ಗಣರಾಜ್ಯೋತ್ಸವಕ್ಕೆ ಕೆಲಗೇರಿ ಕಲಾವಿದರು ಅಯ್ಕೆ
ಜನವರಿ 26 ರಂದು ನವದೆಹಲಿಯಲ್ಲಿ ರಾಜಪಥ್ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧಾರವಾಡದ ಕೆಲಗೇರಿಯ ಶ್ರೀ ದುರ್ಗಾದೇವಿ ಜಗ್ಗಲಿಗೆ ಮೇಳದ ಇಬ್ಬರು ಕಲಾವಿದರಿಗೆ ಭಾಗವಹಿಸುವ ಅವಕಾಶ ದೊರೆತಿದೆ.
ಧಾರವಾಡ, ಜನವರಿ 17: ಗಣತಂತ್ರ ದಿನ(ಜನವರಿ 26) ದಂದು ನವದೆಹಲಿಯಲ್ಲಿ ರಾಜಪಥ್ ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧಾರವಾಡದ ಕೆಲಗೇರಿಯ ಶ್ರೀ ದುರ್ಗಾದೇವಿ ಜಗ್ಗಲಿಗೆ ಮೇಳದ ಇಬ್ಬರು ಕಲಾವಿದರಿಗೆ ಭಾಗವಹಿಸುವ ಅವಕಾಶ ದೊರೆತಿದೆ.
ಕರ್ನಾಟಕ ಸರಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕದ ಜನಪದ ಕಲೆಗಳನ್ನು ಬಿಂಬಿಸುವ ಸ್ತಭ್ಧಚಿತ್ರವನ್ನು ಈ ಬಾರಿ ಗಣರಾಜ್ಯೋತ್ಸವದಲ್ಲಿ ಪ್ರದರ್ಶಿಸಲು ಸಿದ್ಧತೆ ನಡೆಸಿದೆ.ದೇಶದ ಏಳು ರಾಜ್ಯಗಳಿಗೆ ಗಣರಾಜ್ಯೋತ್ಸವದಲ್ಲಿ ಸ್ತಬ್ಧಚಿತ್ರ ಪ್ರದರ್ಶಿಸುವ ಅವಕಾಶವನ್ನು ಕೇಂದ್ರ ಸರಕಾರ ಕಲ್ಪಿಸಿದೆ. ಕರ್ನಾಟಕವು ಸತತ ಏಳನೇ ಬಾರಿಗೆ ಗಣರಾಜ್ಯೋತ್ಸವದಲ್ಲಿ ಸ್ತಬ್ಧಚಿತ್ರ ಪ್ರದರ್ಶನ ಮಾಡುತ್ತಿದೆ.

ಗೊರವರ ಕುಣಿತ,ಪೂಜಾ ಕುಣಿತ,ಯಕ್ಷಗಾನ,ನಂದಿಕೋಲು,ಕಿನ್ನರಿ,ಜಗ್ಗಲಿಗೆ ಮುಂತಾದ 12 ಕನ್ನಡದ ಜನಪದ ಕಲೆಗಳನ್ನು ದೇಶಕ್ಕೆ ಪರಿಚಯಿಸುವ ಈ ಸ್ತಭ್ಧಚಿತ್ರದಲ್ಲಿ ಧಾರವಾಡದ ಕೆಲಗೇರಿಯ ಜಗ್ಗಲಿಗೆ ಕಲಾವಿದರಾದ ಬಸಪ್ಪ ಹಂಚಿನಮನಿ ಹಾಗೂ ದೇವೇಂದ್ರ ಬೇವಿನಮರದ ಅವರು ಭಾಗವಹಿಸುತ್ತಿದ್ದಾರೆ.
ಈಗಾಗಲೇ ನವದೆಹಲಿಯ ರಕ್ಷಣಾ ಸಚಿವಾಲಯದ ಶಿಬಿರದಲ್ಲಿ ಸ್ತಬ್ಧಚಿತ್ರ ಪ್ರದರ್ಶನದ ತಾಲೀಮಿನಲ್ಲಿ ಅವರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಪ್ರಸಿದ್ಧ ಮೈಸೂರು ದಸರಾ,ಹಂಪಿ ಉತ್ಸವಗಳಲ್ಲಿ ಜಗ್ಗಲಿಗೆ ಪ್ರದರ್ಶನ ನೀಡಿರುವ ಇವರು. ಫಕೀರಪ್ಪ ಹಂಚಿನಮನಿ,ಶಿವಪ್ಪ ಮಾಳಗಿ ,ಭೀಮಪ್ಪ ಮಾಳಗಿ ಸೇರಿದಂತೆ ಕೆಲಗೇರಿಯ ಹಿರಿಯ ಕಲಾವಿದರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications