ಹುಬ್ಬಳ್ಳಿ ಪೊಲೀಸರ ಬಲೆಗೆ ಬಿದ್ದ ಚಾಣಾಕ್ಷ ಕಳ್ಳ
ಹುಬ್ಬಳ್ಳಿ,ಜುಲೈ, 18: ಈತ ಚಾಣಾಕ್ಷ ಕಳ್ಳ. ರಸ್ತೆ ಪಕ್ಕ ನಿಲ್ಲಿಸಿದ ಕಾರುಗಳು ಈತನ ಟಾರ್ಗೆಟ್, ಅದರಲ್ಲಿ ಮೊಬೈಲ್ ಮತ್ತು ಲ್ಯಾಪ್ ಟಾಪ್ ಈತನ ಗುರಿ. ವಾಹನ ಪಾರ್ಕ್ ಮಾಡಿ ಹೋಗುವ ಮಾಲೀಕರನ್ನು ಗಮನವಿಟ್ಟು ನೋಡಿಕೊಂಡು ಅವರು ಬರುವುದರೊಳಗೆ ಲ್ಯಾಪ್ ಟಾಪ್, ಮೊಬೈಲ್ ಎಗರಿಸುತ್ತಿದ್ದ. ಡೈಮಂಡ್ ಕಟ್ಟರ್ ಬಳಸಿ ಕಾರಿನ ಗಾಜುಗಳನ್ನು ಕೊರೆದು ಕಳ್ಳತನ ಮಾಡುವುದನ್ನು ಕರಗತ ಮಾಡಿಕೊಂಡಿದ್ದ.
ಇಂಥ ಖದೀಮ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ನಗರದ ಹಲವಾರು ಕಡೆಗಳಲ್ಲಿ ಲ್ಯಾಪ್ ಟಾಪ್, ಮೊಬೈಲ್ ಕಳ್ಳತನ ಮಾಡುತ್ತಿದ್ದ ಖದೀಮನೊಬ್ಬನನ್ನು ನಗರದ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.[ಕಳಸಾ-ಬಂಡೂರಿ ಹೋರಾಟ: ಉತ್ತರ ಕರ್ನಾಟಕ ಸ್ತಬ್ಧ]

ಈ ಕುರಿತು ಮಾಹಿತಿ ನೀಡಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಪಾಂಡು ರಾಣೆ ಮಾತನಾಡಿ, ವೀರೇಶ ನಾಗರಾಜಪ್ಪ ಅಂಗಡಿ (27) ಎಂಬಾತ ಪೊಲೀಸರ ಬಲೆಗೆ ಬಿದ್ದ ಚಾಣಾಕ್ಷ ಕಳ್ಳ.[ಹುಬ್ಬಳ್ಳಿ: ಮೈಸೂರು ಸ್ಯಾಂಡಲ್ ಸೋಪ್ ಕದ್ದೊಯ್ದ ಕಳ್ಳರು!]

ಈತನಿಂದ 5 ಲಕ್ಷ ರೂ. ಮೌಲ್ಯದ 12 ಲ್ಯಾಪ್ ಟಾಪ್, 4 ಟ್ಯಾಬ್, 8 ಮೊಬೈಲ್, 1 ಡಿಜಿಟಲ್ ಕ್ಯಾಮರಾ ಹಾಗೂ ಒಂದು ಬೈಕ್ ನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತನು ಹುಬ್ಬಳ್ಳಿ ನಗರದ ವಿವಿಧೆಡೆ ನಡೆದ 15 ಕಳ್ಳತನ ಪ್ರಕರಣಕ್ಕೆ ಪೊಲೀಸರಿಗೆ ಬೇಕಾಗಿದ್ದನು.

ಕಳ್ಳ ಸಿಕ್ಕಿದ್ದು ಹೀಗೆ :
ಬಂಧಿತ ಆರೋಪಿ ವೀರೇಶ ಸೋಮವಾರ ಬೆಳಗಿನ ಹೊತ್ತಿನಲ್ಲಿ ನಗರದ ಹಳೇ ಬಸ್ ನಿಲ್ದಾಣದ ಹೊರಭಾಗದಲ್ಲಿ ಕದ್ದ ವಸ್ತುಗಳನ್ನು ಸಾರ್ವಜನಿಕರಿಗೆ ಮಾರಲು ಪ್ರಯತ್ನಿಸುತ್ತಿದ್ದ. ಈ ಸಮಯದಲ್ಲಿ ಸಂಶಯಗೊಂಡ ಉಪನಗರ ಠಾಣೆ ಪಿಎಸ್ಐ ಮುತ್ತಣ್ಣ ಸವರಗೋಳ ವೀರೇಶನನ್ನು ಆತನ ಬೈಕ್ ಸಮೇತ ಠಾಣೆ ಕರೆ ತಂದು ವಿಚಾರಣೆ ಮಾಡಿದ್ದಾರೆ. ಆಗ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ.

-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications