ಧಾರವಾಡ: ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಸಾವು
ಧಾರವಾಡ, ಜನವರಿ 02: ಧಾರವಾಡದ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದ ಸುರೇಶ್ ಜಾಡರ್ (50) ಎನ್ನುವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಇಂದು (ಮಂಗಳವಾರ) ಬೆಳಗ್ಗೆ ಸುರೇಶ್ ಜಾಡರ್ ಅವರು ಬೈಕ್ ಮೇಲೆ ತೆರಳುತ್ತಿದ್ದಾಗ ನಗರದ ಸಂಪಿಗೆ ನಗರ ಬಡಾವಣೆಯಲ್ಲಿ ತೆರಳುತ್ತಿದ್ದಾಗ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ.

ಪರಿಣಾಮ ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications