Waqf Bill 2025: ಕೈ ನಾಯಕರ 'ವಕ್ಫ್ ತಿದ್ದುಪಡಿ ಮಸೂದೆ' ಹೇಳಿಕೆ ಬೆಂಬಲಿಸಿದ ಲಕ್ಷ್ಮೀ ಹೆಬ್ಬಾಳ್ಕರ್
ಧಾರವಾಡ, ಏಪ್ರಿಲ್ 03: ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತಿದ್ದುಪಡಿ ಮಸೂದೆ ಮಂಡಿಸಿ ಬಿಲ್ ಪಾಸ್ ಮಾಡಿದೆ. ತಡರಾತ್ರಿ ಸಂಸತ್ನಲ್ಲಿ ಬಿಲ್ ಪಾಸ್ ಮಾಡಲಾಗಿದೆ. ಭಾರತೀಯ ಸೇನೆ, ರೈಲ್ವೆ ಹೊರತುಪಡಿಸಿದರೆ, ವಕ್ಫ್ ಮಂಡಳಿಗೆ ಭೂಮಿ ಸ್ವಾಧೀನಕ್ಕಿದ್ದ ಪರಮಾಧಿಕಾರದ ವಿರುದ್ಧ ಪಾರದರ್ಶಕತೆ ತರಲು, ಮುಸ್ಲಿಂ ಬಡವರಿಗೂ, ಎಲ್ಲ ವರ್ಗದವರಿಗೂ ಮಂಡಳಿಯಲ್ಲಿ ಅವಕಾಶ ನೀಡಲು ವಕ್ಫ್ ತಿದ್ದಪಡಿ ಮಸೂದೆ ತರಲಾಗಿದೆ. ಇದೀಗ ಇದರ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದಾರೆ.
ವಕ್ಫ್ ಕಾಯಿದೆ ತಿದ್ದುಪಡಿ ವಿಚಾರ ಕುರಿತು ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಂಸದ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾತನಡಿದ್ದಾರೆ. ನಮ್ಮ ನಾಯಕರ ಹೇಳಿಕೆ ಸರಿಯಾಗಿದೆ ಎಂದು ಕಾಂಗ್ರೆಸ್ ವರಿಷ್ಠರ ಮುಸ್ಲಿಮರಿಗೆ ಅನ್ಯಾಯ ಮಾಡುತ್ತಿದೆ ಎಂಬ ಹೇಳಿಕೆಯನ್ನು ಅವರು ಬೆಂಬಲಿಸಿದ್ದಾರೆ. ಇನ್ನೂ ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ರನ್ನು ಉಚ್ಛಾಟನೆ ಮಾಡಲಾಗಿದೆ. ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಅವರು ಭಾಗಿಯಾಗಿದ್ದಾರೆ. ಉಚ್ಛಾಟನೆ ಅವರ ಪಕ್ಷದ ವಿಚಾರ ಎಂದರು.

ಈ ಹೋರಾಟದಲ್ಲಿ ಯತ್ನಾಳ್ ನಮ್ಮ ಬಾಂಧವರು
ಶಾಸಕ ಯತ್ನಾಳ್ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡಿದಾಗಲೂ ನಾವು ಖಂಡಿಸಿದ್ದೇವೆ. ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಮಾತ್ರ ಅವರು ನಮಗೆ ಬಾಂಧವರು. ಸಚಿವ ಸಂಪುಟ ವಿಸ್ತರಣೆ ವಿಚಾರ ನೋಡುವುದಾದರೆ, ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಂಪುಟ ವಿಸ್ತರಣೆ ಇಲ್ಲ ಎಂದು ಹೇಳಿದ್ದಾರೆ ಎಂದು ಧಾರವಾಡದಲ್ಲಿ ಗುರುವಾರ ಅವರು ಪ್ರತಿಕ್ರಿಯಿಸಿದರು.
ಬೆಲೆ ಏರಿಕೆ: ಬಿಜೆಪಿಗೆ ತಿರುಗೇಟು
ಮುಂದೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಯಲಿದೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಏನು ತೆಗೆದುಕೊಳ್ಳುತ್ತದೆ ಗೊತ್ತಿಲ್ಲ. ಇನ್ನೂ ಬೆಲೆ ಏರಿಕೆ ಎಂದಿರುವ ಬಿಜೆಪಿ ಹೋರಾಟಕ್ಕೆ ಮುಂದಾಗಿದೆ. ಕಳೆದ ನಾಲ್ಕು ವರ್ಷ ಬಿಜೆಪಿ ಸರ್ಕಾರದಲ್ಲಿ ಬೆಲೆ ಏರಿಕೆ ಆಗಿಯೇ ಇಲ್ಲವಾ. ಹಾಲು, ಪೆಟ್ರೊಲ್, ಡಿಸೇಲ್, ದಿನಸಿ ದರಗಳು ಹೆಚ್ಚಾಗಿವೆ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ ಡಂಬಾಚಾರದ ನಾಟಕ ಪ್ರದರ್ಶನವಾಗಿದೆ. ಮೊದಲು ಕರ್ನಾಟಕಕ್ಕೆ ಬರಬೇಕಿರುವ ತೆರಿಗೆ ಹಣ ಕೊಡಬೇಕು. ಕರ್ನಾಟಕಕ್ಕೆ ಕೇಂದ್ರ ಬಿಜೆಪಿ ಸರ್ಕಾರ ತೆರಿಗೆ ವಿಚಾರದಲ್ಲಿ ಅನ್ಯಾಯ ಮಾಡುತ್ತಿದೆ.

ಆ ತೆರಿಗೆ ಹಣ ತರಲು ಬಿಜೆಪಿ ಮುಂದಾಗಬೇಕು ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.
ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆ ಇದೆ. ಬೆಲೆ ಏರಿಕೆ ನಾನು ಸಮರ್ಥನೆ ಮಾಡುತ್ತಿಲ್ಲ. ಆರೋಪವೂ ಮಾಡುತ್ತಿಲ್ಲ. ಬೆಲೆ ಏರಿಕೆಗಳ ಬಗ್ಗೆ ಚರ್ಚೆ ಆಗಬೇಕಿದೆ. ಬಿಜೆಪಿ ಅವಧಿಯಲ್ಲೂ ಬೆಲೆ ಹೆಚ್ಚಾಗಿದೆ ಎಂದು ತಿಳಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications