Leopard: ಧಾರವಾಡದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ದಾಳಿಗೆ ಆಕಳ ಕರು ಸಾವು, ಭಯದಲ್ಲಿ ಜನರು
ಧಾರವಾಡ, ಮಾರ್ಚ್ 22: ವಿದ್ಯಾಕಾಶಿ ಧಾರವಾಡ ವ್ಯಾಪ್ತಿಯ ಗ್ರಾಮವೊಂದರಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಆಕಳು ಕರುವಿನ ಮೇಲೆ ದಾಳಿ ನಡೆಸಿದ್ದ ಪರಿಣಾಮ ಕರು ಮೃತಪಟ್ಟಿದೆ. ಇದರಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಮಹಿಳೆಯರು, ಮಕ್ಕಳು ಮನೆಯಿಂದ ಹೊರ ಹೋಗಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ.
ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದ ಸುತ್ತಮುತ್ತ ಮೂರು ನಾಲ್ಕು ದಿನಗಳ ಹಿಂದೆ ಚಿರತೆ ಕಾಣಿಸಿಕೊಂಡಿತ್ತು. ಅದರ ಬೆನ್ನಲ್ಲೆ ಇದೀಗ ಜಿಲ್ಲೆಯ ಮನಸೂರು ಗ್ರಾಮದಲ್ಲಿ ಚಿರತೆ ಮತ್ತೆ ಕಾಣಿಸಿಕೊಂಡಿದೆ.

ಈ ಮನಸೂರು ಗ್ರಾಮದ ಕರೆಮ್ಮ ದೇವಸ್ಥಾನದ ಬಳಿ ಕಟ್ಟಿದ್ದ ಆಕಳ ಕರುವಿನ ಚಿರತೆ ದಾಳಿ ಮಾಡಿದೆ. ಚಿರತೆ ದಾಳಿಯಿಂದ ಕರು ಒದ್ದಾಡಿ ಪ್ರಾಣ ಬಿಟ್ಟಿದೆ. ಮೃತಪಟ್ಟ ಈ ಆಕಳ ಕರು ಗ್ರಾಮದ ಕುಬೇರಪ್ಪ ಮಡಿವಾಳರ ಎಂಬ ರೈತನಿಗೆ ಸೇರಿದ್ದಾಗಿದೆ. ಚಿರತೆ ದಾಳಿ ಮಾಹಿತಿ ತಿಳಿಯುತ್ತಿದ್ದಂತೆ ಜನರು ದೇವಸ್ಥಾನದ ಬಳಿ ಜಮಾಯಿಸಿದ್ದಾರೆ ಎಂದು ತಿಳಿದು ಬಂದಿದೆ.
ಗ್ರಾಮಸ್ಥರಲ್ಲಿ ಹೆಚ್ಚಾಯ್ತು ಆತಂಕ
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಮನಸೂರು ಗ್ರಾಮ ವ್ಯಾಪ್ತಿಯಲ್ಲಿ ಕೆಲವು ದಿನಗಳಿಂದ ಚಿರತೆ ಓಡಾಡುತ್ತಿರುವು ಖಚಿತವಾಗುತ್ತಿದ್ದಂತೆ ಮನಸೂರು ಗ್ರಾಮ ಸೇರಿದಂತೆ ಈ ಭಾಗದ ಜನರಲ್ಲಿ ಆತಂಕ ಹೆಚ್ಚಾಗಿದೆ. ಒಬ್ಬರು ಹೊರ ಓಡಾಡಲು ಭಯ ಪಡುತ್ತಿದ್ದಾರೆ. ಧಾರವಾಡ ಹೊರವಲಯದಲ್ಲಿ ಚಿರತೆ ಇರಬಹುದು ಎಂದು ಶಂಕಿಸಲಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಮನಸೂರು ಗ್ರಾಮಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂದಿಯು, ಗ್ರಾಮಸ್ಥರಿಂದ ಮಾಹಿತಿ ಕಲೆ ಹಾಕಿದ್ದಾರೆ. ಚಿರತೆ ಸೆರೆಹಿಡಿಯಲು ಉದ್ದೇಶಿತ ಸ್ಥಳಗಳಲ್ಲಿ ಬೋನು ಇಡಲು ನಿರ್ಧರಿಸಿದ್ದಾರೆ. ಗ್ರಾಮಸ್ಥರ ಹಿತ ದೃಷ್ಟಿಯಿಂದ ಗ್ರಾಮದಲ್ಲಿ ರಾತ್ರಿ ಅರಣ್ಯ ಸಿಬ್ಬಂದಿ ಗಸ್ತು ತಿರುಗಲು ನಿರ್ಧರಿಸಿದ್ದಾರೆ.
ಇನ್ನೂ ಗ್ರಾಮಸ್ಥರಿಗೆ ಹೊರ ಓಡಾಡುವಾಗ ಎಚ್ಚರಿಕೆಯಿಂದ ಇರಬೇಕು. ಜೊತೆಗೆ ಚಿರತೆಯ ಚಲನವಲನ ಕಂಡಲ್ಲಿ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ತಿಳಿಸಬೇಕು ಎಂದು ಸೂಚಿಸಲಾಗಿದೆ. ಎಲ್ಲಿಯಾದರೂ ಕಂಡಲ್ಲಿ,
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications