ಪ್ರಧಾನಿ ಮೋದಿಗೆ ತಾಯಿ ಪ್ರೀತಿ ನೆನಪಿಸುವ ಕಾಣಿಕೆ ನೀಡಿದ ಹುಬ್ಬಳ್ಳಿಯ ಯುವತಿ
ಧಾರವಾಡ, ಮಾರ್ಚ್, 12: ಧಾರವಾಡ ಜಿಲ್ಲೆಗೆ ಯಾರೇ ಗಣ್ಯ ವ್ಯಕ್ತಿಗಳು ಬಂದಾಗಲೂ ಹುಬ್ಬಳ್ಳಿಯ ಯುವತಿಯೊಬ್ಬಳು ತನ್ನ ಕಲೆಯನ್ನು ಪ್ರಸ್ತುತ ಪಡಿಸುವ ಮೂಲಕ ಪೋಟೋ ವಿತರಣೆ ಮಾಡುತ್ತಿದ್ದಾಳೆ. ಇದೀಗ ಹುಬ್ಬಳ್ಳಿಯ ಶ್ರೇಯಾ ನರೇಂದ್ರ ಮೋದಿ ಹಾಗೂ ಅವರ ತಾಯಿ ಹೀರಾಬೇನ ಅವರು ಇರುವ ಭಾವಚಿತ್ರವನ್ನು ಮೋದಿಯವರಿಗೆ ನೀಡಲು ಬಂದ ಕ್ಷಣವಂತೂ ನೋಡುಗರನ್ನು ಗಮನ ಸೆಳೆದಿದೆ.
ಹುಬ್ಬಳ್ಳಿಯ ಶ್ರೇಯಾ ಎಂಬುವವರು ಧಾರವಾಡದ ಐಐಟಿಗೆ ಆಗಮಿದ ಮೋದಿಯವರಿಗೆ ಮಾತೃತ್ವದ ಫೋಟೋ ವಿತರಣೆ ಮಾಡಲು ಬಂದ ಕ್ಷಣ ನೋಡುಗರನ್ನು ಆಶ್ಚರ್ಯಕ್ಕೊಳಗಾಗುವಂತೆ ಮಾಡಿದೆ. ಈಗಾಗಲೇ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ತೇಜಸ್ವಿ ಸೂರ್ಯ ಸೇರಿದಂತೆ ಬಹುತೇಕ ನಾಯಕರಿಗೆ ಗೌರವ ಸಮರ್ಪಣೆ ಮಾಡಿದ್ದು, ಈಗ ಮೋದಿಯವರ ಭಾವಚಿತ್ರ ವಿತರಣೆ ಮಾಡಲು ಬಂದಿದ್ದಳು.

ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಉದ್ಘಾಟನೆ
ವಿಶ್ವದರ್ಜೆಯ ಪ್ಲಾಟ್ ಫಾರಂ ಆಗಿ ಹೊರ ಹೊಮ್ಮಿರುವ ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ರೈಲ್ವೆ ಪ್ಲಾಟ್ ಫಾರಂ ಅನ್ನು ಅಧಿಕೃತವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು. ಶ್ರೀ ಸಿದ್ದಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಪಡಿಸಿದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ಫಾರ್ಮ್ನ ಉದ್ಘಾಟನೆಯನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಧಾರವಾಡದ ಐಐಟಿ ಲೋಕಾರ್ಪಣೆಗೆ ಆಗಮಿಸಿದ ಬೆನ್ನಲ್ಲೇ ವರ್ಚುವಲ್ ಮೂಲಕ ಹುಬ್ಬಳ್ಳಿಯಲ್ಲಿರುವ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ಫಾರ್ಮ್ನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದ್ದಾರೆ. ಶ್ರೀ ಸಿದ್ದಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಇದಕ್ಕೂ ಮುನ್ನ 1ನೇ ಪ್ಲಾಟ್ಫಾರಂ 550 ಮೀಟರ್ ಉದ್ದ ಹೊಂದಿತ್ತು.
ಇದೀಗ ಈ ಪ್ಲಾಟ್ಫಾರಂ ಅನ್ನು ವಿಸ್ತರಿಸಿ 10 ಮೀಟರ್ ಅಗಲದೊಂದಿಗೆ 1,505 ಮೀಟರ್ಗೆ ವಿಸ್ತರಣೆ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಈ ಹೊಸ ರೈಲು ಪ್ಲಾಟ್ಫಾರಂ ಲೋಕಾರ್ಪಣೆ ಮಾಡಿದ ನಂತರ 1,366 ಮೀಟರ್ ಉದ್ದದ ಗೋರಖ್ಪುರ ರೈಲು ನಿಲ್ದಾಣವನ್ನು ಹಿಂದಿಕ್ಕಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications