ರೈತರಿಗೆ ಚಿತ್ರರಂಗದ ಬೆಂಬಲ, ಭಾಷಣಕ್ಕೆ ಟ್ವೀಟ್ ಪ್ರತಿಕ್ರಿಯೆ
ಹುಬ್ಬಳ್ಳಿ, ಸೆ. 13: ಕಳಸಾ ಬಂಡೂರಿ ನಾಲಾ ಯೋಜನೆಗೆ ಆಗ್ರಹಿಸಿ ನರಗುಂದದ ರೈತರು 60ದಿನಗಳಿಂದ ನಡೆಸಿರುವ ಪ್ರತಿಭಟನೆ, ಹೋರಾಟದ ಬಗ್ಗೆ ಕನ್ನಡ ಚಿತ್ರರಂಗಕ್ಕೆ ಈಗ ನೆನಪು ಮಾಡಿಕೊಟ್ಟವರು ಯಾರು? ಹುಬ್ಬಳ್ಳಿಯಲ್ಲಿ ಮೆರವಣಿಗೆ, ಭಾಷಣ ಮಾಡಿ ಸಾಧಿಸಿದ್ದಾದರೂ ಏನು? ವೇದಿಕೆ ಮೇಲೆ ರೈತರಿಗೆ ಜಾಗ ಏನಾರಾ ಕೊಟ್ಟಿದ್ರಾ? ಟ್ವಿಟ್ಟರ್ ನಲ್ಲಿ ನಾವು ಬೆಂಬಲಿಸುತ್ತೇವೆ ಎಂದು ಟ್ರೆಂಡಿಂಗ್ ಮಾಡಬೇಕಾ? ಹೀಗೆ ನಾನಾ ರೀತಿ ಪ್ರತಿಕ್ರಿಯೆಗಳು ಹರಿದು ಬಂದಿವೆ.
ಕಾವೇರಿ ಹೋರಾಟ, ಗೋಕಾಕ್ ಚಳವಳಿ ನೆನಪಿಸುವಂತೆ ಗಂಡು ಮೆಟ್ಟಿನ ನಾಡಿನಲ್ಲಿ ಸ್ಯಾಂಡಲ್ ವುಡ್ ಮಂದಿ ಮೆರವಣಿಗೆ, ವೇದಿಕೆಯಲ್ಲಿ ಭಾಷಣ ಕನ್ನಡ ಸಿನಿತಾರೆಗಳಿಂದ ಕೇಳಿ ಬಂದಿದೆ. [ಮೋದಿಗೆ ಕರ್ನಾಟಕದ ಕೂಗು ಕೇಳಿಸಲಿ: ಚಿತ್ರರಂಗ]
ನಟ, ನಟಿಯರು, ತಂತ್ರಜ್ಞರು, ನಿರ್ಮಾಪಕ, ನಿರ್ದೇಶಕರು ಸೇರಿದಂತೆ 300ಕ್ಕೂ ಅಧಿಕ ಸಿನಿಮಾ ಮಂದಿ ಎರಡು ವಾಹನಗಳಲ್ಲಿ ಮೆರವಣಿಗೆ ಬಂದು ಸಂಗೊಳ್ಳಿ ರಾಯಣ್ಣ ವೇದಿಕೆ ಏರಿ ಭಾಷಣ ಮಾಡಿ ಹೋಗಿದ್ದಾರೆ.[ರಿಯಲ್ ಸ್ಟಾರ್ ಉಪ್ಪಿಯಿಂದ ಪರಿಹಾರ]
ಅಪ್ಪಾಜಿ ಸ್ಪೂರ್ತಿಯಿಂದ ನಾವು ಈ ಹೋರಾಟಕ್ಕೆ ಬಂದಿದ್ದೇವೆ. ರೈತರು ಯಾವುದೇ ಕಾರಣಕ್ಕೂ ಭಯಪಡಬೇಕಿಲ್ಲ,ನಿಮ್ಮ ಪ್ರತಿ ಹೋರಾಟ ಚಿತ್ರರಂಗ ಭಾಗಿಯಾಗುತ್ತೆ.ತಕ್ಷಣ ಸರ್ಕಾರ ಸಮಸ್ಯೆ ಬಗೆ ಹರಿಸಬೇಕು. ನೆಲ, ಜಲ, ಭಾಷೆಗೆ ಸಂಬಂಧಿಸಿದ ಹೋರಾಟಕ್ಕೆ ಸದಾ ಸಿದ್ಧನಿದ್ದೇನೆ. ಯಾವಾಗ ಕರೆದರೂ ಹೋರಾಟಕ್ಕೆ ಹೋಗಲು ರೆಡಿ. ಹುಬ್ಬಳ್ಳಿಯಲ್ಲಿನ ಬೃಹತ್ ಸಮಾವೇಶ ಚಿತ್ರರಂಗದ ಪಾಲಿಗೆ ಐತಿಹಾಸಿಕವಾಗಲಿದೆ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ. ತಾರೆಗಳ ಭಾಷಣಕ್ಕೆ ಬಂದ ಪ್ರತಿಕ್ರಿಯೆಗಳನ್ನು ಮುಂದೆ ಓದಿ...

ವಾಣಿಜ್ಯ ಮಂಡಳಿ ಆಯೋಜನೆಯ ಮೆರವಣಿಗೆ
ಕಳಸಾ-ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ರೈತರು ಕಳೆದ ಹಲವಾರು ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟಕ್ಕೆ ಚಿತ್ರರಂಗದ ಸಂಪೂರ್ಣ ಬೆಂಬಲವಿದೆ ಎಂದ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಡ ಹೇರುವ ನಿಟ್ಟಿನಲ್ಲಿ ಇಡೀ ಚಿತ್ರರಂಗವೇ ರೈತರ ಹೋರಾಟಕ್ಕೆ ಬೆನ್ನೆಲುಬಾಗಿ ನಿಂತಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಘೋಷಿಸಿಕೊಂಡಿದೆ.
|
ಪ್ರತಿಭಟನೆಗೂ ಮುನ್ನವೇ ಸಾರ್ವಜನಿಕರ ಪ್ರಶ್ನೆ
ಕನ್ನಡ ಚಿತ್ರರಂಗಕ್ಕೆ ಏಕೆ ಇಷ್ಟು ಕಾಳಜಿ ಇದ್ದಕ್ಕಿದ್ದಂತೆ ಬಂದಿದೆ ಪ್ರತಿಭಟನೆಗೂ ಮುನ್ನವೇ ಸಾರ್ವಜನಿಕರ ಪ್ರಶ್ನಿಸಿದ್ದರು.
|
ನಟಿ ರಾಗಿಣಿ ದ್ವಿವೇದಿ ಸಂದೇಶ
ನಟಿ ರಾಗಿಣಿ ದ್ವಿವೇದಿ ಟ್ವೀಟ್ ಸಂದೇಶ ಕಳಿಸಿ, ನಾನು ಹುಷಾರಿಲ್ಲದ ಕಾರಣ, ನಿಮ್ಮ ಜೊತೆ ಪ್ರತಿಭಟನೆಗೆ ಬರಲಾಗಿಲ್ಲ. ರೈತರ ಪ್ರತಿಭಟನೆಗೆ ನನ್ನ ಬೆಂಬಲ ಸದಾಕಾಲ ಇರುತ್ತದೆ ಎಂದಿದ್ದಾರೆ.
|
ಕಳಸಾ ಪ್ರತಿಭಟನೆ. ಸಿನಿ ತಾರೆಯರ ಮೆರವಣಿಗೆ
ಕಳಸಾ ಪ್ರತಿಭಟನೆ. ಸಿನಿ ತಾರೆಯರ ಮೆರವಣಿಗೆ
|
ಮೂರು ಸಾವಿರ ಮಠದ ರಸ್ತೆ
ಮೂರು ಸಾವಿರ ಮಠದ ರಸ್ತೆ ಪ್ರತಿಭಟನೆ ಮೆರವಣಿಗೆಗೂ ಮುನ್ನ ಹಾಗೂ ನಂತರ
|
ರೈತ ಬಂಧುಗಳ ಜೊತೆ ನಾವಿದ್ದೇವೆ
ರೈತ ಬಂಧುಗಳ ಜೊತೆ ನಾವಿದ್ದೇವೆ ಎನ್ನುವ ಚಿತ್ರರಂಗ 60 ದಿನ ಆದಮೇಲೆ ಬಂದಿದ್ದೇಕೆ? #WeSupportKalasaBanduri ಟ್ರೆಂಡ್ ಮಾಡಬೇಕಾ?
|
ಪ್ರಧಾನಿಗೆ ಮನವಿ ಸಲ್ಲಿಸಿದ ಟ್ವೀಟ್
ಪ್ರಧಾನಿ ಕಚೇರಿ ಟ್ವಿಟ್ಟರ್ ಐಡಿಗೆ ಮನವಿ ಸಲ್ಲಿಸಿದ ಟ್ವೀಟ್
|
ರೋಡ್ ಶೋ, ಮೆರವಣಿಗೆಯಿಂದ ಯಾರಿಗೆ ಲಾಭ
ರೋಡ್ ಶೋ, ಮೆರವಣಿಗೆಯಿಂದ ಯಾರಿಗೆ ಲಾಭ, ಕನ್ನಡ ಚಿತ್ರರಂಗದ ಮಂದಿ ಏನಾದರೂ ಮನವಿ ಪತ್ರ ಯಾರಿಗಾದರೂ ಕೊಟ್ರಾ?
|
ತಾರೆಗಳು ಬಂದರೆ ಮಾಧ್ಯಮಗಳಿಂದ ಲೈವ್
ತಾರೆಗಳು ಬಂದರೆ ಮಾಧ್ಯಮಗಳಿಂದ ಲೈವ್ ಕವರೇಜ್ ಸಿಗುತ್ತಿದೆ. ಇಷ್ಟು ದಿನ 10 ನಿಮಿಷದ ಕಾರ್ಯಕ್ರಮವೂ ಪ್ರಸಾರವಾಗಿಲ್ಲ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications