ಧಾರವಾಡದಲ್ಲೂ ಜನಿವಾರಕ್ಕೆ ಕತ್ತರಿ: ಸಚಿವ ಸಂತೋಷ ಲಾಡ್ ಹೇಳಿದ್ದೇನು?
ಧಾರವಾಡ, ಏಪ್ರಿಲ್ 21: ಧಾರವಾಡ ಜಿಲ್ಲೆಯ ಇಲ್ಲಿಯ ಹುರಕಡ್ಲಿ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯ ಜನಿವಾರ ಕತ್ತರಿಸಿದ ವಿಷಯವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಸಂಬಂಧ ಎಫ್ಐಆರ್ ಕೂಡ ದಾಖಲಿಸಿಕೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಧಾರವಾಡ ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಂತೋಷ ಲಾಡ್, ನಾವು ಆಧುನಿಕ ಯುಗದಲ್ಲಿದ್ದೇವೆ. ಇದೊಂದು ಗಂಭೀರ ವಿಷಯ. ಯಾರು ಜನಿವಾರ ಕತ್ತರಿಸಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಪೊಲೀಸ್ ಇಲಾಖೆ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತದೆ. ಜಿಲ್ಲಾಡಳಿತಕ್ಕೂ ಈಗಾಗಲೇ ಸೂಚಿಸಲಾಗಿದೆ ಎಂದರು.

ಜನಿವಾರ ಕತ್ತರಿಸಿದ ವಿಷಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆಯನ್ನೇ ನೀಡುತ್ತಿಲ್ಲ ಎನ್ನುವ ಶಾಸಕ ಅರವಿಂದ ಬೆಲ್ಲದ್ ಆರೋಪಕ್ಕೆ ಉತ್ತರ ನೀಡಿದ ಸಚಿವ ಸಂತೋಷ್ ಲಾಡ್, ಅರವಿಂದ ಬೆಲ್ಲದ್ ಅವರೇ ಹೋಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಈ ಬಗ್ಗೆ ಪ್ರತಿಕ್ರಿಯೆ ಕೇಳಲಿ. ಖಂಡಿತಾ ಸಿಎಂ ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳ ಜನಿವಾರ ತೆರವಿಗೆ ಆಗ್ರಹ: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ
ಹುಬ್ಬಳ್ಳಿ: ಕಳೆದ ಕೆಲ ದಿನಗಳ ಹಿಂದೆ ನಡೆದ ಎಂಜಿನಿಯರಿಂಗ್ ಹಾಗೂ ಮೆಡಿಕಲ್ ಕಾಲೇಜು ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣವನ್ನು ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಹುಬ್ಬಳ್ಳಿ ಧಾರವಾಡ ರಾಜ್ಯ ರಸ್ತೆ ತಡೆದು ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸಲಾಯಿತು.

ಹುಬ್ಬಳ್ಳಿಯ ಬಿವಿಬಿ ಕಾಲೇಜು ಬಳಿ ನೂರಾರು ವಿದ್ಯಾರ್ಥಿಗಳು ಒಂದು ಗಂಟೆಗಳ ಕಾಲ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿದ್ದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿ ಧಾರವಾಡ ರಸ್ತೆ ತಡೆದು, ರಾಜ್ಯ ಸರ್ಕಾರ ಒಂದು ಜಾತಿ ಹಾಗೂ ಒಂದು ಧರ್ಮ ಪರವಾಗಿ ಇದೆ ಎಂದು ಕಿಡಿಕಾರಿದರು.
ರಸ್ತೆ ತಡೆ ಮಾಡಿ ಘೋಷಣೆ ಕೂಗಿ ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎನ್ನುವ ರೀತಿ ವರ್ತಿಸುತ್ತಿದೆ. ಕೆಲ ಸಮುದಾಯಗಳನ್ನು ಟಾರ್ಗೆಟ್ ಮಾಡುತ್ತಿದೆ. ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ತರುತ್ತಿದೆ ಎಂದು ಆರೋಪ ಮಾಡಿದರು. ಅಲ್ಲದೇ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ನಿರತ ಎಬಿವಿಪಿ ಸದಸ್ಯರು ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಈ ಪ್ರಕರಣದಲ್ಲಿ ತಪ್ಪಿತಸ್ಥರ ಮೇಲೆ ಕೂಡ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
-
ಜಿಬಿಎ ಚುನಾವಣೆ: ಕರಡು ಮತದಾರರ ಪಟ್ಟಿ ಬಗ್ಗೆರಾಜಕೀಯ ಪ್ರತಿನಿಧಿಗಳ ಆಕ್ಷೇಪಣೆ, ಆಯುಕ್ತರಿಗೆ ಮಹತ್ವದ ಸಲಹೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications