ಕರ್ನಾಟಕ ವಿವಿ ವಿದ್ಯಾರ್ಥಿ ಮೇಲೆ ಹಲ್ಲೆ, ಕ್ರಮಕ್ಕೆ ಒತ್ತಾಯ
ಹುಬ್ಬಳ್ಳಿ, ಡಿಸೆಂಬರ್, 17: ಕರ್ನಾಟಕ ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ಮೇಲೆ ವಿನಾ ಕಾರಣ ಹಲ್ಲೆ ಮಾಡಿದವರನ್ನು ಪೊಲೀಸರು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ವಿವಿ ಸಂಶೋಧನಾ ವಿದ್ಯಾರ್ಥಿ ಸಂಘ, ವಿವಿ ಕುಲಪತಿ ಡಾ. ಪ್ರಮೋದ ಗಾಯಿಗೆ ಮನವಿ ಸಲ್ಲಿಸಿದೆ.
ಕರ್ನಾಟಕ ವಿಶ್ವವಿದ್ಯಾನಿಲಯ ಸಂಶೋಧನಾ ವಿದ್ಯಾರ್ಥಿ ಮಂಜುನಾಥ ಅಡಿಗಲ್ ಎಂಬುವರ ಮೇಲೆ ಕೆಲವು ದಿನಗಳ ಹಿಂದೆ ಸುಮಾರು 30 ಕ್ಕೂ ಹೆಚ್ಚು ಜನರು ಹಾಡುಹಗಲೇ ಹಲ್ಲೆ ನಡೆಸಿದ್ದರು. ಇದನ್ನು ಖಂಡಿಸಿ ವಿದ್ಯಾರ್ಥಿಗಳು ಕುಲಪತಿ ಅವರಿಗೆ ಮನವಿ ಸಲ್ಲಿಸಿದ್ದು, ಶೀಘ್ರವೇ ಒತ್ತಾಯಿಸುವುದಾಗಿ ಪ್ರಮೋದ್ ಗಾಯಿ ಅವರು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ.[ಧಾರವಾಡದ ಕರ್ನಾಟಕ ವಿವಿಯಲ್ಲಿ ಏನಿದು ಅಕ್ರಮ?]

ಮನವಿ ಪತ್ರದಲ್ಲಿ ಏನಿದೆ?
ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ಡಾ. ಪ್ರಮೋದ ಗಾಯಿ ಅವರಿಗೆ ನೀಡಿದ ಮನವಿ ಪತ್ರದಲ್ಲಿ, ಹಲ್ಲೆ ನಡೆದು ಹಲವು ದಿನ ಕಳೆದಿದ್ದರೂ ಪೊಲೀಸರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಇದು ಪೊಲೀಸ್ ಕಾರ್ಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಸಂಶೋಧನಾ ವಿದ್ಯಾರ್ಥಿಗಳು ಭಯದ ವಾತಾವರಣದಲ್ಲಿಯೇ ಇದ್ದಾರೆ. ತಕ್ಷಣವೇ ಹಲ್ಲೆಕೋರರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಒತ್ತಡ ಹೇರಬೇಕು ಎಂದು ಸಂಘದ ಕಾರ್ಯಕರ್ತರು ತಿಳಿಸಿದ್ದಾರೆ.[ಕರ್ನಾಟಕದ ಒಂದು ವಿವಿ ಸೇರಿ ನಕಲಿ ವಿವಿಗಳ ಪಟ್ಟಿ ಪ್ರಕಟ]
ಈ ಸಂದರ್ಭದಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಸೋಮಣ್ಣ ನಿಟ್ಟೂರು, ರವಿ ಮಟ್ಟಿಹಾಳ, ಮಹಾದೇವ ಜಿ, ಆನಂದ ಬಾರಿಕರ ಮುಂತಾದವರು ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications