ಹುಬ್ಬಳ್ಳಿ: ಔಷಧ ಮಾರಾಟ ಪ್ರತಿನಿಧಿಗಳ ಬೇಡಿಕೆಗಳೇನು?
ಹುಬ್ಬಳ್ಳಿ, ಡಿಸೆಂಬರ್, 17: ಜೀವನಾವಶ್ಯಕ ಔಷಧಿಗಳ ಮೇಲಿನ ತೆರಿಗೆ ಹಿಂತೆಗೆದು ಬೆಲೆ ಇಳಿಸಿ, ಔಷಧಿ ಮಾರಾಟ ಪ್ರತಿನಿಧಿಗಳನ್ನು ಕಾನೂನು ಪ್ರಕಾರ ನೇಮಕ ಮಾಡ್ಕೊಳ್ಳಿ, ರಜೆ, ಪ್ರಮೋಷನ್ ಸೇರಿದಂತೆ ನಾನಾ ಸೌಕರ್ಯ ಒದಗಿಸಿ ಇದು ಔಷಧ ಮಾರಾಟ ಪ್ರತಿನಿಧಿಗಳ ಒತ್ತಾಯ.
ಫೆಡರೇಶನ್ ಆಫ್ ಮೆಡಿಕಲ್ ಆಯ್ಯಂಡ್ ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಅಸೋಸಿಯೇಶನ್ ಆಫ್ ಇಂಡಿಯಾ( FMRI) ನೀಡಿದ ಕರೆಯ ಅನ್ವಯ ಔಷಧ ಮಾರಾಟ ಪ್ರತಿನಿಧಿಗಳು ಸಿಐಟಿಯು (CITU) ಘಟಕದ ನೇತೃತ್ವದ ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಈ ಜಾಥಾ ಇಂದಿರಾ ಗಾಜಿನ ಮನೆಯಿಂದ ಹೊರಟು ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡಿತು.[ನಮಗೂ ದೀಪಾವಳಿ ಬೋನಸ್ ಕೊಡಿ ಎಂದ್ರು ಗುತ್ತಿಗೆ ಪೌರ ಕಾರ್ಮಿಕರು]

ಈ ಸಂದರ್ಭದಲ್ಲಿ ಮಾತನಾಡಿದ ಸಾಯಿಕಿರಣ ಅರ್ಕಸಾಲಿ, ಸರಕಾರಗಳ ನಿರ್ಲಕ್ಷ್ಯ ಧೋರಣೆಯಿಂದ ಔಷಧ ಕಂಪನಿಗಳ ಮಾಲೀಕರು ಕಾನೂನುಗಳನ್ನು ಉಲ್ಲಂಘಿಸುತ್ತಿದ್ದಾರೆ. ಇದರಿಂದ ಮಾರಾಟ ಪ್ರತಿನಿಧಿಗಳಿಗೆ ತೊಂದರೆಯಾಗುತ್ತಿದೆ ಎಂದರು.
ಮಹೇಶ ಪತ್ತಾರ ಮಾತನಾಡಿ, ಮಾರುಕಟ್ಟೆಯಲ್ಲಿ ಕಳಪೆ ಮತ್ತು ನಕಲಿ ಔಷಧಗಳು ಸಾಕಷ್ಟು ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಇದಕ್ಕೆ ಕೆಲವೊಂದು ಕಂಪನಿಗಳೇ ಸಹಕರಿಸುತ್ತಿವೆ. ಔಷಧ ದರಗಳು ಭಾರೀ ಏರಿಕೆಯಾಗುತ್ತಿವೆ. ಇದರಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತಿದ್ದರೂ ಸರ್ಕಾರ ಮಾತ್ರ ಮೌನಧೋರಣೆ ತಾಳಿದೆ ಎಂದು ಆರೋಪಿಸಿದರು.[ಕ್ಯಾನ್ಸರ್, ಹೃದಯ ಸಂಬಂಧಿ ಔಷಧಿಗಳು ಕಡಿಮೆ ಬೆಲೆಯಲ್ಲಿ ಲಭ್ಯ]
ಔಷಧ ಮಾರಾಟ ಮತ್ತು ಪ್ರಚಾರದಲ್ಲಿ ತೊಡಗಿಕೊಂಡಿರುವ ಪ್ರತಿನಿಧಿಗಳಿಗೆ ಕಾನೂನು ಪ್ರಕಾರ ನೇಮಕಾತಿ ಪತ್ರ ನೀಡುವುದಿಲ್ಲ, ರಜೆ, ಪ್ರಮೋಷನ್ ಸೇರಿದಂತೆ ಯಾವುದೇ ಸೌಕರ್ಯಗಳಿಲ್ಲ. ಮಹಿಳೆಯರಿಗೆ ಹೆರಿಗೆ ರಜೆ ನೀಡುತ್ತಿಲ್ಲ ಎಂದು ದೂರಿದರು. ದೇಶಾದ್ಯಂತ ನಡೆದ ಪ್ರತಿಭಟನೆಯಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಔಷಧ ಮಾರಾಟ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
-
ರಾಶಿಯಷ್ಟೇ ಅಲ್ಲ, ದಿಕ್ಕು ಕೂಡಾ ಮುಖ್ಯ: ರಾಶಿಗನುಗುಣವಾಗಿ ನಿಮ್ಮ ಅದೃಷ್ಟ ದಿಕ್ಕು ಯಾವುದು ಗೊತ್ತಾ? -
ಮೊಡವೆ ಕಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವ ಸಿಂಪಲ್ ಟ್ರಿಕ್ಸ್ : ಬೇಸಿಗೆಯಲ್ಲಿ ಅನುಸರಿಸಿ ಈ 9 ಟಿಪ್ಸ್ -
ಮನೆ ಕಟ್ಟುವಾಗ ವಾಸ್ತು ಪಾಲಿಸದಿದ್ದರೆ ಏನಾಗುತ್ತದೆ? ಇಲ್ಲಿವೆ 5 ಪ್ರಮುಖ ನಿಯಮಗಳು -
Vastu Tips: ಮನೆಯಲ್ಲಿ ಎರಡು ಕನ್ನಡಿಗಳು ಎದುರುಬದರಿನಲ್ಲಿ ಇದೆಯಾ? ತಕ್ಷಣ ಬದಲಿಸಿ -
Popular Indian Foods: ಈ 5 ಆಹಾರಗಳು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿಗಳು! -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ












Click it and Unblock the Notifications