Hubballi-Dharwad: ಅವಳಿ ನಗರಕ್ಕೆ ಲಘು ರೈಲು ಸಾರಿಗೆ ಯೋಜನೆ, BRTS ಅಂತ್ಯಗೊಳ್ಳುತ್ತಾ?: ಸಂತೋಷ್ ಲಾಡ್
ಬೆಂಗಳೂರು, ಜನವರಿ 06: ರಾಜ್ಯದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಸಂಪರ್ಕ ಕಲ್ಪಿಸುವ 'ಚಿಗರಿ ಬಸ್' ಎಂದು ಕರೆಯಲಾಗುವ ಬಿಆರ್ಟಿಎಸ್ ಬಸ್ ವಿರುದ್ಧ ಒಂದಷ್ಟು ಆರೋಪಗಳು ಕೇಳಿ ಬರುತ್ತಿವೆ. ಇದರ ಬೆನ್ನಲ್ಲೆ ಅವಳಿ ನಗರಗಳ ಮಧ್ಯೆ ಲಘು ರೈಲು ಸಾರಿಗೆ ಯೋಜನೆ ಪರಿಚಯಿಸಲು ಸರ್ಕಾರ ಚಿಂತನೆ ನಡೆಸಿದೆ. ಇದರಿಂದ ಸಾಕಷ್ಟು ಅನುಕೂಲಗಳು ಆಗಲಿವೆ ಎಂದು ಕಾರ್ಮಿಕ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಸಚಿವರು, ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಬಂದ್ ಆಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ. ಅವಳಿ ನಗರದಲ್ಲಿ ಸದ್ಯ ಬಿಆರ್ಟಿಎಸ್ ಬಸ್ಗಳು ಸಂಚರಿಸುತ್ತಿವೆ. ಈ ಸಾರಿಗೆ ಸಂಸ್ಥೆ ವಿರುದ್ಧ ಅನೇಕ ಆರೋಪಗಳು ಕೇಳಿ ಬಂದಿವೆ. BRTS ಸಾರಿಗೆಯು ಸುಮಾರು 40 ಕೋಟಿ ರೂಪಾಯಿ ನಷ್ಟದಲ್ಲಿ ಸಂಚಾರ ಸೇವೆ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಅವಳಿನಗರದಲ್ಲಿ ಲಘು ರೈಲ್ ಸಾರಿಗೆ ಪರಿಚಯಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು.

ಸಚಿವರ ಈ ಮಾತು ಕೇಳುತ್ತಿದ್ದಂತೆ ಚಿಗರಿ ಬಸ್ ಸಂಚಾರ ಅಂತ್ಯವಾಗುತ್ತಾ ಎಂಬ ಪ್ರಶ್ನೆ ಸ್ಥಳೀಯರಲ್ಲಿ ಸೃಷ್ಟಿಯಗಿದೆ. ಚಿಗರಿ ಬಸ್ಗಳಿಂದ ನಿತ್ಯ ಒಂದಲ್ಲಾ ಒಂದು ಕಡೆ ಅಪಘಾತ ಸಂಭವಿಸುತ್ತಿವೆ. ಅಪಘಾತ ಸೇರಿದಂತೆ ಇನ್ನಿತರ ಕಾರಣಗಳಿಂದ ಬಿಆರ್ಟಿಎಸ್ ಹಲವು ಆರೋಪ ಎದುರಿಸುತ್ತಿದೆ. ಹೀಗಾಗಿ ಬಂದ್ ಆಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೆ ಸಚಿವರು ಹೊಸದಾಗಿ ಬಸ್ ಹಾಗೂ ಲಘು ರೈಲು ಸಾರಿಗೆ (ಬಸ್ ರೀತಿ ಉದ್ದದ ಬಸ್ಸುಗಳ ಸೇವೆ) ಅರಂಭಿಸುವ ಬಗ್ಗೆ ಸುಳಿವು ನೀಡಿದ್ದಾರೆ.
ಆರ್ಥಿಕ ಸಂಕಷ್ಟದಲ್ಲಿರುವ BRTS ಹುಬ್ಬಳ್ಳಿ ಧಾರವಾಡ ಜನರಿಗೆ ಅನಕೂಲವಾಗುತ್ತದೆ ಎಂದುಕೊಂಡಿದ್ದ ಜನರಿಗೆ ಇದರಿಂದ ಅನಾನುಕೂಲವಾಗದ್ದೆ ಹೆಚ್ಚು ಎನ್ನುತ್ತಿದ್ದಾರೆ. ಈ ಸಾರಿಗೆ ಬಂದ್ ಮಾಡಿ ಹೊಸ ಸಾರಿಗೆ ವ್ಯವಸ್ಥೆ ಪರಿಚಯಿಸುವ ಚಿಂತನೆ ಸರ್ಕಾರಕ್ಕೆ ಇದೆ ಎಂದು ಖುದ್ದು ಸಚಿವರು ತಿಳಿಸಿದರು.

ಬಿಜೆಪಿ ಹಾಲಿ ಸಂಸದ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಜಾರಿಗೆ ಬಂದಿದ್ದ ಸಾರಿಗೆ ಸೇವೆ ಇದಾಗಿದೆ. ಸಾವಿರಾರು ಕೋಟಿ ವೆಚ್ಚದಲ್ಲಿ ಯೋಜನೆ ಜಾರಿ ಮಾಡಲಾಗಿತ್ತು. ಮೂಲಗಳ ಪ್ರಕಾರ, ಮಾಸಿಕವಾಗಿ 40 ಕೋಟಿ ರೂ. ನಷ್ಟದಲ್ಲಿ ಬಿಆರ್ಟಿಎಸ್ ಸೇವೆ ಒದಗಿಸುತ್ತಿದೆ ಎಂದು ಹೇಳಿದರು.
LRT ಯೋಜನೆ: ಸಕಾರಾತ್ಮಕ ಸ್ಪಂದನೆ
ಅವಳಿ ನಗರದ ಜನರಿಗೆ ಸುರಕ್ಷಿತ ಸಾರಿಗೆ ಸೇವೆ ಒದಗಿಸುವ ಕಾರಣದಿಂದ ಸರ್ಕಾರವು LRT ಯೋಜನೆ ಜಾರಿ ಮಾಡಲು ಮಾತುಕತೆ ನಡೆಯುತ್ತಿದೆ. ಈಗಾಗಲೇ ನಾನು ಪ್ರಾನ್ಸ್ಗೆ ಭೇಟಿ ನೀಡಿ ಅಲ್ಲಿನ ಕಂಪನಿ ಜೊತೆಗೆ ಮಾತುಕತೆ ನಡೆಸಿದ್ದೇನೆ. ಶೇಕಡಾ 50ರಷ್ಟು ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಅವಳಿನಗರದಲ್ಲಿ ಲಘು ವಾಹನ ಸಾರಿಗೆ ಸೇವೆ ಆರಂಭಿಸಲು ಅವರೇ ಬಂಡವಾಳ ಹೂಡಿಕೆ ಮಾಡುತ್ತಾರೆ. ಅವರೇ ಬಸ್ ಸಂಚಾರವನ್ನೂ ನಿರ್ವಹಿಸುತ್ತಾರೆ ಎಂದು ವಿವರಿಸಿದರು.
ಒಂದೇ ಬಸ್ನಲ್ಲಿ 250 ಜನ ಸಂಚಾರ
ಪ್ರಾನ್ಸ್ ಭೇಟಿ ವೇಳೆ ಅಲ್ಲಿನ ಲಘು ಸಂಚಾರ ವಾಹನಗಳನ್ನು ಪರಿಶೀಲಿಸಲಾಗಿತ್ತು. ನಮ್ಮಲ್ಲಿ ಜಾರಿಯಾದರೆ LRT ವಾಹನಗಳಲ್ಲಿ ಸುಮಾರು 250 ಜನ ಹೋಗಬಹುದು. ಇದು ಇಲೆಕ್ಟ್ರಿಕಲ್ ಬಸ್ ಆಗಿರುವ ಕಾರಣಕ್ಕೆ ವಾತಾವರಣವು ಹಾಳಾಗಲ್ಲ. ಪರಿಸರ ಸ್ನೇಹಿ ಸಾರಿಗೆ ಇದಾಗಲಿದೆ. ಹೀಗಾಗಿ ಇಂಥದ್ದೊಂದು ಚಿಂತನೆ ನಡೆಸಿದ್ದೇವೆ ಎಂದರು.
BRTS ಜತೆ ಸಚಿವರ ಸಭೆ
ಜನವರಿಯಲ್ಲಿಯೇ BRTS ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ಈ ಸಾರಿಗೆಯಲ್ಲಿ ಏನೆಲ್ಲ ಬದಲಾವಣೆ ಮಾಡಬೇಕು ಎಂಬುದರ ಕುರಿತು ಸಭೆಯಲ್ಲಿ ಮಾತುಕತೆ ನಡೆಸಲಿದ್ದೇವೆ. ಕಳೆದ ತಿಂಗಳ ನಾನೇ ವೈಯಕ್ತಿಕವಾಗಿ ಫ್ರಾನ್ಸ್ ಗೆ ಹೋಗಿದ್ದೆ. ನಾನು ಅಲ್ಲಿನ ಕಂಪನಿ ಜೊತೆ ಮಾತಾಡಿದ್ದೇನೆ. ಇದೊಂದು ಪಿಪಿಇ ಪ್ರಾಜೆಕ್ಟ್ ಆಗಿದ್ದು, ಇದರ ಸಾಧಕ ಭಾದಕಗಳ ಕುರಿತು ಚರ್ಚೆ ನಡೆಸಿ ಮುಂದಿನ ನಿರ್ಧಾರ ತಿಳಿಸಲಾಗುವುದು ಎಂದರು.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications