ಹುಬ್ಬಳ್ಳಿ: ಮತದಾನಕ್ಕೆ ಚಕ್ಕರ್ ಹೊಡೆದ ಶಿಕ್ಷಕರು
ಹುಬ್ಬಳ್ಳಿ, ಜೂನ್ 09: ಪಶ್ಚಿಮ ಪದವೀಧರ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಗುರುವಾರ ನಡೆದ ಮತದಾನಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 4 ಗಂಟೆ ಹೊತ್ತಿಗೆ ಮುಕ್ತಾಯಗೊಂಡಿತು. ಮಧ್ಯಾಹ್ನದ ವೇಳೆಗೆ ಶೇ.60 ರಷ್ಟು ಮತದಾನ ಆಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರವು ಗದಗ, ಹಾವೇರಿ, ಧಾರವಾಡ ಹಾಗೂ ಕಾರವಾರ ಜಿಲ್ಲೆಗಳ ವ್ಯಾಪ್ತಿ ಹೊಂದಿದೆ. ಶಿಕ್ಷಕ ವರ್ಗದವರು ಈ ಚುನಾವಣೆಗೆ ಸಾರ್ವತ್ರಿಕ ರಜೆ ಘೋಷಿಸಬೇಕಾಗಿತ್ತು. ಹಾಗಾಗಿದ್ದರೆ ಮತದಾನ ಏರಿಕೆ ಕಾಣುತ್ತಿತ್ತು ಎಂಬ ಅಭಿಪ್ರಾಯ ವ್ಯಕ್ತವಾಯಿತು.[ಹುಬ್ಬಳ್ಳಿ ಹುತಾತ್ಮ ಸೈನಿಕನಿಗೆ ಅಂತಿಮ ನಮನ]

ಜಿಲ್ಲಾವಾರು ಮತದಾರರ ವಿವರ: ಧಾರವಾಡ -9319, ಗದಗ- 3898, ಹಾವೇರಿ-5305, ಕಾರವಾರ-3866 ಸೇರಿದಂತೆ ಒಟ್ಟು 22388 ಮತದಾರರಿದ್ದಾರೆ. ಇವರಲ್ಲಿ 7154 ಮಹಿಳಾ ಮತದಾರರಿರುವುದು ವಿಶೇಷ. ಮತಗಟ್ಟೆ ಸ್ಥಾಪಿಸಲಾದ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು.
ಈ ಚುನಾವಣೆಯಲ್ಲಿ ಒಟ್ಟು 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಸವರಾಜ ಹೊರಟ್ಟಿ ಈ ಚುನಾವಣೆಯಲ್ಲಿ ಗೆದ್ದರೆ ಸತತ 7ನೇ ಬಾರಿ ಗೆದ್ದು ಗಿನ್ನೆಸ್ ದಾಖಲೆ ಮಾಡಲಿದ್ದಾರೆ. ಕಾಂಗ್ರೆಸ್ ಟಿ.ಈಶ್ವರ ಮೊದಲ ಬಾರಿಗೆ ಸ್ಪರ್ಧಿಸಿದ್ದಾರೆ. ಬಿಜೆಪಿಯ ಮಾ. ನಾಗರಾಜ ವೃತ್ತಿಯಿಂದ ಫ್ರೋಫೆಸರ್ ಆಗಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ಕುಬೇರಪ್ಪ ಬಿಜೆಪಿಯ ಮಾ. ನಾಗರಾಜ ಅವರನ್ನು ಸೋಲಿಸಿ ತಾವೇ ಗೆಲ್ಲುವುದಾಗಿ ಹೇಳಿಕೊಂಡಿದ್ದಾರೆ.[ಬಸವರಾಜ್ ಹೊರಟ್ಟಿಗೆ ಪ್ರತಿಷ್ಠೆ ಪ್ರಶ್ನೆ]
ಈ ಕ್ಷೇತ್ರಕ್ಕೆ ಒಟ್ಟು 77 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 92 ಮತಗಟ್ಟೆ ಅಧಿಕಾರಿಗಳು, 180 ಸಹಾಯಕ ಸಿಬ್ಬಂದಿ, 101 ಮತಗಟ್ಟೆ ಸಹಾಯಕರು, 58 ರೂಟ್ ಆಫಿಸರ್ ಗಳನ್ನು ಚುನಾವಣೆಗೆ ಕಾರ್ಯಕ್ಕೆ ನಿಯೋಜಿಸಲಾಗಿತ್ತು.[ವಿಧಾನಪರಿಷತ್ ಸದಸ್ಯರು ಹೇಗೆ ಆಯ್ಕೆಯಾಗುತ್ತಾರೆ?]
ಯಾಕೆ ಚುನಾವಣೆ?
ದಕ್ಷಿಣ ಪದವೀಧರ, ಪಶ್ಚಿಮ ಶಿಕ್ಷಕ, ವಾಯುವ್ಯ ಪದವೀಧರ, ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ನಾಲ್ವರು ವಿಧಾನಪರಿಷತ್ ಸದಸ್ಯರ ಅವಧಿ ಜುಲೈ 4ಕ್ಕೆ ಅಂತ್ಯಗೊಳ್ಳಲಿದೆ, ಅವರಿಂದ ತೆರವಾಗುವ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications