ಕರ್ನಾಟಕ ವಿಶ್ವವಿದ್ಯಾಲಯದ ಸುತ್ತ ಚಿರತೆ ಓಡಾಟ: ಜಿಲ್ಲಾಡಳಿತದಿಂದ ಎಚ್ಚರಿಕೆ ಸಂದೇಶ
ಧಾರವಾಡ ಮಾರ್ಚ್ 26: ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಮನಸೂರ ಸುತ್ತಮುತ್ತಲೂ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿಕೊಂಡಿದ್ದಾರೆ.
ಕಳೆದ 3-4 ದಿನಗಳಿಂದ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಮನಸೂರ ಸುತ್ತಮುತ್ತಲೂ ಚಿರತೆ ಕಾಣಿಸಿಕೊಂಡು ಮನಸೂರ ಗ್ರಾಮದ ಕುಬೇರಪ್ಪ ಮಡಿವಾಳಪ್ಪ ಅಗಸರ ಎಂಬುವವರ ಆಕಳ ಕರುವನ್ನು ಕೊಂದು ತಿಂದಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನಸೂರ, ಮನಗುಂಡಿ ಹಾಗೂ ಸುತ್ತಲಿನ ಐದಾರು ಗ್ರಾಮಗಳಲ್ಲಿ ಡಂಗುರ ಸಾರುವಂತೆ ಹಾಗೂ ಗ್ರಾಮಸ್ಥರು ಒಬ್ಬಂಟಿಯಾಗಿ ಓಡಾಡದಂತೆ ಜಾಗೃತಿ ಮೂಡಿಸುವಂತೆ ಸ್ಥಳದಲ್ಲಿ ಉಪಸ್ಥಿತರಿದ್ದ, ತಹಶಿಲ್ದಾರ ಡಾ. ದುಂಡಪ್ಪ ಹೂಗಾರ ಹಾಗೂ ವಲಯ ಅರಣ್ಯ ಅಧಿಕಾರಿ ಪ್ರದೀಪ ಪವಾರ ಅವರಿಗೆ ಸೂಚಿಸಿದರಲ್ಲದೆ, ಚಿರತೆ ದಾಳಿಯಿಂದ ಮೃತ ಪಟ್ಟ ಆಕಳಿನ ಮಾಲೀಕರಿಗೆ ಶೀಘ್ರದಲ್ಲಿ ಪರಿಹಾರ ನೀಡುವಂತೆ ಸೂಚಿಸಿದ್ದಾರೆ.
ಚಿರತೆ ಸೆರೆಹಿಡಿಯಲು ಇಡಲಾಗಿದ್ದ ಬೋನ್ ವೀಕ್ಷಿಸಿದ ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದ ಗ್ರಾಮಸ್ಥರನ್ನು ಮಾತನಾಡಿಸಿ, ಅರಣ್ಯ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಚಿರತೆಯ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಗ್ರಾಮಸ್ಥರು ಆತಂಕ ಪಡಬಾರದೆಂದು ತಿಳಿಸಿದರು. ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಒಬ್ಬಂಟಿಯಾಗಿ ತಿರುಗಾಡದಂತೆ ತಿಳಿಸಿದರು.
ಸಾಧ್ಯವಾದಷ್ಟು ದನಕರುಗಳನ್ನು ಮನೆಯ ಹತ್ತಿರವೇ ಇಟ್ಟುಕೊಳ್ಳುವಂತೆ ತಿಳಿಸಿದರು. ಸದ್ಯ ಮನಸೂರ ಗ್ರಾಮದಲ್ಲಿ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಐ.ಪಿ ಸೆಟ್ಗಾಗಿ ಬೆಳಗಿನ ಅವಧಿಯಲ್ಲಿ ವಿದ್ಯುತ್ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಕಾಡು ಪ್ರದೇಶದ ಗ್ರಾಮಗಳಲ್ಲಿ ಹೆಚ್ಚಿನ ಗಮನ ಹರಿಸುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು. ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಕುಡಿಯುವ ನೀರಿಗಾಗಿ ನೀರಿನ ತೊಟ್ಟಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಈ ವರ್ಷ ಬರಗಾಲದಿಂದಾಗಿ ಅರಣ್ಯ ಪ್ರದೇಶದಲ್ಲಿ ಕೆರೆ ಹಳ್ಳ ಕೊಳ್ಳಗಳು ಬತ್ತಿಹೋಗಿವೆ. ಕಾಡು ಪ್ರಾಣಿಗಳಿಗೆ ಕುಡಿಯಲು ನೀರಿನ ಸಮಸ್ಯೆಯಾಗಿ ನಾಡಿಗೆ ಪ್ರಾಣಿಗಳು ಬರುತ್ತಿವೆ. ಎಂದು ಅರಣ್ಯಾಧಿಕಾರಿಗಳು ತಿಳಿಸಿದರು. ಚಿರತೆ ಹಿಡಿಯಲು ಶೀಘ್ರವೇ ಇನ್ನೊಂದು ಕಡಿಮೆ ಭಾರವುಳ್ಳ ಹಗುರವಾದ ಬೋನ್ ಇಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅರಣ್ಯಾಧಿಕಾರಿ ಪ್ರದೀಪ್ ಪವಾರ್ ತಿಳಿಸಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications