ಹುಬ್ಬಳ್ಳಿ- ಧಾರವಾಡ ನೂತನ ಮೇಯರ್ ಆಗಿ ಈರೇಶ ಅಂಚಟಗೇರಿ ಅಧಿಕಾರ ಸ್ವೀಕಾರ
ಹುಬ್ಬಳ್ಳಿ, ಮೇ 28: ನನ್ನ ಮೇಲೆ ಪಕ್ಷ ಹಾಗೂ ನಾಯಕರು ಭರವಸೆ ಇಟ್ಟು ಜವಾಬ್ದಾರಿ ನೀಡಿದ್ದಾರೆ . ಅವರ ಭರವಸೆಗೆ ತಕ್ಕಂತೆ ಕಾರ್ಯವನ್ನು ನಿರ್ವಹಿಸುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ನೂತನ ಮೇಯರ್ ಈರೇಶ್ ಅಂಚಟಗೇರಿ ಹೇಳಿದರು.
ಮೇಯರ್ ಆಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು , ನನ್ನ ಮೇಲೆ ಪಕ್ಷ ಹಾಗೂ ನಾಯಕರು , ಭರವಸೆ ಇಟ್ಟು ಜವಾಬ್ದಾರಿ ನೀಡಿದ್ದಾರೆ . ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ , ಜಗದೀಶ್ ಶೆಟ್ಟರ್ , ಅರವಿಂದ್ ಬೆಲ್ಲದ ಅವರಿಗೆ ನಾನು ಅಭಿನಂದನೆಗಳು ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.
ಮೋದಿ-ನೆಹರೂ ಹೋಲಿಕೆ ಅಸಾಧ್ಯ: ಸಿದ್ದರಾಮಯ್ಯಗೆ ಪ್ರಹ್ಲಾದ್ ಜೋಶಿ ತಿರುಗೇಟು
ಕಳೆದ ಮೂರುವರೆ ವರ್ಷದಿಂದ ಆಡಳಿತಾಧಿಕಾರಿಗಳು ತಮ್ಮ ಅಧಿಕಾರ ಚಲಾಯಿಸುತ್ತಿದ್ದರು. ಆದರೇ ಈಗ ನಾವು ಪಾಲಿಕೆ ಆಡಳಿತವನ್ನು ಜನರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗುತ್ತೇವೆ . ಸಾರ್ವಜನಿಕ ಕುಂದು - ಕೊರತೆಗಳನ್ನು ಶೀಘ್ರದಲ್ಲೇ ಇತ್ಯರ್ಥ ಮಾಡುತ್ತೇನೆ. ಜನರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಜನಪರ ಕಾರ್ಯವನ್ನು ಮಾಡುತ್ತೇನೆ . ಪಕ್ಷನಿಷ್ಠವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಅವರು ಭರವಸೆ ನೀಡಿದರು.