Get Updates
Get notified of breaking news, exclusive insights, and must-see stories!

ಲಾರಿ ಚಾಲಕನಿಂದ ಲಂಚದ ಹಣಕ್ಕೆ ಕೈ ಚಾಚಿದ ಎಎಸ್‌ಐ: ವಿಡಿಯೋ ವೈರಲ್

ಧಾರವಾಡ, ಜೂನ್‌ 13: ತುಮಕೂರು ಜಿಲ್ಲಾ ಶಿರಾ ತಾಲೂಕಿನಲ್ಲಿ ಲಾರಿ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ ಎಎಸ್‌ಐ ಹಾಗೂ ಕಾನ್ಸ್ಟೇಬಲ್ ಲಂಚಾವತಾರದ ವಿಡಿಯೋ ವೈರಲ್ ಆಗಿ ಅಮಾನತು ಆದ ಸುದ್ದಿ ಮಾಸುವ ಮುನ್ನವೇ, ಧಾರವಾಡ ಜಿಲ್ಲೆಯಲ್ಲಿ ಎಎಸ್‌ಐ ಒಬ್ಬರು ಲಾರಿ ಚಾಲಕರಿಂದ ಹಣ ಪಡೆದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕುಂದಗೋಳ ಪೊಲೀಸ್ ಠಾಣಾ ಮುಂಭಾಗದಲ್ಲಿಯೇ ಈ ಒಂದು ಘಟನೆ ನಡೆದಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಎಎಸ್‌ಐ ಭೂದೇಶ ಮಡಿವಾಳ ಎನ್ನುವವರ ವಿರುದ್ಧ ಈ ಆರೋಪ ಕೇಳಿ ಬಂದಿದೆ.

Kundgol Police Station ASI Took Bribe Money From Lorry Driver

ಎಎಸ್‌ಐ ಭೂದೇಶ ಮಡಿವಾಳ, ಮರಳು ಸಾಗಾಟದ ಲಾರಿಯ ಚಾಲಕನಿಗೆ ದಂಡ ಹಾಕಲು ಮುಂದಾದಾಗ, ಲಾರಿ ಚಾಲಕ ಬೇಡ ಸರ್..ದಂಡ ಏನು ಬೇಡ..ಈಗ ನನ್ನ ಬಳಿ ದುಡ್ಡಿಲ್ಲ ಎಷ್ಟಿದೆಯೋ ಅಷ್ಟು ತಗೊಳಿ ಎಂದಿದ್ದಾನೆ. ಅಲ್ಲದೇ ತನ್ನ ಬಳಿ ಇದ್ದ ಹಣವನ್ನು ಎಎಸ್‌ಐ ಭೂದೇಶ ಮಡಿವಾಳ ಅವರಿಗೆ ನೀಡಿದ್ದು, ದಂಡ ಹಾಕಲು ಮುಂದಾದ ಪೊಲೀಸ್‌ ದಂಡ ಹಾಕದೇ ಚಾಲಕ ಕೊಟ್ಟ ಹಣವನ್ನು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಪ್ರತಿ ನಿತ್ಯವೂ ಕೂಡ ಲಕ್ಷ್ಮೇಶ್ವರದಿಂದ ಮರಳು ತೆಗೆದುಕೊಂಡು ಹುಬ್ಬಳ್ಳಿಗೆ ಆಗಮಿಸುವ ಲಾರಿಗಳು ಕುಂದಗೋಳ ಪೊಲೀಸ್ ಠಾಣಾ ಮುಂಭಾಗದಲ್ಲಿಯೇ ಹಾದು ಹೋಗುತ್ತವೆ. ಹೀಗಾಗಿ ಇಲ್ಲಿ ಸಂಚಾರ ಮಾಡುವ ಲಾರಿ ಚಾಲಕರಿಂದ ಹಣವನ್ನು ಪೀಕಲಾಗುತ್ತದೆ ಎಂಬುದಕ್ಕೆ ಈ ಒಂದು ವಿಡಿಯೋ ಇದೀಗ ಸಾಕ್ಷಿಯಾಗಿದೆ.

