ಕಲಘಟಗಿ: ಬಿಜೆಪಿ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ ನಿಧನ
ಕಲಘಟಗಿ, ಜುಲೈ, 09: ಕ್ಷೇತ್ರದ ಮಾಜಿ ಬಿಜೆಪಿ ಶಾಸಕರಾಗಿದ್ದ ಸಿ.ಎಂ. ನಿಂಬಣ್ಣವರ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೆಲವು ದಿನಗಳ ಹಿಂದೆ ಹೃದಯ ಸಂಬಂಧಿತ ಚಿಕಿತ್ಸೆ ಪಡೆಯಲು ಬೆಂಗಳೂರಿಗೆ ತೆರಳಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸಿ.ಎಂ.ನಿಂಬಣ್ಣವರ ನಡೆದುಬಂದ ಹಾದಿ
ಸಿ.ಎಂ.ನಿಂಬಣ್ಣವರ ಅವರು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗೇದೇವರಕೊಪ್ಪ ಗ್ರಾಮದ ರೈತ ಕುಟುಂಬದಲ್ಲಿ 1947ರಲ್ಲಿ ಜನಿಸಿದವರಾಗಿದ್ದರು. ಇವರ ಶಿಕ್ಷಣವನ್ನು ನೋಡುವುದಾದರೆ, ಧಾರವಾಡದ ಜೆಎಸ್ಎಸ್ ಬನಶಂಕರಿ ಆರ್ಟ್ಸ್ ಕಾಲೇಜ್ನಿಂದ ಇಂಗ್ಲಿಷ್ ವಿಷಯದಲ್ಲಿ ಬಿಎ ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ ಎಂಎ ಹಾಗೂ ಎಲ್ಎಲ್ಬಿ ಪದವಿ, ಮೈಸೂರು ವಿವಿಯಿಂದ B.Ed. ಪದವಿಯನ್ನು ಪಡೆದಿದ್ದಾರೆ.
ನಂತರ ಕಲಘಟಗಿ ತಾಲೂಕಿನ ಮಿಶ್ರೀಕೋಟಿಯಲ್ಲಿರುವ ಸಹಕಾರಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯಲ್ಲಿ 1970ರಲ್ಲಿ ಇಂಗ್ಲಿಷ್ ಶಿಕ್ಷಕರಾಗಿ ಸೇವೆ ಆರಂಭಿಸಿ ಮುಂದೆ ಮುಖ್ಯೋಪಾಧ್ಯಾಯರಾಗಿ ಪದೋನ್ನತಿ ಹೊಂದಿದರು. ಬಳಿಕ ಅದೇ ಸಂಸ್ಥೆಯ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದರು.
ಅಷ್ಟೇ ಅಲ್ಲದೆ ದೇಣಿಗೆ ಸಂಗ್ರಹಿಸಿ ಆಡಳಿತ ವರ್ಗದ ಸಹಕಾರದಿಂದ ಸಂಸ್ಥೆಗೆ ಅವಶ್ಯವಿದ್ದ 13 ಕೊಠಡಿಗಳ ಬೃಹತ್ ಕಟ್ಟಡ ನಿರ್ಮಿಸುವ ಮೂಲಕ ಜನರಿಂದ ಭಾರೀ ಮೆಚ್ಚುಗೆ ಪಡೆದಿದ್ದರು. ಹಾಗೆಯೇ ಶಿಕ್ಷಣ ಇಲಾಖೆಯಿಂದ ಅತ್ಯತ್ತಮ ಶಿಕ್ಷಕ ಪ್ರಶಸ್ತಿಯನ್ನೂ ಪಡೆದಿದ್ದರು. 25 ವರ್ಷಗಳ ಸತತ ಸೇವೆ ನಂತರ ಇನ್ನೂ 10 ವರ್ಷಗಳ ಸೇವಾವಧಿ
ಇರುವಾಗಲೇ (1994 ಸೆಪ್ಟೆಂಬರ್ 30ರಂದು) ಸ್ವಯಂ ಸೇವಾ ನಿವೃತ್ತಿ ಹೊಂದಿ ಸಾರ್ವಜನಿಕ ಸೇವೆಗೆ ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು.
ಸ್ವಯಂ ಸೇವಾ ನಿವೃತ್ತಿ ನಂತರ ವಕೀಲ ವೃತ್ತಿ ಆರಂಭಿಸಿದ್ದ ಅವರು ಕಲಘಟಗಿ ತಾಲೂಕಿನ ಗ್ರಾಮಾಂತರ ಜನರ ನಡುವಿನ ಅನೇಕ ಮೊಕದ್ದಮೆಗಳನ್ನು ರಾಜಿ ಸಂಧಾನದಿಂದ ಬಗೆಹರಿಸಿದ್ದರು. ಈ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ವಿಶೇಷ ಕಾಳಜಿ ವಹಿಸಿದ್ದರು. ಜೊತೆಗೆ ವಕೀಲರ ಸಂಘದ ಅಧ್ಯಕ್ಷರಾಗಿ ಸತತ ಎರಡನೇ ಅವಧಿಗೆ ಕಾರ್ಯ ನಿರ್ವಹಿಸಿದ್ದವರಾಗಿದ್ದರು.
1980 ರಿಂದ ಕಲಘಟಗಿ ರೋಟರಿ ಸಂಸ್ಥೆಯ ಸಂಸ್ಥಾಪಕ ಸದಸ್ಯರಾಗಿ ಸೇವೆ. 1986-87ರಲ್ಲಿ ಅದೇ ಸಂಸ್ಥೆಯ ಅಧ್ಯಕ್ಷರಾಗಿ ಸಲ್ಲಿಸಿದ ಸಾಮಾಜಿಕ ಸೇವೆಗಾಗಿ ಸಂಸ್ಥೆಗೆ 5 ವಿಶೇಷ ಪ್ರಶಸ್ತಿಗಳನ್ನು ಪಡೆದುಕೊಂಡು. ಅಲ್ಲದೆ ವೈಯಕ್ತಿಕವಾಗಿ ಅತ್ಯುತ್ತಮ ಅಧ್ಯಕ್ಷ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇನ್ನು 2005-06ರಲ್ಲಿ ಎರಡನೇ ಬಾರಿಗೆ ರೋಟರಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಕೀರ್ತಿ ಇವರದ್ದಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications