ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿ- ಧಾರವಾಡ ನೂತನ ಮೇಯರ್ ಆಗಿ ಈರೇಶ ಅಂಚಟಗೇರಿ ಅಧಿಕಾರ ಸ್ವೀಕಾರ

By ಧಾರವಾಡ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಮೇ 28: ನನ್ನ ಮೇಲೆ ಪಕ್ಷ ಹಾಗೂ ನಾಯಕರು ಭರವಸೆ ಇಟ್ಟು ಜವಾಬ್ದಾರಿ ನೀಡಿದ್ದಾರೆ . ಅವರ ಭರವಸೆಗೆ ತಕ್ಕಂತೆ ಕಾರ್ಯವನ್ನು ನಿರ್ವಹಿಸುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ನೂತನ ಮೇಯರ್ ಈರೇಶ್ ಅಂಚಟಗೇರಿ ಹೇಳಿದರು.

ಮೇಯರ್ ಆಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು , ನನ್ನ ಮೇಲೆ ಪಕ್ಷ ಹಾಗೂ ನಾಯಕರು , ಭರವಸೆ ಇಟ್ಟು ಜವಾಬ್ದಾರಿ ನೀಡಿದ್ದಾರೆ . ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ , ಜಗದೀಶ್ ಶೆಟ್ಟರ್ , ಅರವಿಂದ್ ಬೆಲ್ಲದ ಅವರಿಗೆ ನಾನು ಅಭಿನಂದನೆಗಳು ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.

ಪ್ರಲ್ಲಾದ್ ಜೋಶಿ

ಮೋದಿ-ನೆಹರೂ ಹೋಲಿಕೆ ಅಸಾಧ್ಯ: ಸಿದ್ದರಾಮಯ್ಯಗೆ ಪ್ರಹ್ಲಾದ್ ಜೋಶಿ ತಿರುಗೇಟು ಮೋದಿ-ನೆಹರೂ ಹೋಲಿಕೆ ಅಸಾಧ್ಯ: ಸಿದ್ದರಾಮಯ್ಯಗೆ ಪ್ರಹ್ಲಾದ್ ಜೋಶಿ ತಿರುಗೇಟು

ಕಳೆದ ಮೂರುವರೆ ವರ್ಷದಿಂದ ಆಡಳಿತಾಧಿಕಾರಿಗಳು ತಮ್ಮ ಅಧಿಕಾರ ಚಲಾಯಿಸುತ್ತಿದ್ದರು. ಆದರೇ ಈಗ ನಾವು ಪಾಲಿಕೆ ಆಡಳಿತವನ್ನು ಜನರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗುತ್ತೇವೆ . ಸಾರ್ವಜನಿಕ ಕುಂದು - ಕೊರತೆಗಳನ್ನು ಶೀಘ್ರದಲ್ಲೇ ಇತ್ಯರ್ಥ ಮಾಡುತ್ತೇನೆ. ಜನರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಜನಪರ ಕಾರ್ಯವನ್ನು ಮಾಡುತ್ತೇನೆ . ಪಕ್ಷನಿಷ್ಠವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಅವರು ಭರವಸೆ ನೀಡಿದರು.

English summary
The leaders have put their trust and responsibility on me. "I will respond to the problems of the public by acting on their promise," said Eeresha Anchatageri, new mayor of Hubli-Dharwad metropolitan area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X