ಮೊನ್ನೆ ಅಷ್ಟೇ ಗುಡಗೇರಿ ಪೊಲೀಸ್ ಠಾಣೆಯ ಸಿಬ್ಬಂದಿ ಒಬ್ಬರು ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್‌ ಅನ್ನು ಠಾಣೆಗೆ ತಂದು ಟ್ರ್ಯಾಕ್ಟರ್ ಮಾಲಕರಿಂದ ಹಣ ಪೀಕಲು ಮುಂದಾಗಿದ್ದರು. ಈ ಸುದ್ದಿ ಎಲ್ಲೆಡೆ ವೈರಲ್‌ ಆಗುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್‌ ಜಗಲಾಸುರ ಕಾನ್ಸ್ಟೇಬಲ್ ರವಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.

ಒಟ್ಟಿನಲ್ಲಿ ಸರ್ಕಾರಿ ಸಂಬಳ ಬಂದರೂ ಕೂಡಾ ಈ ರೀತಿಯಾಗಿ ಲಂಚದ ಹಣ ಪಡೆದ ಪೊಲೀಸರ ವಿರುದ್ಧ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್‌ ಜಗಲಾಸುರ ಯಾವ ರೀತಿಯಾದ ಕ್ರಮ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.

ಚಿನ್ನವಿದ್ದ ಬ್ಯಾಗ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಧಾರವಾಡ: 20 ಗ್ರಾಂ ಚಿನ್ನವಿದ್ದ ಬ್ಯಾಗ್‌ ಅನ್ನು ಆಟೋ ಚಾಲಕ ಮರಳಿ ಮಾಲೀಕರಿಗೆ ಹಸ್ತಾಂತರ ಮಾಡುವ ಮೂಲಕ ಪ್ರಾಮಾಣಿಕತೆ ಮೆರೆದಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಶರತ್ ಬುಡ್ಡಣ್ಣವರ ಎನ್ನುವವರು ಅಲಿ ಅತ್ತಾರ್‌ ಎನ್ನುವವರ ಆಟೋದಲ್ಲಿ ತೆರಳಿದ್ದರು. ಆದರೆ, ಇಳಿದು ಹೋಗುವಾಗ ಶರತ್ ಅವರು 20 ಗ್ರಾಂ ಚಿನ್ನ ಹಾಗೂ 1,020 ರೂಪಾಯಿ ಇದ್ದ ಬ್ಯಾಗ್‌ ಅನ್ನು ಆಟೋದಲ್ಲೇ ಬಿಟ್ಟು ಹೋಗಿದ್ದರು. ಇದನ್ನು ನೋಡಿದ ಆಟೋ ಚಾಲಕ ಅಲಿ ಅತ್ತಾರ್‌ ಆ ಬ್ಯಾಗ್‌ನ್ನು ಕೂಡಲೇ ಧಾರವಾಡದ ಶಹರ ಠಾಣೆಗೆ ತಂದು ಒಪ್ಪಿಸಿದ್ದರು. ಪೊಲೀಸರು ಆ ಬ್ಯಾಗ್ ಮಾಲೀಕರನ್ನು ಠಾಣೆಗೆ ಕರೆಯಿಸಿ ಆಟೋ ಚಾಲಕನ ಸಮ್ಮುಖದಲ್ಲೇ ವಾಪಸ್ ಮಾಲೀಕರಿಗೆ ಹಸ್ತಾಂತರಿಸಿದ್ದಾರೆ. ಒಟ್ಟಾರೆ ಹಣ, ಚಿನ್ನ ಸಿಕ್ಕರೆ ಸಾಕು ಎನ್ನುವರಿರುವ ಈ ಕಾಲದಲ್ಲಿ ಆಟೋ ಚಾಲಕ ಅಲಿ ಅತ್ತಾರ್‌ ಚಿನ್ನವಿದ್ದ ಬ್ಯಾಗ್‌ ವಾಪಸ್‌ ನೀಡುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+