ಎಂ.ಎಂ.ಕಲಬುರ್ಗಿ ಹತ್ಯೆ ತನಿಖೆ ನಡೆಸಲಿದೆ ಹೊಸ ತಂಡ
ಬೆಂಗಳೂರು, ಜನವರಿ 29 : ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಪುನಃ ಆರಂಭಿಸಲಾಗುತ್ತದೆ. 20 ಅಧಿಕಾರಿಗಳ ಸಿಐಡಿಯ ಹೊಸ ತಂಡ ಇದುವರೆಗೂ ತನಿಖೆ ನಡೆಸಿದ ತಂಡ ಸಂಗ್ರಹಿಸಿದ ಮಾಹಿತಿಯನ್ನು ಆಧಾರವಾಗಿ ಇಟ್ಟುಕೊಂಡು ಹೊಸದಾಗಿ ತನಿಖೆ ಆರಂಭಿಸಲಿದೆ.
2015ರ ಆಗಸ್ಟ್ 30ರಂದು ಧಾರವಾಡದ ಕಲ್ಯಾಣ ನಗರದಲ್ಲಿರುವ ಎಂ.ಎಂ.ಕಲಬುರ್ಗಿ ಅವರ ನಿವಾಸದಲ್ಲಿ ಅಪರಿಚಿತರು ಕಲಬುರ್ಗಿ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು. [ಕಲಬುರ್ಗಿ ಹತ್ಯೆ ಕೇಸ್ : ಸಿಐಡಿ ವರದಿಯಲ್ಲೇನಿದೆ?]

ಕರ್ನಾಟಕ ಸರ್ಕಾರ ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ಇದುವರೆಗಿನ ತನಿಖೆಯಲ್ಲಿ ಆರೋಪಿಗಳ ಕುರಿತು ಸುಳಿವು ಪತ್ತೆಯಾಗಿಲ್ಲ. ಈಗ 20 ಅಧಿಕಾರಿಗಳ ಹೊಸ ತಂಡ ತನಿಖೆಯನ್ನು ಮತ್ತೊಮ್ಮೆ ಆರಂಭಿಸಲಿದೆ. ['ಕಲಬುರ್ಗಿ ಹತ್ಯೆ ತನಿಖೆ ಸಿಬಿಐಗೆ ವಹಿಸಲು ಸಿದ್ಧ']
ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ ಮತ್ತು ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ನಡುವೆ ಸಾಮ್ಯತೆ ಇದೆ. ಮೂರು ಹತ್ಯೆಗಳನ್ನು ಒಂದು ಗುಂಪು ಮಾಡಿರಬಹುದು ಎಂದು ಸಿಐಡಿ ಶಂಕೆ ವ್ಯಕ್ತಪಡಿಸಿದೆ. ಹಿರಿಯ ಸಿಪಿಐ ನಾಯಕ ಹಾಗೂ ಮಹಾರಾಷ್ಟ್ರ ವಿಚಾರವಾದಿ ಗೋವಿಂದ್ ಪನ್ಸಾರೆ ಮತ್ತು ಮೂಢನಂಬಿಕೆಗಳ ವಿರೋಧಿ ಹೋರಾಟಗಾರ ಡಾ. ನರೇಂದ್ರ ದಾಬೋಲ್ಕರ್ ಅವರ ಹತ್ಯೆಯ ತನಿಖೆ ಇನ್ನೂ ಅಂತಿಮಗೊಂಡಿಲ್ಲ.[ಕಲಬುರ್ಗಿ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು ಹೇಗೆ?]
ಹೊಸದಾಗಿ ತನಿಖೆ ಆರಂಭಿಸಲಿರುವ ಸಿಐಡಿ ಅಧಿಕಾರಿಗಳ ತಂಡ ಇಷ್ಟು ದಿನ ನಡೆದ ತನಿಖೆಯ ವಿವರವನ್ನು ಸಂಗ್ರಹಣೆ ಮಾಡಲಿದ್ದು, ಅದನ್ನು ಪರಿಶೀಲಿಸಿ ತನಿಖೆ ಮುಂದುವರೆಸಲಿದೆ. ಕಲಬುರ್ಗಿ ಅವರನ್ನು ಹತ್ಯೆ ಮಾಡಿದ ಹಂತಕರು ಹುಬ್ಬಳ್ಳಿ ಲಾಡ್ಜ್ನಲ್ಲಿ ವಾಸ್ತವ್ಯ ಹೂಡಿದ್ದರು ಎಂಬ ಮಾಹಿತಿ ತಿಳಿದುಬಂದಿದ್ದು, ಈ ಕುರಿತು ಮತ್ತೊಮ್ಮೆ ತನಿಖೆ ನಡೆಯಲಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications