'ಸುದ್ದಿ ಕೊಡುವ ಆತುರದಲ್ಲಿ ಸಮಾಜದ ಮೇಲಿನ ಪರಿಣಾಮ ಮರೆಯಕೂಡದು'
ಧಾರವಾಡ, ಸೆಪ್ಟೆಂಬರ್ 16: ಪ್ರಜಾಪ್ರಭುತ್ವದ ಯಶಸ್ಸಿನಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು. ಪತ್ರಕರ್ತರು ವೃತ್ತಿ ಪರಿಪೂರ್ಣತೆ ಸಾಧಿಸಲು ನಿರಂತರವಾಗಿ ಅಧ್ಯಯನಶೀಲರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅಭಿಪ್ರಾಯ ಪಟ್ಟರು.
ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ವಿವಿಧ ಸಂಸ್ಥೆ ಆಶ್ರಯದಲ್ಲಿ ಕರ್ನಾಟಕ ವಿ.ವಿ.ಯಲ್ಲಿ ಶುಕ್ರವಾರದಿಂದ ಆರಂಭವಾದ ಪತ್ರಿಕೋದ್ಯಮ ವಿದ್ಯಾರ್ಥಿಗಳ ಹಾಗೂ ಗ್ರಾಮೀಣ ಪತ್ರಕರ್ತರ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.

ಪತ್ರಿಕೋದ್ಯಮ ತರಗತಿಗಳಲ್ಲಿ ಸೈದ್ಧಾಂತಿಕ ಆಯಾಮಗಳನ್ನು ಕಲಿಸಿಕೊಡಲಾಗುತ್ತದೆ. ಆದರೆ ವಾಸ್ತವಿಕವಾಗಿ ಅವುಗಳನ್ನು ಅನುಸರಿಸುವ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಮರ್ಥ್ಯ ರೂಪಿಸಿಕೊಳ್ಳುವುದು ಮುಖ್ಯ. ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ನ್ಯಾಯಾಂಗ ಹಾಗೂ ಕಾರ್ಯಾಂಗಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ,ಎಚ್ಚರ ತಪ್ಪದಂತೆ ಸರಿ ದಾರಿಯಲ್ಲಿ ಮುನ್ನಡೆಯಲು ಮಾಧ್ಯಮರಂಗದ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಹೇಳಿದರು.
ಸುದ್ದಿ ಕೊಡುವ ಆತುರವಿದ್ದರೂ ಅವುಗಳು ಸಮಾಜದಲ್ಲಿ ಉಂಟುಮಾಡುವ ಪರಿಣಾಮಗಳ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕು. ಪತ್ರಕರ್ತರಾಗ ಬಯಸುವವರಿಗೆ ರಾಷ್ಟ್ರೀಯ, ಜಾಗತಿಕ ಇತಿಹಾಸ, ವರ್ತಮಾನದ ಆಗುಹೋಗುಗಳು, ಸಮಾಜದ ವಿವಿಧ ಸ್ತರಗಳ ಆಳವಾದ ಪರಿಚಯ ಇರಬೇಕು. ಪ್ರತಿ ದಿನ ಕನಿಷ್ಠ ಎರಡು ಗಂಟೆಗಳ ಅವಧಿಯನ್ನು ಅಧ್ಯಯನಕ್ಕೆ ಮೀಸಲಿಡಬೇಕು ಎಂದರು.

ವರದಿ ಮಾಡುವಾಗ ಘಟನೆಯ ಪೂರ್ವಾಪರದ ಸಮಗ್ರ ತಿಳಿವಳಿಕೆ ಹೊಂದಿರಬೇಕು. ಸರಕಾರದ ಯೋಜನೆ, ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ,ಜನಸಾಮಾನ್ಯರಿಗೆ ತಲುಪಿಸಲು ಮಾಧ್ಯಮಗಳು ಮಹತ್ವದ ಸಾಧನಗಳಾಗಿವೆ. ಎರಡು ದಿನಗಳ ವಿವಿಧ ಗೋಷ್ಠಿಗಳಲ್ಲಿ ಮಾಧ್ಯಮ ವೃತ್ತಿಗೆ ಅಗತ್ಯವಾಗಿರುವ ಎಲ್ಲ ವಿಷಯಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳು,ಪತ್ರಕರ್ತರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಸಿದ್ಧರಾಜು ಮಾತನಾಡಿ, ಅಕಾಡೆಮಿಯು ಪತ್ರಕರ್ತರಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ, ವಿಶೇಷವಾಗಿ ಗ್ರಾಮೀಣ ಮತ್ತು ಯುವ ಪತ್ರಕರ್ತರನ್ನು ಪ್ರೋತ್ಸಾಹಿಸಲು ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದರು.
ಕ.ವಿ.ವಿ. ಕುಲಸಚಿವ ಪ್ರೊ.ಮಲ್ಲಿಕಾರ್ಜುನ ಪಾಟೀಲ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಪ್ರೊ.ವಿಜಯಲಕ್ಷ್ಮಿ ಅಮ್ಮಿನಭಾವಿ, ಮಾಧ್ಯಮ ಅಕಾಡೆಮಿ ಸದಸ್ಯರಾದ ಗಣೇಶ ಕದಂ, ಕಾರ್ಯದರ್ಶಿ ಎಸ್.ಶಂಕರಪ್ಪ ಉಪಸ್ಥಿತರಿದ್ದರು. ಡಾ.ನಾಗರಾಜ ಹಳ್ಳಿ ನಿರೂಪಿಸಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications