ನವಲಗುಂದದಲ್ಲಿ ಮತ್ತೆ ಹೊತ್ತಿಕೊಂಡ ಕಳಸಾ-ಬಂಡೂರಿ ಕಿಚ್ಚು
ಧಾರವಾಡ, ಡಿಸೆಂಬರ್ 20: ಕಳಸಾ-ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಗಾಗಿ ಆಗ್ರಹಿಸಿ ನಿರಂತರ ಧರಣಿ ಸತ್ಯಾಗ್ರಹ 873 ನೇ ದಿನಕ್ಕೆ ಕಾಲಿಟ್ಟಿದ್ದರೂ ಬೇಡಿಕೆ ಈಡೇರದ ಹಿನ್ನಲೆಯಲ್ಲಿ ಪ್ರಶ್ನಾತೀತ ರೈತ ಹೋರಾಟ ಸಮಿತಿ ಇಂದು (ಬುಧವಾರ) ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣ ಬಂದ್ ಗೆ ಕರೆ ನೀಡಿದೆ.
ಬಂದ್ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನವಲಗುಂದ ಪಟ್ಟಣದಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಅಂಗಡಿ ಮುಗ್ಗಟ್ಟುಗಳು ಬಾಗಿಲು ಮುಚ್ಚಿವೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಡಿಸೆಂಬರ್ 15ರೊಳಗೆ ಮಹದಾಯಿ ನದಿ ನೀರು ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಯಾವುದೇ ಭರವಸೆ ಈಡೇರಿಸಿಲ್ಲ ಇದರಿಂದ ಕುಪಿತಗೊಂಡ ವಿವಿಧ ಸಂಘನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನವಲಗುಂದ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.












Click it and Unblock the Notifications