ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಸಿಗಲಿ : ಹೊರಟ್ಟಿ
ಧಾರವಾಡ, ಜುಲೈ 23 : ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದರು. ನಗರದಲ್ಲಿ ನಡೆದ ಕುಮಾರಪಥ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಲಿಂಗಾಯತ ಧರ್ಮದ ಪರ ಬ್ಯಾಟ್ ಮಾಡಿದರು.
'ಸದ್ಯದ ಪರಿಸ್ಥಿತಿ ಕಾಲಘಟ್ಟಕ್ಕೆ ಅನುಗುಣವಾಗಿ ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು. ವೀರಶೈವ ಪದದ ಅರ್ಥ ನನಗೆ ಗೊತ್ತಿಲ್ಲ, ಗೊತ್ತಿರುವ ಭೀಮಣ್ಣ ಖಂಡ್ರೆ, ಶಾಮನೂರ ಶಿವಶಂಕರಪ್ಪ ಅವರಿಗೆ ಅರ್ಥ ಗೊತ್ತಿರಬಹುದು' ಎಂದು ಗೇಲಿ ಮಾಡಿದರು.

ಲಿಂಗಾಯತ ಪ್ರತ್ಯೇಕ ಧರ್ಮವಾದ್ರೆ ಧಾರ್ಮಿಕ ಅಲ್ಪಸಂಖ್ಯಾತ ಮನ್ನಣೆ ದೊರೆಯಲಿದೆ. ಇದರಿಂದ ಸಮಾಜದ ಕೆಳ ಸ್ಥರದ ಜನರಿಗೆ ಅನುಕೂಲವಾಗಲಿದೆ. ಇದಕ್ಕಾಗಿ ಲಿಂಗಾಯಿತ ಸ್ವಾಮೀಜಿಗಳು, ರಾಜಕೀಯ ಮುಖಂಡರುಗಳು ಪಕ್ಷಭೇದ ಮರೆತು ಒಂದಾಗಬೇಕು ಎಂದರು.
'ಲಿಂಗಾಯತ ಪ್ರತ್ಯೇಕ ಧರ್ಮವಲ್ಲ ಅದು ಹಿಂದೂ ಧರ್ಮದಲ್ಲೇ ಇರಬೇಕು' ಎಂದ ಲೇಖಕ ಡಾ.ಚಿದಾನಂದ ಮೂರ್ತಿ ಅವರು ನೀಡಿರುವ ಹೇಳಿಕೆಯನ್ನು ಹೊರಟ್ಟಿ ಖಂಡಿಸಿದರು.
ಲಿಂಗಾಯತ ಶ್ರೀಸಾಮಾನ್ಯನ ಧರ್ಮ. ಬಸವಣ್ಣ ಧರ್ಮಗುರು. ಆದರೆ ಪಂಚಪೀಠಗಳು ಇದನ್ನು ಒಪ್ಪಿಕೊಳ್ಳುವುದಿಲ್ಲ. ಅವರು ಬೇಕಿದ್ದರೆ ವೀರಶೈವಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಪಡೆಯಲಿ. ಆದರೆ, ಲಿಂಗಾಯತ ಧರ್ಮಕ್ಕೆ ತಗಲು ಹಾಕುವುದು ಬೇಡ' ಎಂದು ಮಾತೆ ಮಹಾದೇವಿ ವಾದಿಸಿದ್ದಾರೆ.
ಪ್ರತ್ಯೇಕ ಧರ್ಮಕ್ಕೆ ಅಗ್ರಹಿಸಿ ಬೀದರ್ ನಲ್ಲಿ ಇತ್ತೀಚೆಗೆ ಬೃಹತ್ ಮೆರವಣಿಗೆ ನಡೆಸಲಾಯಿತು. ಮಾತೆ ಮಹಾದೇವಿಗೆ ಪ್ರಚಾರದ ಹುಚ್ಚು ಎಂದು ಡಾ. ಚಿಮೂ ಟೀಕಿಸಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications