'ಧಾರವಾಡದಲ್ಲಿ ಇನ್ಫೋಸಿಸ್ ಘಟಕ ಸ್ಥಾಪನೆ ಖಚಿತ'
ಬೆಂಗಳೂರು, ಜ.1: ಇನ್ಫೋಸಿಸ್ ಸಂಸ್ಥೆ ಧಾರವಾಡದಲ್ಲಿ ಬಂಡವಾಳ ಹೂಡಿಕೆ ಮಾಡಲಿದ್ದು, ಅಗತ್ಯ ಭೂಮಿಯನ್ನು ಈಗಾಗಲೇ ಖರೀದಿಸಲಾಗಿದೆ ಎಂದು ಐಟಿ ಸಚಿವ ಎಸ್ ಆರ್ ಪಾಟೀಲ್ ಹೇಳಿದ್ದಾರೆ. ಇದರಿಂದಾಗಿ ಇನ್ಫೋಸಿಸ್ ಸಂಸ್ಥೆ ಕರ್ನಾಟಕದಲ್ಲೇ ಬಂಡವಾಳ ಹೂಡಿಕೆ ಮಾಡುವುದು ಖಚಿತವಾಗಿದೆ.
ಹುಬ್ಬಳ್ಳಿ-ಧಾರವಾಡದಲ್ಲಿ ದೇಶದ ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆ ತನ್ನ ಹೊಸ ಘಟಕವನ್ನು ಸ್ಥಾಪನೆ ಮಾಡಲಿದೆ. ಸುಮಾರು 1ರಿಂದ 3 ಸಾವಿರ ಕೋಟಿ ರು ಬಂಡವಾಳ ಹೂಡಿಕೆ ಮಾಡಲಿದೆ. ಸುಮಾರು 6 ಸಾವಿರ ಜನರಿಗೆ ಉದ್ಯೋಗ ಅವಕಾಶ ಸಿಗಲಿದೆ ಎಂದು ಸಚಿವ ಪಾಟೀಲ್ ಹೇಳಿದರು. [ಇನ್ಫೋಸಿಸ್ ಶಿಫ್ಟಿಂಗ್: ಸಿಎಂ ಸಿದ್ದು ಜಾಣ ಉತ್ತರ]
ಸರೋಜಿನಿ ಮಹಿಷಿ ವರದಿ ಜಾರಿ: ಖಾಸಗಿ ವಲಯ, ಐಟಿ ಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ಅವಕಾಶ ಸಿಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಈ ಕುರಿತಂತೆ ಸರೋಜಿನಿ ಮಹಿಷಿ ವರದಿ ಜಾರಿಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಂತಿಮ ಸೂತ್ರ ತಯಾರಿಸಲಾಗುವುದು ಎಂದು ಎಸ್ ಆರ್ ಪಾಟೀಲ್ ತಿಳಿಸಿದರು. [80 ಲಕ್ಷ ಉದ್ಯೋಗ ಅವಕಾಶ ಏರಿಕೆ ಗುರಿ]

ಎರಡನೇ ಸ್ತರದ ನಗರಗಳಿಗೆ ಐಟಿ ಬಿಟಿ ಉದ್ಯಮ ಕರೆದೊಯ್ಯಲಾಗುವುದು. ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ, ಮಂಗಳೂರು, ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ ಐಟಿ ಉದ್ಯಮ ಸ್ಥಾಪನೆಗೆ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದರು.
ಭೂಮಿ ನೀಡುವ ಸಂಬಂಧ ಉಂಟಾಗಿರುವ ಅವ್ಯವಸ್ಥೆಯಿಂದ ಬೇಸತ್ತು ದೇವನಹಳ್ಳಿ ಯೋಜನೆಯನ್ನು ಇನ್ಫೋಸಿಸ್ ಸ್ಥಗಿತಗೊಳಿಸಿ ದೊಡ್ಡ ಸಂಚಲನ ಮೂಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು. [ಟಿಸಿಎಸ್ ವಿರುದ್ಧ ಉದ್ಯೋಗಿಗಳ ದಂಗೆ ]
ವಾರ್ಷಿಕವಾಗಿ ಸುಮಾರು 8 ಬಿಲಿಯನ್ ಆದಾಯವನ್ನು ಹೊಂದಿರುವ ಸುಮಾರು 1.4 ಲಕ್ಷ ಉದ್ಯೋಗಿಗಳನ್ನು ಹೊಂದಿರುವ ಬೆಂಗಳೂರು ಮೂಲದ ದೇಶದ ಎರಡನೇ ಅತಿದೊಡ್ಡ ಸಂಸ್ಥೆ ಇನ್ಫೋಸಿಸ್ ಅಸಮಾಧಾನ ಸಹಜವಾಗಿದೆ ಎಂದು ಇತರೆ ಉದ್ಯಮಿಗಳು ದನಿಗೂಡಿಸಿದ್ದರು. ನಂತರ ಎಚ್ಚೆತ್ತುಕೊಂಡ ಸರ್ಕಾರ ಐಟಿ ಉದ್ಯಮಿಗಳನ್ನು ಹಿತ ಕಾಯಲು ಮುಂದಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications