ಲಾರಿ ಚಾಲಕನಿಂದ ಲಂಚದ ಹಣಕ್ಕೆ ಕೈ ಚಾಚಿದ ಎಎಸ್ಐ: ವಿಡಿಯೋ ವೈರಲ್
ಧಾರವಾಡ, ಜೂನ್ 13: ತುಮಕೂರು ಜಿಲ್ಲಾ ಶಿರಾ ತಾಲೂಕಿನಲ್ಲಿ ಲಾರಿ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ ಎಎಸ್ಐ ಹಾಗೂ ಕಾನ್ಸ್ಟೇಬಲ್ ಲಂಚಾವತಾರದ ವಿಡಿಯೋ ವೈರಲ್ ಆಗಿ ಅಮಾನತು ಆದ ಸುದ್ದಿ ಮಾಸುವ ಮುನ್ನವೇ, ಧಾರವಾಡ ಜಿಲ್ಲೆಯಲ್ಲಿ ಎಎಸ್ಐ ಒಬ್ಬರು ಲಾರಿ ಚಾಲಕರಿಂದ ಹಣ ಪಡೆದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕುಂದಗೋಳ ಪೊಲೀಸ್ ಠಾಣಾ ಮುಂಭಾಗದಲ್ಲಿಯೇ ಈ ಒಂದು ಘಟನೆ ನಡೆದಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಎಎಸ್ಐ ಭೂದೇಶ ಮಡಿವಾಳ ಎನ್ನುವವರ ವಿರುದ್ಧ ಈ ಆರೋಪ ಕೇಳಿ ಬಂದಿದೆ.

ಎಎಸ್ಐ ಭೂದೇಶ ಮಡಿವಾಳ, ಮರಳು ಸಾಗಾಟದ ಲಾರಿಯ ಚಾಲಕನಿಗೆ ದಂಡ ಹಾಕಲು ಮುಂದಾದಾಗ, ಲಾರಿ ಚಾಲಕ ಬೇಡ ಸರ್..ದಂಡ ಏನು ಬೇಡ..ಈಗ ನನ್ನ ಬಳಿ ದುಡ್ಡಿಲ್ಲ ಎಷ್ಟಿದೆಯೋ ಅಷ್ಟು ತಗೊಳಿ ಎಂದಿದ್ದಾನೆ. ಅಲ್ಲದೇ ತನ್ನ ಬಳಿ ಇದ್ದ ಹಣವನ್ನು ಎಎಸ್ಐ ಭೂದೇಶ ಮಡಿವಾಳ ಅವರಿಗೆ ನೀಡಿದ್ದು, ದಂಡ ಹಾಕಲು ಮುಂದಾದ ಪೊಲೀಸ್ ದಂಡ ಹಾಕದೇ ಚಾಲಕ ಕೊಟ್ಟ ಹಣವನ್ನು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಪ್ರತಿ ನಿತ್ಯವೂ ಕೂಡ ಲಕ್ಷ್ಮೇಶ್ವರದಿಂದ ಮರಳು ತೆಗೆದುಕೊಂಡು ಹುಬ್ಬಳ್ಳಿಗೆ ಆಗಮಿಸುವ ಲಾರಿಗಳು ಕುಂದಗೋಳ ಪೊಲೀಸ್ ಠಾಣಾ ಮುಂಭಾಗದಲ್ಲಿಯೇ ಹಾದು ಹೋಗುತ್ತವೆ. ಹೀಗಾಗಿ ಇಲ್ಲಿ ಸಂಚಾರ ಮಾಡುವ ಲಾರಿ ಚಾಲಕರಿಂದ ಹಣವನ್ನು ಪೀಕಲಾಗುತ್ತದೆ ಎಂಬುದಕ್ಕೆ ಈ ಒಂದು ವಿಡಿಯೋ ಇದೀಗ ಸಾಕ್ಷಿಯಾಗಿದೆ.
ಮೊನ್ನೆ ಅಷ್ಟೇ ಗುಡಗೇರಿ ಪೊಲೀಸ್ ಠಾಣೆಯ ಸಿಬ್ಬಂದಿ ಒಬ್ಬರು ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಅನ್ನು ಠಾಣೆಗೆ ತಂದು ಟ್ರ್ಯಾಕ್ಟರ್ ಮಾಲಕರಿಂದ ಹಣ ಪೀಕಲು ಮುಂದಾಗಿದ್ದರು. ಈ ಸುದ್ದಿ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸುರ ಕಾನ್ಸ್ಟೇಬಲ್ ರವಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.
ಒಟ್ಟಿನಲ್ಲಿ ಸರ್ಕಾರಿ ಸಂಬಳ ಬಂದರೂ ಕೂಡಾ ಈ ರೀತಿಯಾಗಿ ಲಂಚದ ಹಣ ಪಡೆದ ಪೊಲೀಸರ ವಿರುದ್ಧ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸುರ ಯಾವ ರೀತಿಯಾದ ಕ್ರಮ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.
ಚಿನ್ನವಿದ್ದ ಬ್ಯಾಗ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ
ಧಾರವಾಡ: 20 ಗ್ರಾಂ ಚಿನ್ನವಿದ್ದ ಬ್ಯಾಗ್ ಅನ್ನು ಆಟೋ ಚಾಲಕ ಮರಳಿ ಮಾಲೀಕರಿಗೆ ಹಸ್ತಾಂತರ ಮಾಡುವ ಮೂಲಕ ಪ್ರಾಮಾಣಿಕತೆ ಮೆರೆದಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಶರತ್ ಬುಡ್ಡಣ್ಣವರ ಎನ್ನುವವರು ಅಲಿ ಅತ್ತಾರ್ ಎನ್ನುವವರ ಆಟೋದಲ್ಲಿ ತೆರಳಿದ್ದರು. ಆದರೆ, ಇಳಿದು ಹೋಗುವಾಗ ಶರತ್ ಅವರು 20 ಗ್ರಾಂ ಚಿನ್ನ ಹಾಗೂ 1,020 ರೂಪಾಯಿ ಇದ್ದ ಬ್ಯಾಗ್ ಅನ್ನು ಆಟೋದಲ್ಲೇ ಬಿಟ್ಟು ಹೋಗಿದ್ದರು. ಇದನ್ನು ನೋಡಿದ ಆಟೋ ಚಾಲಕ ಅಲಿ ಅತ್ತಾರ್ ಆ ಬ್ಯಾಗ್ನ್ನು ಕೂಡಲೇ ಧಾರವಾಡದ ಶಹರ ಠಾಣೆಗೆ ತಂದು ಒಪ್ಪಿಸಿದ್ದರು. ಪೊಲೀಸರು ಆ ಬ್ಯಾಗ್ ಮಾಲೀಕರನ್ನು ಠಾಣೆಗೆ ಕರೆಯಿಸಿ ಆಟೋ ಚಾಲಕನ ಸಮ್ಮುಖದಲ್ಲೇ ವಾಪಸ್ ಮಾಲೀಕರಿಗೆ ಹಸ್ತಾಂತರಿಸಿದ್ದಾರೆ. ಒಟ್ಟಾರೆ ಹಣ, ಚಿನ್ನ ಸಿಕ್ಕರೆ ಸಾಕು ಎನ್ನುವರಿರುವ ಈ ಕಾಲದಲ್ಲಿ ಆಟೋ ಚಾಲಕ ಅಲಿ ಅತ್ತಾರ್ ಚಿನ್ನವಿದ್ದ ಬ್ಯಾಗ್ ವಾಪಸ್ ನೀಡುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications