ಕರ್ನಾಟಕ ವಿಶ್ವವಿದ್ಯಾಲಯದ ಸುತ್ತ ಚಿರತೆ ಓಡಾಟ: ಜಿಲ್ಲಾಡಳಿತದಿಂದ ಎಚ್ಚರಿಕೆ ಸಂದೇಶ
ಧಾರವಾಡ ಮಾರ್ಚ್ 26: ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಮನಸೂರ ಸುತ್ತಮುತ್ತಲೂ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿಕೊಂಡಿದ್ದಾರೆ.
ಕಳೆದ 3-4 ದಿನಗಳಿಂದ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಮನಸೂರ ಸುತ್ತಮುತ್ತಲೂ ಚಿರತೆ ಕಾಣಿಸಿಕೊಂಡು ಮನಸೂರ ಗ್ರಾಮದ ಕುಬೇರಪ್ಪ ಮಡಿವಾಳಪ್ಪ ಅಗಸರ ಎಂಬುವವರ ಆಕಳ ಕರುವನ್ನು ಕೊಂದು ತಿಂದಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನಸೂರ, ಮನಗುಂಡಿ ಹಾಗೂ ಸುತ್ತಲಿನ ಐದಾರು ಗ್ರಾಮಗಳಲ್ಲಿ ಡಂಗುರ ಸಾರುವಂತೆ ಹಾಗೂ ಗ್ರಾಮಸ್ಥರು ಒಬ್ಬಂಟಿಯಾಗಿ ಓಡಾಡದಂತೆ ಜಾಗೃತಿ ಮೂಡಿಸುವಂತೆ ಸ್ಥಳದಲ್ಲಿ ಉಪಸ್ಥಿತರಿದ್ದ, ತಹಶಿಲ್ದಾರ ಡಾ. ದುಂಡಪ್ಪ ಹೂಗಾರ ಹಾಗೂ ವಲಯ ಅರಣ್ಯ ಅಧಿಕಾರಿ ಪ್ರದೀಪ ಪವಾರ ಅವರಿಗೆ ಸೂಚಿಸಿದರಲ್ಲದೆ, ಚಿರತೆ ದಾಳಿಯಿಂದ ಮೃತ ಪಟ್ಟ ಆಕಳಿನ ಮಾಲೀಕರಿಗೆ ಶೀಘ್ರದಲ್ಲಿ ಪರಿಹಾರ ನೀಡುವಂತೆ ಸೂಚಿಸಿದ್ದಾರೆ.
ಚಿರತೆ ಸೆರೆಹಿಡಿಯಲು ಇಡಲಾಗಿದ್ದ ಬೋನ್ ವೀಕ್ಷಿಸಿದ ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದ ಗ್ರಾಮಸ್ಥರನ್ನು ಮಾತನಾಡಿಸಿ, ಅರಣ್ಯ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಚಿರತೆಯ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಗ್ರಾಮಸ್ಥರು ಆತಂಕ ಪಡಬಾರದೆಂದು ತಿಳಿಸಿದರು. ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಒಬ್ಬಂಟಿಯಾಗಿ ತಿರುಗಾಡದಂತೆ ತಿಳಿಸಿದರು.
ಸಾಧ್ಯವಾದಷ್ಟು ದನಕರುಗಳನ್ನು ಮನೆಯ ಹತ್ತಿರವೇ ಇಟ್ಟುಕೊಳ್ಳುವಂತೆ ತಿಳಿಸಿದರು. ಸದ್ಯ ಮನಸೂರ ಗ್ರಾಮದಲ್ಲಿ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಐ.ಪಿ ಸೆಟ್ಗಾಗಿ ಬೆಳಗಿನ ಅವಧಿಯಲ್ಲಿ ವಿದ್ಯುತ್ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಕಾಡು ಪ್ರದೇಶದ ಗ್ರಾಮಗಳಲ್ಲಿ ಹೆಚ್ಚಿನ ಗಮನ ಹರಿಸುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು. ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಕುಡಿಯುವ ನೀರಿಗಾಗಿ ನೀರಿನ ತೊಟ್ಟಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಈ ವರ್ಷ ಬರಗಾಲದಿಂದಾಗಿ ಅರಣ್ಯ ಪ್ರದೇಶದಲ್ಲಿ ಕೆರೆ ಹಳ್ಳ ಕೊಳ್ಳಗಳು ಬತ್ತಿಹೋಗಿವೆ. ಕಾಡು ಪ್ರಾಣಿಗಳಿಗೆ ಕುಡಿಯಲು ನೀರಿನ ಸಮಸ್ಯೆಯಾಗಿ ನಾಡಿಗೆ ಪ್ರಾಣಿಗಳು ಬರುತ್ತಿವೆ. ಎಂದು ಅರಣ್ಯಾಧಿಕಾರಿಗಳು ತಿಳಿಸಿದರು. ಚಿರತೆ ಹಿಡಿಯಲು ಶೀಘ್ರವೇ ಇನ್ನೊಂದು ಕಡಿಮೆ ಭಾರವುಳ್ಳ ಹಗುರವಾದ ಬೋನ್ ಇಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅರಣ್ಯಾಧಿಕಾರಿ ಪ್ರದೀಪ್ ಪವಾರ್ ತಿಳಿಸಿದರು.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ












Click it and Unblock the Notifications