದೇವನೂರು ಮಹಾದೇವ ಉದ್ಘಾಟಿಸಲಿದ್ದು, ನುಡಿ ಮಾರ್ಗ, ಮುಸ್ಲಿಮರ ತವಕ-ತಲ್ಲಣಗಳು, ಅಭಿವೃದ್ಧಿಯ ಸವಾಲುಗಳು ಮತ್ತು ಮತೀಯ ಅಸಹಿಷ್ಣುತೆ ಎಂಬ ವಿಚಾರದ ಮೇಲೆ ವಿಚಾರಗೋಷ್ಠಿಗಳು ನಡೆಯಲಿದೆ. ದಿನಾಂಕ 19ರಂದು ಸಂಜೆ ಮೈಸೂರು ತಂಡದಿಂದ ಮಲೆಮಹದೇಶ್ವರ ಮಂಟೆಸ್ವಾಮಿ ಕಾವ್ಯವನ್ನು ಜನಪದ ಗಾಯನದ ಮೂಲಕ ಪ್ರಸ್ತುತ ಪಡಿಸಲಿದ್ದಾರೆ.[ರಾಮಾಯಣ 'ಸೀತೆ'ಯ ಮನದ ಮಾತಿಗೆ ದನಿ ಆಗೋಣ ಬನ್ನಿ]
ಈ ಸಮಾರಂಭದಲ್ಲಿ ಕಡಿದಾಳು ಶಾಮಣ್ಣ, ರಹಮತ್ ತರಿಕೆರೆ, ಡಿ. ಉಮಾಪತಿ, ದಿನೇಶ್ ಅಮಿನ್ ಮಟ್ಟು, ಡಾ.ಕೆ ಷರೀಫಾ, ದಯಾನಂದ ಟಿಕೆ, ಎಚ್ ಎಸ್ ಅನುಪಮ, ಬಾನು ಮುಷ್ತಕ್ , ಲಕ್ಮ್ಮಣ ಹೂಗಾರ ಇನ್ನಿತರ ಸಾಹಿತಿಗಳು ಭಾಗವಹಿಸಲಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications