Kodi Mutt Swamiji: ಪಂಚಭೂತಗಳಿಂದಲೇ ಗಂಡಾಂತರ, 3 ಪ್ರಧಾನಿಗಳ ಸಾವು: ಕೋಡಿಮಠ ಶ್ರೀಗಳಿಂದ ಸ್ಪೋಟಕ ಭವಿಷ್ಯ
ಧಾರವಾಡ, ಜೂನ್ 25: ಮಳೆ, ಪ್ರವಾಹ, ರಾಜಕೀಯ, ಪ್ರಳಯ ಸೇರಿದಂತೆ ದೇಶದ ಆಗು ಹೋಗುಗಳ ಬಗ್ಗೆ ಭವಿಷ್ಯ ನುಡಿಯುವ ಹಾಸನದ ಶ್ರೀ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಇದೀಗ ಮತ್ತೆ ಮಹತ್ವದ ಭವಿಷ್ಯ ನುಡಿದಿದ್ದಾರೆ.
ಮಂಗಳವಾರ ಧಾರವಾಡ ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈ ಸಂವತ್ಸರ ಒಳಿತಿಗಿಂತ ಕೆಡಕು ಹೆಚ್ಚು ಮಾಡುತ್ತದೆ ಎಂದು ಹಾಸನದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

ಭಾರತೀಯ ಪದ್ಧತಿಯಲ್ಲಿ ಸಂವತ್ಸರಗಳಿಗೆ ಮಹತ್ವ ಇದೆ. ಈಗ ಕ್ರೋಧಿ ನಾಮ ಸಂವತ್ಸರ ನಡೆದಿದೆ ಈ ಸಂವತ್ಸರ ಒಳಿತಿಗಿಂತ ಕೆಡಕು ಹೆಚ್ಚು ಮಾಡುತ್ತದೆಭೂಮಿ, ಅಗ್ನಿ, ಆಕಾಶ, ವಾಯು, ಜಲ ಐದರಿಂದಲೂ ತೊಂದರೆ ಇದೆ.
ಆಕಾಶ ತತ್ವದ ಬಗ್ಗೆ ಶ್ರಾವಣದಲ್ಲಿ ಭವಿಷ್ಯ
ಆಕಾಶ ತತ್ವ ಆಗಲಿದೆ ಆ ಆಕಾಶ ತತ್ವ ಏನೆಂದು ನಾನು ಶ್ರಾವಣದಲ್ಲಿ ಹೇಳುತ್ತೇನೆ. ಸುರಿದಲ್ಲೊಯೇ ಮಳೆ ಸುರಿಯುತ್ತಿದೆ. ಭೂ ಕುಸಿತ, ಜಲಪ್ರಳಯ ಉಂಟಾಗುವ ಲಕ್ಷಣಗಳು ಇದೆ. ಇದರಿಂದ ಜನರು ತೊಂದರೆ ಎದುರಿಸಬಹುದು ಎಂದು ಅವರು ತಿಳಿಸಿದ್ದಾರೆ.
ಪಂಚಭೂತಗಳಲ್ಲಿ ಒಂದಾಗಿರುವ ಗಾಳಿಯಿಂದಲೂ ತೊಂದರೆ ಆಗಲಿದೆ. ಮುಂದಿನ ಶ್ರಾವಣದಲ್ಲಿ ಇದೇ ವಿಚಾರ ಕುರಿತು ಪೂರ್ಣ ಮಾಹಿತಿ ನೀಡಲಿದ್ದಾರೆ. ಇದರೊಂದಿಗೆ ರಾಷ್ಟ್ರ ರಾಜಕೀಯ ಬಗ್ಗೆ ಮಾತನಾಡಿದ ಅವರು, ಅತಂತ್ರದಲ್ಲೇ ರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಕೂಡಿದ್ದಾರೆ. ಇನ್ನೂ ಅಂಗಡಿ ಒಪನ್ ಆಗಿಲ್ಲ ಎಂದು ಮಾರ್ಮಿಕವಾಗಿ ಸ್ವಾಮೀಜಿ ನುಡಿದಿದ್ದಾರೆ.
ರಾಷ್ಟ್ರ ರಾಜಕಾರಣ ಬಗ್ಗೆ ಶ್ರೀಗಳು ಹೇಳಿದ್ದೇನು?
ವ್ಯಾಪಾರ ಶುರುವಾಗಲಿ ಆ ಬಳಿಕ ರಾಷ್ಟ್ರ ರಾಜಕಾರಣದ ಭವಿಷ್ಯ ಹೇಳುತ್ತೇನೆ. ಅದೆಲ್ಲದರ ಬಗ್ಗೆ ಸಮಗ್ರವಾಗಿ ಶ್ರಾವಣದಲ್ಲಿ ಮಾಹಿತಿ ನೀಡಲಾಗುವುದು. ಶುರುವಾಗುವ ಮುನ್ನವೇ ಅಶುಭ ಈಗಲೇ ನುಡಿಯಬಾರದು. ಶುಭವೋ ಅಶುಭವೋ ಅಂತಾ ಶ್ರಾವಣದಲ್ಲಿ ಹೇಳುವೆ ಎಂದು ದೇಶದ ರಾಜಕಾರಣ ಬಗ್ಗೆ ಅವರು ಮಾತನಾಡಿದರು.
ಮಹಾಭಾರತದಲ್ಲಿ ಅಭಿಮನ್ಯುವಿನ ಬಿಲ್ಲಿನ ದಾರ ಕರ್ಣನಿಂದ ಕತ್ತರಿಸಿಸಿದರು. ಈಗ ಅಭಿಮನ್ಯುವಿನ ಹೆಂಡತಿ ಸಂಸತ್ ನಲ್ಲಿ ಪ್ರವೇಶ ಮಾಡುತ್ತಾಳೆ. ಆದರೆ ದುರ್ಯೋಧನನ ತೊಡೆ ಒಡೆಸಿದ ಕೃಷ್ಣ ಈಗ ಇಲ್ಲ. ಹೀಗಾಗಿ ದುರ್ಯೋಧನ ಗೆಲ್ಲುತ್ತಾನೆ ಎಂದರು.
ಮೂರು ಪ್ರಧಾನಿಗಳ ಸಾವು
ಜಗತ್ತಿನಲ್ಲಿ ಎರಡು ಮೂರು ಪ್ರಧಾನಿಗಳ ಸಾವು ಆಗಲಿದೆ. ದೊಡ್ಡ ದೊಡ್ಡವರಿಗೆ ನೋವು ತಾಪ ದುಃಖ ಎದುರಾಗಲಿದೆ. ಕರೆಯದೆ ಬರುವುದು ಕೋಪ. ಬರೆಯದೇ ಓದುವವನು ಕಣ್ಣು. ಬರಗಾಲಿನಲ್ಲಿ ನಡೆಯುವವನ ಮನಸ್ಸು. ಈ ಮೂರು ನಿಯಂತ್ರಣದಲ್ಲಿಡಬೇಕು ಆದರೆ ದುಡ್ಡು, ಅಧಿಕಾರ ಮುಖ್ಯ ಅಂತಾ ಹೊರಟಿದ್ದಾರೆ. ಇದುವೇ ಅಧಃಪತನಕ್ಕೆ ಕಾರಣವಾಗಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications