ಎಂ.ಎಂ.ಕಲಬುರ್ಗಿ ಹತ್ಯೆ, ಶಂಕಿತರ ರೇಖಾಚಿತ್ರ ಬಿಡುಗಡೆ
ಧಾರವಾಡ, ಸೆ. 02 : ಹಿರಿಯ ಸಂಶೋಧಕ, ಸಾಹಿತಿ ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ಶಂಕಿತ ಆರೋಪಿಗಳ ರೇಖಾಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ತೀವ್ರಗೊಳಿಸಿದ್ದು, ಧಾರವಾಡದಲ್ಲಿನ ಕಲಬುರ್ಗಿ ಅವರ ನಿವಾಸದಲ್ಲಿ ಪರಿಶೀಲನೆ ನಡೆಸುತ್ತಿದೆ.
ಆ.30ರ ಭಾನುವಾರ ಬೆಳಗ್ಗೆ 8.40ರ ಸುಮಾರಿಗೆ ಧಾರವಾಡದ ಕಲ್ಯಾಣ ನಗರದ ನಿವಾದಲ್ಲಿ ಎಂ.ಎಂ.ಕಲಬುರ್ಗಿ ಅವರ ಹತ್ಯೆ ನಡೆದಿತ್ತು. ಮೊದಲು ಧಾರವಾಡ ಪೊಲೀಸರು ತನಿಖೆ ಆರಂಭಿಸಿದ್ದರು. ನಂತರ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು. [ಕಲಬುರ್ಗಿ ಹತ್ಯೆ : ಮಹತ್ವದ ಸುಳಿವು ಲಭ್ಯ]

ಬುಧವಾರ ಹುಬ್ಬಳ್ಳಿ-ಧಾರವಾಡ ಪೊಲೀಸರು ಶಂಕಿತ ಆರೋಪಿಗಳ ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ಪ್ರಾಥಮಿಕ ತನಿಖೆ, ಸಾಕ್ಷಿಗಳ ಹೇಳಿಕೆ ಮುಂತಾದವುಗಳ ಆಧಾರದ ಮೇಲೆ ರೇಖಾಚಿತ್ರವನ್ನು ರಚಿಸಿ ಬಿಡುಗಡೆ ಮಾಡಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಜನರ ಸಹಕಾರ ಕೋರಿದ್ದಾರೆ. [ಹತ್ಯೆ ಕೇಸ್ : ಕೊಲ್ಹಾಪುರಕ್ಕೆ ಸಿಬಿಐ ತಂಡ]
ಸಂಪರ್ಕಿಸಬೇಕಾದ ಸಂಖ್ಯೆ : ಚಿತ್ರದಲ್ಲಿರುವ ಆರೋಪಿಗಳ ಬಗ್ಗೆ ಸುಳಿವು ಸಿಕ್ಕರೆ ಸಾರ್ವಜನಿಕರು ವಿದ್ಯಾಗಿರಿ ಪೊಲೀಸರಿಗೆ ಮಾಹಿತಿ ನೀಡಬಹುದಾಗಿದೆ. ದೂರವಾಣಿ ಸಂಖ್ಯೆಗಳು 0836-2233513, 9480802034. ಹುಬ್ಬಳ್ಳಿ ನಗರ ನಿಯಂತ್ರಣ ಕೊಠಡಿ 0836-2233555
ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ಬಗ್ಗೆ ಕರ್ನಾಟಕದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಕರ್ನಾಟಕ ಸರ್ಕಾರ ಹತ್ಯೆಯ ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ಧರಿಸಿದೆ. ಸರ್ಕಾರ ಈ ಕುರಿತು ಸಿಬಿಐಗೆ ಪತ್ರ ಬರೆದಿದೆ. ಸಿಬಿಐ ತನಿಖೆಗೆ ಒಪ್ಪಿಗೆ ನೀಡಿದರೆ ಪ್ರಕರಣವನ್ನು ಹಸ್ತಾಂತರ ಮಾಡಲಾಗುತ್ತದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications