Dharwad: ಧಾರವಾಡದ ಒಂದೇ ಫ್ಲಾಟ್ನಲ್ಲಿ ₹18 ಕೋಟಿ ಹಣ ಜಪ್ತಿ ಮಾಡಿದ ಐಟಿ ಅಧಿಕಾರಿಗಳು
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಝಣ ಝಣ ಕಾಂಚಾಣ ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಸಹ ಎಲ್ಲೆಡೆ ಜಾಲಾಡುತ್ತಿದ್ದಾರೆ. ಧಾರವಾಡದಲ್ಲಿ ಐಟಿ ಭರ್ಜರಿ ಬೇಟೆಯಾಡಿದ್ದು, ಒಂದೇ ಫ್ಲ್ಯಾಟ್ನಲ್ಲಿ ಬರೋಬ್ಬರಿ ₹18 ಕೋಟಿ ಹಣ ಜಪ್ತಿ ಮಾಡಿದೆ.
ಧಾರವಾಡದ ದಾಸನಕೊಪ್ಪ ಕ್ರಾಸ್ ಬಳಿಯ ಅರ್ನಾ ರೆಸಿಡೆನ್ಸಿಯ ಮೂರನೇ ಮಹಡಿಯಲ್ಲಿರುವ ಬಸವರಾಜ್ ದತ್ತನವರ ಎನ್ನುವರಿಗೆ ಸೇರಿದ ಪ್ಲಾಟ್ ನಂ 303ರ ನಿವಾಸದ ಮೇಲೆ ದಾಳಿ ಐಡಿ ಅಧಿಕಾರಿಗಳು ದಾಳಿ ಮಾಡಿದ್ದು, ಬರೋಬ್ಬರಿ ₹18 ಕೋಟಿ ನಗದು ವಶಕ್ಕೆ ಪಡೆದುಕೊಂಡಿದ್ದಾರೆ.

ಮದ್ಯ ಸಂಗ್ರಹ ಇದೆ ಎಂಬ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ಮನೆಗಳಲ್ಲಿದ್ದ ಎಲ್ಲಾ ಚೀಲಗಳನ್ನು ಪರಿಶೀಲನೆ ಮಾಡಿದ್ದಾರೆ. ಆದ್ರೆ, ಚೀಲಗಳಲ್ಲಿ ಏನೂ ಸಿಗದಿದ್ದಾಗ ಕೊನೆಗೆ ತಿಜೋರಿ ಓಪನ್ ಮಾಡಿದ್ದಾರೆ. ಆಗ ತಿಜೋರಿಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ.
20 ಅಧಿಕಾರಿಗಳಿಂದ ಕಾರ್ಯಾಚರಣೆ
ಸುಮಾರು 6 ವಾಹನಗಳಲ್ಲಿ ಬಂದ 20ಕ್ಕೂ ಅಧಿಕಾರಿಗಳು ದಾಳಿ ಮಾಡಿದ್ದು, 18 ಕೋಟಿ ರೂಪಾಯಿ ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಹಣ ಯಾರದ್ದು? ಇಷ್ಟೊಂದು ಹಣ ಎಲ್ಲಿಂದ ಬಂತು? ಯಾಕಾಗಿ ಇಷ್ಟೊಂದು ಹಣ ಸಂಗ್ರಹಿಸಿಕೊಂಡಿದ್ದಾರೆ ಎಂದು ಹಣದ ಮೂಲದ ಬಗ್ಗೆ ತನಿಖೆ ನಡೆಸಿದ್ದಾರೆ.
ಇತ್ತೀಚೆಗಷ್ಟೇ ಐಟಿ ಅಧಿಕಾರಿಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರಾಮನಕೊಪ್ಪ ಗ್ರಾಮದ ಮನೆಯಲ್ಲಿ ಬರೋಬ್ಬರಿ ₹2 ಕೋಟಿಗೂ ಹೆಚ್ಚು ನಗದು ಸಿಕ್ಕಿತ್ತು. ನಿಂಗಪ್ಪ ಜಟಾದ್ ಎಂಬುವವರ ಮನೆಯಲ್ಲಿ ಪತ್ತೆಯಾಗಿದ್ದ 2 ಕೋಟಿ ರೂ. ಹೆಚ್ಚು ನಗದು ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications