ಲಾರಿ ಚಾಲಕನಿಂದ ಲಂಚದ ಹಣಕ್ಕೆ ಕೈ ಚಾಚಿದ ಎಎಸ್ಐ: ವಿಡಿಯೋ ವೈರಲ್
ಧಾರವಾಡ, ಜೂನ್ 13: ತುಮಕೂರು ಜಿಲ್ಲಾ ಶಿರಾ ತಾಲೂಕಿನಲ್ಲಿ ಲಾರಿ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ ಎಎಸ್ಐ ಹಾಗೂ ಕಾನ್ಸ್ಟೇಬಲ್ ಲಂಚಾವತಾರದ ವಿಡಿಯೋ ವೈರಲ್ ಆಗಿ ಅಮಾನತು ಆದ ಸುದ್ದಿ ಮಾಸುವ ಮುನ್ನವೇ, ಧಾರವಾಡ ಜಿಲ್ಲೆಯಲ್ಲಿ ಎಎಸ್ಐ ಒಬ್ಬರು ಲಾರಿ ಚಾಲಕರಿಂದ ಹಣ ಪಡೆದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕುಂದಗೋಳ ಪೊಲೀಸ್ ಠಾಣಾ ಮುಂಭಾಗದಲ್ಲಿಯೇ ಈ ಒಂದು ಘಟನೆ ನಡೆದಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಎಎಸ್ಐ ಭೂದೇಶ ಮಡಿವಾಳ ಎನ್ನುವವರ ವಿರುದ್ಧ ಈ ಆರೋಪ ಕೇಳಿ ಬಂದಿದೆ.

ಎಎಸ್ಐ ಭೂದೇಶ ಮಡಿವಾಳ, ಮರಳು ಸಾಗಾಟದ ಲಾರಿಯ ಚಾಲಕನಿಗೆ ದಂಡ ಹಾಕಲು ಮುಂದಾದಾಗ, ಲಾರಿ ಚಾಲಕ ಬೇಡ ಸರ್..ದಂಡ ಏನು ಬೇಡ..ಈಗ ನನ್ನ ಬಳಿ ದುಡ್ಡಿಲ್ಲ ಎಷ್ಟಿದೆಯೋ ಅಷ್ಟು ತಗೊಳಿ ಎಂದಿದ್ದಾನೆ. ಅಲ್ಲದೇ ತನ್ನ ಬಳಿ ಇದ್ದ ಹಣವನ್ನು ಎಎಸ್ಐ ಭೂದೇಶ ಮಡಿವಾಳ ಅವರಿಗೆ ನೀಡಿದ್ದು, ದಂಡ ಹಾಕಲು ಮುಂದಾದ ಪೊಲೀಸ್ ದಂಡ ಹಾಕದೇ ಚಾಲಕ ಕೊಟ್ಟ ಹಣವನ್ನು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಪ್ರತಿ ನಿತ್ಯವೂ ಕೂಡ ಲಕ್ಷ್ಮೇಶ್ವರದಿಂದ ಮರಳು ತೆಗೆದುಕೊಂಡು ಹುಬ್ಬಳ್ಳಿಗೆ ಆಗಮಿಸುವ ಲಾರಿಗಳು ಕುಂದಗೋಳ ಪೊಲೀಸ್ ಠಾಣಾ ಮುಂಭಾಗದಲ್ಲಿಯೇ ಹಾದು ಹೋಗುತ್ತವೆ. ಹೀಗಾಗಿ ಇಲ್ಲಿ ಸಂಚಾರ ಮಾಡುವ ಲಾರಿ ಚಾಲಕರಿಂದ ಹಣವನ್ನು ಪೀಕಲಾಗುತ್ತದೆ ಎಂಬುದಕ್ಕೆ ಈ ಒಂದು ವಿಡಿಯೋ ಇದೀಗ ಸಾಕ್ಷಿಯಾಗಿದೆ.
ಮೊನ್ನೆ ಅಷ್ಟೇ ಗುಡಗೇರಿ ಪೊಲೀಸ್ ಠಾಣೆಯ ಸಿಬ್ಬಂದಿ ಒಬ್ಬರು ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಅನ್ನು ಠಾಣೆಗೆ ತಂದು ಟ್ರ್ಯಾಕ್ಟರ್ ಮಾಲಕರಿಂದ ಹಣ ಪೀಕಲು ಮುಂದಾಗಿದ್ದರು. ಈ ಸುದ್ದಿ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸುರ ಕಾನ್ಸ್ಟೇಬಲ್ ರವಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.
ಒಟ್ಟಿನಲ್ಲಿ ಸರ್ಕಾರಿ ಸಂಬಳ ಬಂದರೂ ಕೂಡಾ ಈ ರೀತಿಯಾಗಿ ಲಂಚದ ಹಣ ಪಡೆದ ಪೊಲೀಸರ ವಿರುದ್ಧ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸುರ ಯಾವ ರೀತಿಯಾದ ಕ್ರಮ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.
ಚಿನ್ನವಿದ್ದ ಬ್ಯಾಗ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ
ಧಾರವಾಡ: 20 ಗ್ರಾಂ ಚಿನ್ನವಿದ್ದ ಬ್ಯಾಗ್ ಅನ್ನು ಆಟೋ ಚಾಲಕ ಮರಳಿ ಮಾಲೀಕರಿಗೆ ಹಸ್ತಾಂತರ ಮಾಡುವ ಮೂಲಕ ಪ್ರಾಮಾಣಿಕತೆ ಮೆರೆದಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಶರತ್ ಬುಡ್ಡಣ್ಣವರ ಎನ್ನುವವರು ಅಲಿ ಅತ್ತಾರ್ ಎನ್ನುವವರ ಆಟೋದಲ್ಲಿ ತೆರಳಿದ್ದರು. ಆದರೆ, ಇಳಿದು ಹೋಗುವಾಗ ಶರತ್ ಅವರು 20 ಗ್ರಾಂ ಚಿನ್ನ ಹಾಗೂ 1,020 ರೂಪಾಯಿ ಇದ್ದ ಬ್ಯಾಗ್ ಅನ್ನು ಆಟೋದಲ್ಲೇ ಬಿಟ್ಟು ಹೋಗಿದ್ದರು. ಇದನ್ನು ನೋಡಿದ ಆಟೋ ಚಾಲಕ ಅಲಿ ಅತ್ತಾರ್ ಆ ಬ್ಯಾಗ್ನ್ನು ಕೂಡಲೇ ಧಾರವಾಡದ ಶಹರ ಠಾಣೆಗೆ ತಂದು ಒಪ್ಪಿಸಿದ್ದರು. ಪೊಲೀಸರು ಆ ಬ್ಯಾಗ್ ಮಾಲೀಕರನ್ನು ಠಾಣೆಗೆ ಕರೆಯಿಸಿ ಆಟೋ ಚಾಲಕನ ಸಮ್ಮುಖದಲ್ಲೇ ವಾಪಸ್ ಮಾಲೀಕರಿಗೆ ಹಸ್ತಾಂತರಿಸಿದ್ದಾರೆ. ಒಟ್ಟಾರೆ ಹಣ, ಚಿನ್ನ ಸಿಕ್ಕರೆ ಸಾಕು ಎನ್ನುವರಿರುವ ಈ ಕಾಲದಲ್ಲಿ ಆಟೋ ಚಾಲಕ ಅಲಿ ಅತ್ತಾರ್ ಚಿನ್ನವಿದ್ದ ಬ್ಯಾಗ್ ವಾಪಸ್ ನೀಡುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications