Sri Dingaleshwara Swamiji: ಧಾರವಾಡ ಅಭ್ಯರ್ಥಿ ಬದಲಾವಣೆಗೆ ಬಿಜೆಪಿಗೆ ಲಿಂಗಾಯತ ಶ್ರೀಗಳ ಗಡುವು: ಸಭೆಯ ನೀರ್ಣಯಗಳು
ಹುಬ್ಬಳ್ಳಿ, ಮಾರ್ಚ್ 27: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಲಿಂಗಾಯತ ಮಠಾಧೀಶರಿಗೆ ಅಗೌರವ ತೋರಿದ್ದಾರೆ. ಧಾರವಾಡ ಕ್ಷೇತ್ರದಲ್ಲಿ ಲಿಂಗಾಯತ ಮತಗಳ ವಿಭಜನೆ ಆಗುವ ಸಾಧ್ಯತೆ ಇದೆ. ಜೋಶಿಯವರಿಂದ ಕೆಲ ವರ್ಗದವರಿಗೆ ತೊಂದರೆ ಆಗಿದೆ.
ಮುಖ್ಯವಾಗಿ ಲಿಂಗಾಯತ ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಇಳಿಯಲು ಕಾರಣರಾದ ಜೋಶಿ ಅವರನ್ನು ಕ್ಷೇತ್ರದಿಂದ ಬದಲಾಯಿಸಬೇಕು ಎಂದು ಶ್ರೀ ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

ಧಾರವಾಡಕ್ಕೆ ಬಿಜೆಪಿಯಿಂದ ಪ್ರಹ್ಲಾದ್ ಜೋಶಿಯವರು ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಅವರ ವಿರುದ್ಧ ಲಿಂಗಾಯತ ಮಠಾಧೀಶರಾದ ದಿಂಗಾಲೇಶ್ವರ ಶ್ರೀಗಳು ಪಕ್ಷೇತರವಾಗಿ ನಿಲ್ಲುತ್ತಾರೆ ಎನ್ನಲಾಗಿದೆ. ಧಾರವಾಡ ಕ್ಷೇತ್ರದಿಂದ ಜೋಶಿ ಬದಲಾವಣೆಗೆ ಸ್ಪಂದಿಸದಿದ್ದರೆ ಶ್ರೀಗಳು ಸ್ಪರ್ಧಿಸಬೇಕೋ ಬೇಡವೋ ಎಂದು ನಿರ್ಧರಿಸಲು ಇಂದು ಬುಧವಾರ ಹುಬ್ಬಳ್ಳಿ ಶ್ರೀ ಮೂರು ಸಾವಿರ ಮಠದಲ್ಲಿ ಸ್ವಾಮೀಜಿಗಳ ಸಭೆ ನಡೆಯಿತು.
ಸಭೆಯಲ್ಲಿ ಹುಬ್ಬಳ್ಳಿಯಲ್ಲಿ ಮೂರು ಸಾವಿರ ಮಠದ ಮೂಜಗು ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ, ಒಂದಷ್ಟು ಕಾರ್ಯಕರ್ತರು, ಮುಖಂಡರು ಇದ್ದರು. ಸಭೆಯಲ್ಲಿ ದಿಂಗಾಲೇಶ್ವರ ಸ್ವಾಮೀಜಿಯವರು ಧಾರ್ಮಿಕ ಕಾರ್ಯ ಮುಂದುವರೆಸಬೇಕು ಎಂಬ ನೀರ್ಣಯಕ್ಕೆ ಬರಲಾಗಿದೆ.
ಶ್ರೀಗಳಿಂದ ಬಿಜೆಪಿ ವರಿಷ್ಠರಿಗೆ ಮನವಿ
ಇದರೊಂದಿಗೆ ಪ್ರಹ್ಲಾದ್ ಜೋಶಿ ಅವನ್ನು ಕ್ಷೇತ್ರದಿಂದ ಬದಲಾಯಿಸಬೇಕು. ಈ ನಿಟ್ಟಿನಲ್ಲಿ ಗುಡುವು ನೀಡಿರುವ ಸ್ವಾಮೀಜಿಗಳು, ಬಿಜೆಪಿ ವರಿಷ್ಠರಿಗೆ ಮನವಿ ಮಾಡಲಿದ್ದಾರೆ. ಮನವಿ ಪುರಸ್ಕರಿಸದಿದ್ದರೆ, ಏಪ್ರಿಲ್ 2ರಂದು ಮತ್ತೆ ಸಭೆ ಸೇರಿ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಗಳನ್ನು ಕಣಕ್ಕಿಳಿಸಬೇಕೋ, ಬೇಡವೋ ಎಂದು ನಿರ್ಧರಿಸಲು ಸಭೆಯಲ್ಲಿ ಶ್ರೀಗಳು ನಿರ್ಧರಿಸಿದ್ದಾರೆ.
ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿಯಲು ಕಾರಣ
ಇದೇ ವೇಳೆ ಮಾತನಾಡಿದ, ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಅವರು, ಲಿಂಗಾಯತ ನಾಯಕ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ದು ಪ್ರಹ್ಲಾದ್ ಜೋಶಿ ಎಂದು ಅವರು ಗಂಭೀರ ಆರೋಪ ಮಾಡಿದರು.
ಜೋಶಿಯವರು ತಾವೇ ಮುಖ್ಯಮಂತ್ರಿ ಆಗಬೇಕೆಂದು ಜಾಕೆಟ್ ಹೊಲಿಸಿದ್ದರು. ಆದರೆ ಮಠಾಧೀಶರ ಹೋರಾಟದಿಂದಾಗಿ ಅವರ ಜಾಕೆಟ್ ಪಾಕೆಟ್ ಸೇರಿತು. ನಾವು ಯಾರ ಒತ್ತಡಕ್ಕೂ ಒಳಗಾಗುವ ಸ್ವಾಮೀಜಿಗಳಲ್ಲ. ಎರಡನೆಯ ತಾರೀಕಿನ ನಂತರ ಕಾಯ್ದು ನೋಡಿ ಎಂದು ಹೇಳಿದರು. ಅವರ ಈ ಮಾತಿಗೆ ಸಭೆಯಲ್ಲಿದ್ದವರೆಲ್ಲಿ ಕೈ ಎತ್ತಿ ದಿಂಗಾಲೇಶ್ವರ ಸ್ವಾಮೀಜಿಗೆ ಬೆಂಬಲ ಸೂಚಿಸಿದ ದೃಶ್ಯ ಕಂಡು ಬಂತು.
ಮಾಜಿ ಸಿಎಂ ರೀತಿ ಕ್ಷೇತ್ರ ಬದಲಾಯಿಸಿ
ಮಾಜಿ ಮುಖ್ಯಮಂತ್ರಿಗಳಿಗೆ ಬೇರೆ ಕ್ಷೇತ್ರ ಕೊಟ್ಟಂತೆ ಕೇಂದ್ರ ಸಚಿವರಿಗೂ ಕ್ಷೇತ್ರ ಬದಲಾವಣೆ ಮಾಡಬೇಕು. ಈ ಕುರಿತು ಸ್ವಾಮೀಜಿಗಳ ನಿಯೋಗದಿಂದ ಬಿಜೆಪಿ ವರಿಷ್ಠರಿಗೆ ಮನವಿ ಸಲ್ಲಿಸಲಾಗುವುದು ಎಂದು ವಿವರಿಸಿದರು.
ಲಿಂಗಾಯತರ ಕ್ಷೇತ್ರದಲ್ಲಿ ಬ್ರಾಹ್ಮಣರು ಅನಿವಾರ್ಯವಾದರೆ. ಬ್ರಾಹ್ಮಣರು ಪ್ರಭಲವಾಗಿರುವ ಕ್ಷೇತ್ರದಲ್ಲಿ ಲಿಂಗಾಯತನ್ನು ನಿಲ್ಲಿಸಿ ಗೆಲ್ಲಿಸಬೇಕು. ಪ್ರಹ್ಲಾದ್ ಜೋಶಿಯವರು ಸೇಡಿನ ರಾಜಕೀಯ ಮಾಡಿದ್ದಾರೆ. ಅವರಿಂದಾಗಿ ಬೇರೆಬೇರೆ ವರ್ಗದ ಜನರು ತುಳಿತಕ್ಕೆ ಒಳಗಾಗಿದ್ದಾರೆ. ಐಟಿ, ಇಡಿ ಬೆದರಿಕೆ ಹಾಕಿ ದಾಸ್ಯತ್ವಕ್ಕೆ ದಾರಿ ಮಾಡಿದ್ದಾರೆ. ಹಿಂಬಾಲಕರನ್ನು ಎಲ್ಲೆಡೆ ಇಟ್ಟು ಭಯದ ವಾತಾವರಣ ಸೃಷ್ಟಿಸಿದ್ದಾರೆ ಎಂದು ಶ್ರೀಗಳು ಗಂಭೀರ ಆರೋಪ ಮಾಡಿದರು.

ಲಿಂಗಾಯತರ ಅನವತಿ: ಶ್ರೀಗಳಿಗೆ ಅಗೌರವ
ಸಂಸದರಿಗೆ ಫೋನ್ ಮಾಡಿದರೆ ಲಿಂಗಾಯತ ಮುಖಂಡರಿಗೆ ಫೋನ್ ಮಾಡಿ ಎಂದು ಹೇಳಿದ್ದರು. ಈ ಮೂಲಕ ಪ್ರಹ್ಲಾದ್ ಜೋಶಿಯವರ ಸಹೋದರ ಗೋವಿಂದ ಜೋಶಿಯವರು ನನ್ನ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ದೂರಿದರು.
ಧಾರ್ಮಿಕವಾಗಿ ವೀರಶೈವ ಲಿಂಗಾಯತರ ಅವನತಿ ಆಗುತ್ತಿದೆ ಎಂಬುದರ ಕುರಿತು ಸಭೆಯಲ್ಲಿ ಸ್ಪಷ್ಟ ತೀರ್ಮಾನಕ್ಕೆ ಬರಲಾಗಿದೆ.
ಸಾಮಾಜಿಕವಾಗಿ ಸೌಲಭ್ಯಗಳಿಂದ ಸಮಾಜ ವಂಚಿತವಾಗಿದೆ. ಈ ಕುರಿತು ಮುಖಂಡರು ಚರ್ಚಿಸಿದ್ದಾರೆ. ಸಮಾಜದ ಮುಖಂಡರಿಗೆ ಸಾಮಾಜಿಕ, ರಾಜಕೀಯಕ್ಕೆ ಪೆಟ್ಟು ಬಿದ್ದಾಗ ಸ್ವಾಮೀಜಿಗಳು ಮಾತಾಡಬೇಕು ಎಂಬ ನಿರ್ಣಯ ಕೈಗೊಂಡಿದ್ದೇವೆ. ಅದಕ್ಕಾಗಿಯೇ ಉತ್ತರ ಭಾರತದಂತೆ ದಕ್ಷಿಣ ಭಾರತದ ಸ್ವಾಮೀಜಿಗಳು ಚುನಾವಣೆಗೆ ನಿಲ್ಲಬೇಕು ಎಂದು ತಿರ್ಮಾನಿಸಿದ್ದೇವೆ ಎಂದರು.
ಶ್ರೀಗಳು ಯಾವ ಪಕ್ಷದ ವಿರೋಧಿ-ಅಭಿಮಾನಿಗಳಲ್ಲ
ಪ್ರಹ್ಲಾದ್ ಜೋಶಿಯವರು ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಮಾಡಿದ್ದಾರೆ ಎಂದು ಕೆಲವು ಘಟನೆಗಳನ್ನು ಅವರು ನೆನಪಿಸಿದ್ದಾರೆ. ಮಗಳ ಮದುವೆಗೆ ಹೋದರೆ ಅವಮಾನಿಸಿ ಕಳಿಸಿದ್ದಾರೆ. ಸ್ವಾಮೀಜಿಗಳಿಗೆ ಎರಡು ಸಾವಿರ ಕೊಟ್ಟು ಕಳಿಸಿರುವ ಅವರಿಗೆ ಹಣ, ಅಧಿಕಾರದ ಮದ ಏರಿದೆ.
ಒಂದಂತು ನೆನಪಿರಲಿ, ಮಠಾಧೀಶರು ಯಾವ ಪಕ್ಷದ ವಿರೋಧಿಗಳೂ ಅಲ್ಲ, ಅಭಿಮಾನಿಗಳೂ ಅಲ್ಲ. ಪ್ರಹ್ಲಾದ್ ಜೋಶಿಯ ವ್ಯಕ್ತಿತ್ವದ ಕಾರಣ ಅವರನ್ನು ಕೆಳಗೆ ಇಳಿಸುವ ತೀರ್ಮಾನಕ್ಕೆ ಬಂದಿದ್ದೇವೆ. ಅವರನ್ನು ಧಾರವಾಡದಿಂದ ಬೇರೆ ಕ್ಷೇತ್ರಕ್ಕೆ ಇದೇ ತಿಂಗಳ ಮಾರ್ಚ್ 31ರೊಳಗೆ ಕಳಿಸಬೇಕು. ಇಲ್ಲವಾದರೆ. ಇಲ್ಲದಿದ್ದರೆ ಎಪ್ರಿಲ್ 2ರಂದು ಸ್ವಾಮೀಜಿಗಳು ಮತ್ತೆ ಸೇರಿ ನಮ್ಮದೇ ಆದ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications