ಹುಬ್ಬಳ್ಳಿ-ಧಾರವಾಡದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಅರವಿಂದ ಬೆಲ್ಲದ
ಧಾರವಾಡ, ಏ.12: ಸಾಂಸ್ಕೃತಿಕ, ವಿದ್ಯೆ ಹಾಗೂ ವಾಣಿಜ್ಯಕ್ಕೆ ಹೆಸರಾಗಿರುವ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸದಭಿರುಚಿಯ ಚಲನಚಿತ್ರಗಳ ಪ್ರದರ್ಶನಕ್ಕೆ ಸುಚಿತ್ರಾ ಹಾಗೂ ಚಿತ್ರಾ ಫಿಲ್ಮ್ ಸೊಸೈಟಿಗಳು ಜಂಟಿಯಾಗಿ ಆಯೋಜಿಸಲು ಬಯಸಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಎಲ್ಲ ಅಗತ್ಯ ನೆರವು ಒದಗಿಸಲಾಗುವುದು ಎಂದು ಶಾಸಕರಾದ ಅರವಿಂದ ಬೆಲ್ಲದ ಹೇಳಿದರು.
ಇಲ್ಲಿನ ಸೃಜನಾ ರಂಗಮಂದಿರಲ್ಲಿ ನಡೆದ ಅಂತಾರಾಷ್ಟ್ರೀಯ ಚಲಚಿತ್ರೋತ್ಸವ ಕುರಿತ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಸುಚಿತ್ರಾ ಹಾಗೂ ಚಿತ್ರಾ ಎರಡೂ ಫಿಲ್ಮ್ ಸೊಸೈಟಿಗಳಿಗೆ 50 ವರ್ಷಗಳು ತುಂಬುತ್ತಿರುವ ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಅರ್ಥಪೂರ್ಣವಾದ ಚಿತ್ರೋತ್ಸವ ಆಯೋಜನೆಗೆ ಸ್ಥಳೀಯ ಸಂಘ, ಸಂಸ್ಥೆ, ಉದ್ಯಮಗಳು ಹಾಗೂ ಆಡಳಿತದಿಂದ ಅಗತ್ಯ ನೆರವು, ಸಹಕಾರ ಕಲ್ಪಿಸಲಾಗುವುದು. ಇದಕ್ಕಾಗಿ ಪ್ರತ್ಯೇಕ ಸಮಿತಿ ರಚಿಸುವುದು ಸೂಕ್ತ ಎಂದರು.

ಚಲನಚಿತ್ರ ನಟ, ನಿರ್ದೇಶಕ ಪ್ರಕಾಶ್ ಬೆಳವಾಡಿ ಮಾತನಾಡಿ, ''ಸಿನಿಮಾ ಸಂಸ್ಕೃತಿ ಬೆಳೆಸುವ ಮೂಲಕ ವಿಪುಲ ಅವಕಾಶ ಹಾಗೂ ಸಾಧ್ಯತೆಗಳನ್ನು ಸೃಷ್ಟಿಸಬಹುದು. ಸ್ಥಳೀಯ ಉದ್ಯಮಿ, ವ್ಯಾಪಾರಿಗಳು, ಕೈಗಾರಿಕೆಗಳ ಮೂಲಕ ಸಂಪನ್ಮೂಲಗಳ ಕ್ರೋಢೀಕರಣ ಮಾಡಿ, ಸರ್ಕಾರದ ಒಂದು ಸಣ್ಣ ಪಾಲಿನ ಅನುದಾನ ಪಡೆದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜಿಸುವ ಉದ್ದೇಶವಿದೆ. ಸದಭಿರುಚಿಯ ಎಲ್ಲಾ ಚಿತ್ರಗಳು ಓಟಿಟಿ ವೇದಿಕೆಯಲ್ಲಿ ಸಿಗುವುದಿಲ್ಲ. ಸಾಮೂಹಿಕವಾಗಿ ಒಟ್ಟಾಗಿ ಸಿನಿಮಾ ವೀಕ್ಷಿಸುವ ಅನುಭವಕ್ಕೂ, ಪ್ರತ್ಯೇಕವಾಗಿ ಒಬ್ಬರೇ ನೋಡುವುದಕ್ಕೂ ವ್ಯತ್ಯಾಸವಿದೆ. ಚಲನಚಿತ್ರೋತ್ಸವದ ಮೂಲಕ ಫಿಲ್ಮ್ ಕೋರ್ಸ್ಗಳನ್ನು ಜನಪ್ರಿಯಗೊಳಿಸಿ, ಉದ್ಯೋಗ ಸೃಜನೆಗೆ ಅವಕಾಶವಿದೆ'' ಎಂದರು.
ಸುಚಿತ್ರಾ ಫಿಲ್ಮ್ ಸೊಸೈಟಿಯ ನರಹರಿರಾವ್ ಮಾತನಾಡಿ, ''ಇಟಲಿಯಲ್ಲಿ ಮುಸಲೋನಿಯ ಕಾಲದಲ್ಲಿ ಚಲನಚಿತ್ರೋತ್ಸವ ಪರಂಪರೆ ಪ್ರಾರಂಭವಾಯಿತು. ಕಾನ್, ಬರ್ಲಿನ್, ಆಸ್ಕರ್ ಪ್ರಶಸ್ತಿ ವಿಜೇತ ಚಿತ್ರಗಳು ನಾಡಿನ ಜನರಿಗೆ ವೀಕ್ಷಿಸಲು ಲಭ್ಯವಾಗಬೇಕು'' ಎಂದರು.
ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಮಾತನಾಡಿ, ''ವಿಮಾನ, ರೈಲ್ವೆ, ಬಸ್ ಮತ್ತಿತರ ಉತ್ತಮ ಸಂಪರ್ಕ ವ್ಯವಸ್ಥೆ ಹೊಂದಿರುವ ಹುಬ್ಬಳ್ಳಿ-ಧಾರವಾಡದಲ್ಲಿ ದೊಡ್ಡ ಸಂಖ್ಯೆಯ ವಿದ್ಯಾರ್ಥಿ ಸಮೂಹವಿದೆ. ಒಂದೇ ಕಡೆ ಅನೇಕ ಚಲನಚಿತ್ರಗಳನ್ನು ವೀಕ್ಷಿಸಲು ಸಾಧ್ಯವಾಗುವ ಉತ್ಸವ, ಗೋಷ್ಠಿಗಳನ್ನು ಹಮ್ಮಿಕೊಳ್ಳಬಹುದು. ಸರ್ಕಾರದಿಂದಲೂ ನೆರವು ಪಡೆಯಲು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ.ಬಿ. ಗೋಪಾಲಕೃಷ್ಣ ಮಾತನಾಡಿ, ''ಕೋವಿಡ್ ನಂತರದ ದಿನಗಳಲ್ಲಿ ಜನರಿಗೆ ಸದಭಿರುಚಿಯ ಸಾಂಸ್ಕೃತಿಕ ಚಟುವಟಿಕೆಗಳನ್ನು ನೀಡುವ ಅಗತ್ಯವಿದೆ,'' ಎಂದರು.
ರಂಗಾಯಣ ನಿರ್ದೇಶಕ ರಮೇಶ್ ಪರವಿನಾಯ್ಕರ್ ಮಾತನಾಡಿ, ''ಆಜಾದಿ ಕಾ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಭಾರತೀಯ ಕಲೆ, ಪರಂಪರೆ ಬಿಂಬಿಸುವ, ಪರಿಸರ ಜಾಗೃತಿಯ ಚಿತ್ರಗಳು ಉತ್ಸವದಲ್ಲಿ ಪ್ರದರ್ಶನಗೊಳ್ಳಲಿ, ರಂಗಾಯಣ ಸಹಕಾರ ಒದಗಿಸಲಿದೆ'' ಎಂದರು.
ರಂಗಕರ್ಮಿ ಪ್ರಕಾಶ ಬೆಳವಾಡಿ, ಚಿತ್ರ ಫಿಲ್ಮ್ ಸೊಸೈಟಿಯ ಎ.ಎಂ. ಖಾನ್, ಶ್ರೀನಿವಾಸ ಶಾಸ್ತ್ರಿ, ಆನಂದ ವರ್ಧನ್, ವಿಶಾಖ, ಅಭಿಷೇಕ ಅಯ್ಯಂಗಾರ, ಸಮೀರ್ ಜೋಷಿ, ಅರುಣ ಕರಡಿ ಸೇರಿದಂತೆ ಅನೇಕರು ಸಲಹೆ ಸೂಚನೆಗಳನ್ನು ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ನಿರೂಪಿಸಿದರು. ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ ವಂದಿಸಿದರು.(ಮಾಹಿತಿ ಕೃಪೆ: ವಾರ್ತಾ ಇಲಾಖೆ)
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications